AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ಗೂ ಮುನ್ನ ಬದಲಾದ ಇಂಗ್ಲೆಂಡ್ ನಾಯಕ! ಯುವ ಆಟಗಾರನಿಗೆ ತಂಡದ ನಾಯಕತ್ವ

ENG v IRE: ವಿಶ್ವಕಪ್‌ ದೃಷ್ಟಿಯಿಂದ ಇಂಗ್ಲೆಂಡ್ ತಂಡದಲ್ಲಿ ಅನುಭವಿ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಐರ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಜೊತೆಗೆ ತಂಡದ ನಾಯಕತ್ವವನ್ನು ಸಹ ಹೊಸಬರಿಗೆ ನೀಡಲಾಗಿದೆ.

ವಿಶ್ವಕಪ್​ಗೂ ಮುನ್ನ ಬದಲಾದ ಇಂಗ್ಲೆಂಡ್ ನಾಯಕ! ಯುವ ಆಟಗಾರನಿಗೆ ತಂಡದ ನಾಯಕತ್ವ
ಇಂಗ್ಲೆಂಡ್ ತಂಡ
ಪೃಥ್ವಿಶಂಕರ
|

Updated on: Sep 08, 2023 | 12:57 PM

Share

ಈ ತಿಂಗಳ ಕೊನೆಯಲ್ಲಿ ನಡೆಯಲ್ಲಿರುವ ಐರ್ಲೆಂಡ್ (England vs Ireland) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಇಂಗ್ಲೆಂಡ್‌ ಕ್ರಿಕೆಟ್ ಮಂಡಳಿ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಸರಣಿಯನ್ನಾಡುತ್ತಿರುವ ಇಂಗ್ಲೆಂಡ್ ಪಡೆ, ಈ ಸರಣಿ ಮುಗಿದ ಬಳಿಕ ಐರ್ಲೆಂಡ್​ಗೆ ಏಕದಿನ ಸರಣಿಯಲ್ಲಿ ಆತಿಥ್ಯವಹಿಸುತ್ತಿದೆ. ವಿಶ್ವಕಪ್‌ (ODI World Cup) ದೃಷ್ಟಿಯಿಂದ ಇಂಗ್ಲೆಂಡ್ ತಂಡದಲ್ಲಿ ಅನುಭವಿ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಐರ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಜೊತೆಗೆ ತಂಡದ ನಾಯಕತ್ವವನ್ನು ಸಹ ಹೊಸಬರಿಗೆ ನೀಡಲಾಗಿದೆ.

ಐರ್ಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಝಾಕ್ ಕ್ರಾಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಬೆನ್ ಡಕೆಟ್​ಗೆ ತಂಡದ ಉಪನಾಯಕತ್ವ ನೀಡಲಾಗಿದೆ. ಸೆಪ್ಟೆಂಬರ್ 20 ರಿಂದ ಈ ಸರಣಿ ಆರಂಭವಾಗುತ್ತಿದ್ದು, ಮೊದಲ ಪಂದ್ಯ ಹೆಡಿಂಗ್ಲಿ ಮೈದಾನದಲ್ಲಿ ನಡೆಯಲ್ಲಿದೆ. ಇನ್ನು ಅನುಭವಿ ಆಟಗಾರರ ಉಪಸ್ಥಿತಿಯಲ್ಲಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಹೀಗಾಗಿ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕರಾಗಿ ಆಯ್ಕೆಯಾಗಿರುವ ಕ್ರಾಲಿ ಬರೋಬ್ಬರಿ ಎರಡು ವರ್ಷಗಳ ನಂತರ ಏಕದಿನ ಕ್ರಿಕೆಟ್‌ಗೆ ಮರಳುತ್ತಿದ್ದಾರೆ.

ಇಂಗ್ಲೆಂಡ್ ಅಲ್ಲ..! ವಿಶ್ವಕಪ್ ಗೆಲ್ಲುವ ತನ್ನ ನೆಚ್ಚಿನ ತಂಡವನ್ನು ಹೆಸರಿಸಿದ ಇಯಾನ್ ಮಾರ್ಗನ್

ಮೂವರು ಹೊಸಬರು

25 ವರ್ಷ ವಯಸ್ಸಿನ ಕ್ರಾಲಿ ಕೊನೆಯದಾಗಿ 2021 ರಲ್ಲಿ ಈ ಸ್ವರೂಪದಲ್ಲಿ ಆಡಿದ್ದರು. ಇವರೊಂದಿಗೆ ತಂಡದಲ್ಲಿ ಮೂವರು ಅನ್‌ಕ್ಯಾಪ್ಡ್ ಆಟಗಾರರು ಆಯ್ಕೆಯಾಗಿದ್ದು, ಅವರಲ್ಲಿ ಬ್ಯಾಟರ್ ಸ್ಯಾಮ್ ಹೈನ್, ವಿಕೆಟ್ ಕೀಪರ್-ಬ್ಯಾಟರ್ ಜೇಮೀ ಸ್ಮಿತ್ ಮತ್ತು ವೇಗಿ ಜಾರ್ಜ್ ಸ್ಕ್ರಿಮ್‌ಶಾ ಸೇರಿದ್ದಾರೆ.

ವೈಟಾಲಿಟಿ ಬ್ಲಾಸ್ಟ್ ಮತ್ತು ದಿ ಹಂಡ್ರೆಡ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಸ್ಯಾಮ್ ಹೈನ್​ಗೆ ಮೊದಲ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಸಿಕ್ಕಿದ್ದು, ಇವರೊಂದಿಗೆ ದಿ ಹಂಡ್ರೆಡ್‌ನಲ್ಲಿ ಏಳು ಪಂದ್ಯಗಳಲ್ಲಿ 160.50 ಸ್ಟ್ರೈಕ್ ರೇಟ್‌ನಲ್ಲಿ 191 ರನ್ ಕಲೆಹಾಕಿದ್ದ ಜೇಮೀ ಸ್ಮಿತ್​ಗೂ ರಾಷ್ಟ್ರೀಯ ತಂಡದ ಕದ ತೆರೆದಿದೆ. ಹಾಗೆಯೇ ವೈಟಾಲಿಟಿ ಬ್ಲಾಸ್ಟ್‌ನಲ್ಲಿ ಡರ್ಬಿಶೈರ್‌ ತಂಡದ ಪರ ಆಡಿದ 14 ಪಂದ್ಯಗಳಲ್ಲಿ 20 ವಿಕೆಟ್‌ಗಳನ್ನು ಉರುಳಿಸಿದ್ದ ಬಲಗೈ ವೇಗಿ ಸ್ಕ್ರಿಮ್‌ಶಾ ಕೂಡ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

ಏಕದಿನ ಸರಣಿಗೆ ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ (ನಾಯಕ), ರೆಹಾನ್ ಅಹ್ಮದ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಸ್ಯಾಮ್ ಹೈನ್, ವಿಲ್ ಜ್ಯಾಕ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಫಿಲ್ ಸಾಲ್ಟ್, ಜಾರ್ಜ್ ಸ್ಕ್ರಿಮ್‌ಶಾ, ಜೇಮೀ ಸ್ಮಿತ್, ಲ್ಯೂಕ್ ವುಡ್.

ಏಕದಿನ ಸರಣಿ ವೇಳಾಪಟ್ಟಿ

ಮೊದಲನೇ ಏಕದಿನ ಪಂದ್ಯ: 20 ಸೆಪ್ಟೆಂಬರ್, ಹೆಡಿಂಗ್ಲಿ.

ಎರಡನೇ ಏಕದಿನ ಪಂದ್ಯ: 23 ಸೆಪ್ಟೆಂಬರ್, ಟ್ರೆಂಟ್ ಬ್ರಿಡ್ಜ್.

ಮೂರನೇ ಏಕದಿನ ಪಂದ್ಯ: 26 ಸೆಪ್ಟೆಂಬರ್, ಬ್ರಿಸ್ಟಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ