AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ರಾಜವರ್ಧನ್ ಬಿಗಿ ದಾಳಿಗೆ ತತ್ತರಿಸಿದ ಪಾಕಿಸ್ತಾನ್

Emerging Teams Asia Cup 2023: ಒಂದು ಹಂತದಲ್ಲಿ ಕೇವಲ 78 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನ್ ತಂಡಕ್ಕೆ ಖಾಸಿಂ ಅಕ್ರಮ್ ಹಾಗೂ ಮುಬಾಸಿರ್ ಖಾನ್ ಆಸರೆಯಾದರು.

IND vs PAK: ರಾಜವರ್ಧನ್ ಬಿಗಿ ದಾಳಿಗೆ ತತ್ತರಿಸಿದ ಪಾಕಿಸ್ತಾನ್
Rajvardhan Hangargekar
TV9 Web
| Edited By: |

Updated on: Jul 19, 2023 | 5:58 PM

Share

India A vs Pakistan A: ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಎಮರ್ಜಿಂಗ್ ಏಷ್ಯಾಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ಎ ವಿರುದ್ಧ ಟೀಮ್ ಇಂಡಿಯಾ ಯುವ ವೇಗಿ ರಾಜವರ್ಧನ್ ಹಂಗರ್ಗೇಕರ್ ಬಿಗಿ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಆದರೆ ನಾಲ್ಕನೇ ಓವರ್​ನಲ್ಲೇ ಸೈಮ್ ಅಯ್ಯುಬ್ (0) ವಿಕೆಟ್ ಕಬಳಿಸಿ ರಾಜವರ್ಧನ್ ಹಂಗರ್ಗೇಕರ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಒಮೈರ್ ಯೂಸುಫ್ (0) ಗೂ ಪೆವಿಲಿಯನ್ ಹಾದಿ ತೋರಿಸುವಲ್ಲಿ ರಾಜವರ್ಧನ್ ಯಶಸ್ವಿಯಾದರು.

ಇತ್ತ ಬ್ಯಾಕ್ ಟು ಬ್ಯಾಕ್ 2 ವಿಕೆಟ್ ಕಳೆದುಕೊಂಡ ಪಾಕಿಸ್ತಾನ್ ತಂಡಕ್ಕೆ ಫರ್ಹಾನ್ ಆಸರೆಯಾಗಿ ನಿಂತರು. ಆದರೆ ರಿಯಾನ್ ಪರಾಗ್ ಅವರ ಸ್ಪಿನ್ ಮೋಡಿಗೆ ಫರ್ಹಾನ್ (35) ಕೂಡ ವಿಕೆಟ್ ಒಪ್ಪಿಸಿದರು. ಇನ್ನು 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕಮ್ರಾನ್ ಗುಲಾಮ್​ (15) ಹಾಗೂ ಹಸೀಬುಲ್ಲಾ (27) ರನ್ನು ಮಾನವ್ ಸುತಾರ್ ಪೆವಿಲಿಯನ್​ಗೆ ಕಳುಹಿಸಿದರು.

ಒಂದು ಹಂತದಲ್ಲಿ ಕೇವಲ 78 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನ್ ತಂಡಕ್ಕೆ ಖಾಸಿಂ ಅಕ್ರಮ್ ಹಾಗೂ ಮುಬಾಸಿರ್ ಖಾನ್ ಆಸರೆಯಾದರು. 7ನೇ ವಿಕೆಟ್​ಗೆ ಈ ಜೋಡಿಯು ಅರ್ಧಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ ಮತ್ತೆ ದಾಳಿಗಿಳಿದ ರಾಜವರ್ಧನ್ ಹಂಗರ್ಗೇಕರ್ ಖಾಸಿಂ ಅಕ್ರಮ್​ (48) ರನ್ನು ಔಟ್ ಮಾಡಿದರು. ಇದರ ಬೆನ್ನಲ್ಲೇ ನಿಶಾಂತ್ ಸಿಂಧು ಎಸೆತದಲ್ಲಿ ಮುಬಾಸಿರ್ ಖಾನ್ (28) ಕೂಡ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು.

ಇನ್ನು ವಾಸಿಂ ಜೂನಿಯರ್ (8) ಹಾಗೂ ಶಹನವಾಝ್ ದಹನಿ (4) ವಿಕೆಟ್ ಉರುಳಿಸಿದ ರಾಜವರ್ಧನ್ ಹಂಗರ್ಗೇಕರ್ ಪಾಕಿಸ್ತಾನ್ ತಂಡವನ್ನು 48 ಓವರ್​ಗಳಲ್ಲಿ 205 ರನ್​ಗಳಿಗೆ ಆಲೌಟ್ ಮಾಡಿದರು.

ಟೀಮ್ ಇಂಡಿಯಾ ಪರ 8 ಓವರ್​ಗಳಲ್ಲಿ ಕೇವಲ 42 ರನ್​ ನೀಡಿ ರಾಜವರ್ಧನ್ ಹಂಗರ್ಗೇಕರ್ 5 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಮಾನವ್ ಸುತಾರ್ 3 ವಿಕೆಟ್ ಕಬಳಿಸಿದರೆ, ನಿಶಾಂತ್ ಸಿಂಧು ಹಾಗೂ ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್ ಪಡೆದರು. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲು 50 ಓವರ್​ಗಳಲ್ಲಿ 206 ರನ್​ಗಳಿಸಬೇಕಿದೆ.

ಪಾಕಿಸ್ತಾನ್ ಎ ಪ್ಲೇಯಿಂಗ್ 11: ಸೈಮ್ ಅಯೂಬ್ , ಹಸೀಬುಲ್ಲಾ ಖಾನ್ , ಮೊಹಮ್ಮದ್ ಹ್ಯಾರಿಸ್ (ನಾಯಕ) , ಕಮ್ರಾನ್ ಗುಲಾಮ್ , ಸಾಹಿಬ್ಜಾದಾ ಫರ್ಹಾನ್ , ಒಮೈರ್ ಯೂಸುಫ್ , ಖಾಸಿಮ್ ಅಕ್ರಮ್ , ಮುಬಾಸಿರ್ ಖಾನ್ , ಮೆಹ್ರಾನ್ ಮುಮ್ತಾಜ್ , ಮೊಹಮ್ಮದ್ ವಾಸಿಮ್ ಜೂನಿಯರ್ , ಶಾನವಾಜ್ ದಹಾನಿ.

ಇದನ್ನೂ ಓದಿ: Yuvraj Singh: ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲೋದು ಡೌಟ್: ಯುವರಾಜ್ ಸಿಂಗ್

ಭಾರತ ಎ ಪ್ಲೇಯಿಂಗ್ 11: ಸಾಯಿ ಸುದರ್ಶನ್ , ಅಭಿಷೇಕ್ ಶರ್ಮಾ , ನಿಕಿನ್ ಜೋಸ್ , ಯಶ್ ಧುಲ್ (ನಾಯಕ) , ರಿಯಾನ್ ಪರಾಗ್ , ನಿಶಾಂತ್ ಸಿಂಧು , ಧ್ರುವ್ ಜುರೆಲ್ ( ​​ವಿಕೆಟ್ ಕೀಪರ್ ) , ಮಾನವ್ ಸುತಾರ್ , ಹರ್ಷಿತ್ ರಾಣಾ , ನಿತೀಶ್ ರೆಡ್ಡಿ , ರಾಜವರ್ಧನ್ ಹಂಗರ್ಗೇಕರ್.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?