AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು?

Pakistan's T20 WC Semis Dream: ಇಂಗ್ಲೆಂಡ್ ವಿರುದ್ಧದ ನ್ಯೂಜಿಲೆಂಡ್ ಸೋಲು ಪಾಕಿಸ್ತಾನದ ಟಿ20 ವಿಶ್ವಕಪ್ ಸೆಮಿಫೈನಲ್ ಕನಸುಗಳಿಗೆ ಜೀವ ತುಂಬಿದೆ. ಇಂಗ್ಲೆಂಡ್ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದು, ಈಗ ಪಾಕಿಸ್ತಾನಕ್ಕೆ ಶ್ರೀಲಂಕಾ ವಿರುದ್ಧ ಕೊನೆಯ ಸೂಪರ್ 8 ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯ. ಸೆಮಿಫೈನಲ್ ಪ್ರವೇಶಿಸಲು, ಪಾಕಿಸ್ತಾನ ನ್ಯೂಜಿಲೆಂಡ್‌ನ ಉತ್ತಮ ನೆಟ್ ರನ್ ರೇಟ್ ಅನ್ನು ಮೀರಿಸಬೇಕಿದೆ, ಇದು ದೊಡ್ಡ ಸವಾಲಾಗಿದೆ.

PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು?
Pak Team
ಪೃಥ್ವಿಶಂಕರ
|

Updated on:Feb 27, 2026 | 11:07 PM

Share

ಟಿ20 ವಿಶ್ವಕಪ್‌ನ (T20 World Cup) ಸೂಪರ್ 8 ಸುತ್ತಿನ ಗ್ರೂಪ್ 2 ರಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಫಲಿತಾಂಶವು ಕಮರಿ ಹೋಗಿದ್ದ ಪಾಕಿಸ್ತಾನದ ಕನಸಿಗೆ ಜೀವ ತುಂಬಿದೆ. ಕೊನೆಯವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್, ತಾನು ಮಾಡಿದ ತಪ್ಪುಗಳಿಂದ ಸೋಲಿನ ಬೆಲೆ ತೆತ್ತಬೇಕಾಯಿತು. ಇತ್ತ ಕೊನೆಯ ಓವರ್​ನಲ್ಲಿ ಪಂದ್ಯ ಗೆದ್ದು ಅಜೇಯ ತಂಡವಾಗಿ ಇಂಗ್ಲೆಂಡ್‌ ಸೆಮಿಫೈನಲ್‌ ಪ್ರವೇಶಿಸಿತು. ಇಂಗ್ಲೆಂಡ್‌ ತಂಡದ ಈ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಜೀವಂತವಾಗಿದೆ. ಆದಾಗ್ಯೂ ಪಾಕಿಸ್ತಾನಕ್ಕೆ ಸೆಮಿಫೈನಲ್‌ ತಲುಪುವುದು ಅಷ್ಟು ಸುಲಭವಾಗಿಲ್ಲ. ಇದಕ್ಕಾಗಿ ಪಾಕಿಸ್ತಾನ, ಶ್ರೀಲಂಕಾವನ್ನು (Sri Lanka vs Pakistan) ಅವರ ತವರು ನೆಲದಲ್ಲಿ ಮಣಿಸಬೇಕಾಗಿದೆ. ಕೇವಲ ಸೋಲಿಸಿದರೆ ಮಾತ್ರ ಸಾಕಾಗದು ಬದಲಿಗೆ ಪಾಕಿಸ್ತಾನ ಗೆಲ್ಲುವುದರ ಜೊತೆಗೆ ಅದರ ನೆಟ್ ರನ್​ರೇಟ್ ಅನ್ನು ನ್ಯೂಜಿಲೆಂಡ್​ಗಿಂತ ಉತ್ತಮಗೊಳಿಸಬೇಕಿದೆ.

ವಾಸ್ತವವಾಗಿ ಪ್ರೇಮದಾಸ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಮೇಲುಗೈ ಸಾಧಿಸಿತ್ತು. ಇಂಗ್ಲೆಂಡ್ ಗೆಲ್ಲಲು ಕೊನೆಯ 18 ಎಸೆತಗಳಲ್ಲಿ 43 ರನ್‌ಗಳ ಅಗತ್ಯವಿತ್ತು. ಆದರೆ 18 ನೇ ಓವರ್ ನ್ಯೂಜಿಲೆಂಡ್‌ ಪಾಲಿಗೆ ದುಬಾರಿಯಾಯಿತು. ಗ್ಲೆನ್ ಪಿಲಿಪ್ಸ್ ಬೌಲ್ ಮಾಡಿದ ಈ ಓವರ್‌ನಲ್ಲಿ 22 ರನ್‌ಗಳು ಬಂದವು. ಇದರ ಪರಿಣಾಮವಾಗಿ ಇಂಗ್ಲೆಂಡ್ 4 ವಿಕೆಟ್‌ಗಳು ಮತ್ತು ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡಿತು.

ಕಿವೀಸ್​ಗೆ ಈಗಲೂ ಇದೇ ಅವಕಾಶ

ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ಆಡಿರುವ 3 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು 6 ಅಂಕಗಳೊಂದಿಗೆ ಸೆಮಿಫೈನಲ್ ತಲುಪಿದೆ. ಮತ್ತೊಂದೆಡೆ, ಶ್ರೀಲಂಕಾ 2 ಪಂದ್ಯಗಳಲ್ಲಿ ಸೋತು ಸೆಮಿಫೈನಲ್‌ ರೇಸ್​ನಿಂದ ಹೊರಬಿದ್ದಿದೆ. ಈಗ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಗುಂಪು 2 ರಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶವನ್ನು ಹೊಂದಿವೆ. ಆದಾಗ್ಯೂ ನ್ಯೂಜಿಲೆಂಡ್ ಸೂಪರ್ 8 ಸುತ್ತಿನ ಎಲ್ಲಾ ಮೂರು ಪಂದ್ಯಗಳನ್ನು ಆಡಿದ್ದು, ಆಡಿರುವ 3 ಪಂದ್ಯಗಳಲ್ಲಿ ಒಂದನ್ನು ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಉಳಿದಂತೆ 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ನ್ಯೂಜಿಲೆಂಡ್ 3 ಅಂಕಗಳು ಮತ್ತು +1.390 ನೆಟ್​ ರನ್​ರೇಟ್​ನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ENG vs NZ: ಗೆಲ್ಲುವ ಪಂದ್ಯ ಕೈಚೆಲ್ಲಿದ ನ್ಯೂಜಿಲೆಂಡ್; ಪಾಕ್ ಸೆಮೀಸ್ ಆಸೆ ಜೀವಂತ

ಸೆಮೀಸ್​ಗೇರಲು ಪಾಕ್ ಏನು ಮಾಡಬೇಕು?

ಇತ್ತ ಇಂಗ್ಲೆಂಡ್‌ ಗೆಲುವಿನಿಂದ ಸೆಮಿಫೈನಲ್​ಗೇರುವ ಅವಕಾಶ ಪಡೆದುಕೊಂಡಿರುವ ಪಾಕಿಸ್ತಾನ ತನ್ನ ಕೊನೆಯ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸುತ್ತಿದೆ. ಶ್ರೀಲಂಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ, ಅದರ ಬಳಿಯೂ 3 ಅಂಕಗಳು ಇರಲಿವೆ. ಪ್ರಸ್ತುತ ಪಾಕಿಸ್ತಾನ 2 ಪಂದ್ಯಗಳನ್ನಾಡಿದ್ದು, ಅದರಲ್ಲಿ ಒಂದನ್ನು ಸೋತಿದ್ದು, ಉಳಿದ ಒಂದು ಪಂದ್ಯ ಡ್ರಾ ಆಗಿದೆ. ಆದ್ದರಿಂದ 1 ಪಾಯಿಂಟ್ ಜೊತೆಗೆ -0.461 ನೆಟ್ ರನ್​ರೇಟ್ ಹೊಂದಿದೆ. ಪಾಕಿಸ್ತಾನ ಈಗ ಗೆಲುವಿನ ಜೊತೆಗೆ ನೆಟ್ ರನ್ ರೇಟ್​ ಅನ್ನು ಸಹ ಸುಧಾರಿಸಬೇಕಾಗಿದೆ. ಹೀಗಾಗಿ ಪಾಕಿಸ್ತಾನ ನೆಟ್ ರನ್ ರೇಟ್​ ಸುಧಾರಿಸಬೇಕೆಂದರೆ ಮೊದಲು ಬ್ಯಾಟಿಂಗ್ ಮಾಡಿದರೆ ಪಂದ್ಯವನ್ನು 65 ರನ್‌ಗಳಿಂದ ಗೆಲ್ಲಬೇಕಾಗುತ್ತದೆ. ಒಂದು ವೇಳೆ ಮೊದಲು ಬೌಲಿಂಗ್ ಮಾಡಿದರೆ 13.2 ಓವರ್‌ಗಳಲ್ಲಿ ಲಂಕಾ ನೀಡುವ ಗುರಿಯನ್ನು ಬೆನ್ನಟ್ಟಬೇಕಾಗುತ್ತದೆ. ಈ ಎರಡನ್ನೂ ಮಾಡುವಲ್ಲಿ ಪಾಕ್ ಎಡವಿದರೆ, ನ್ಯೂಜಿಲೆಂಡ್ ಉತ್ತಮ ನೆಟ್ ರನ್​ರೇಟ್ ಆಧಾರದ ಮೇಲೆ ಸೆಮಿಫೈನಲ್​ಗೇರಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Fri, 27 February 26

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್