ENG vs IND: ಮಂಡಳಿಯ ಸಲಹೆ ತಿರಸ್ಕರಿಸಿದ ರೋಹಿತ್ ಶರ್ಮಾ ಮೇಲೆ ಕೆಂಡಕಾರಿದ ಬಿಸಿಸಿಐ..!

ENG vs IND: ಭಾರತ-ಇಂಗ್ಲೆಂಡ್ ಪ್ರವಾಸದಲ್ಲಿರುವ ಆಟಗಾರರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೋಪಗೊಂಡಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಆಟಗಾರರು ಮುಕ್ತವಾಗಿ ಬೀದಿಗಳಲ್ಲಿ ತಿರುಗಾಡುತ್ತಿದ್ದು, ಜತೆಗೆ ಅಭಿಮಾನಿಗಳೊಂದಿಗೆ ಫೋಟೋ ಕೂಡ ತೆಗೆಸಿಕೊಂಡಿದ್ದಾರೆ.

ENG vs IND: ಮಂಡಳಿಯ ಸಲಹೆ ತಿರಸ್ಕರಿಸಿದ ರೋಹಿತ್ ಶರ್ಮಾ ಮೇಲೆ ಕೆಂಡಕಾರಿದ ಬಿಸಿಸಿಐ..!
ರೋಹಿತ್ ಶರ್ಮಾ
Follow us
| Updated By: ಪೃಥ್ವಿಶಂಕರ

Updated on:Jun 27, 2022 | 3:33 PM

ಭಾರತ-ಇಂಗ್ಲೆಂಡ್ ಪ್ರವಾಸ (India-England tour)ದಲ್ಲಿರುವ ಆಟಗಾರರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕೋಪಗೊಂಡಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಆಟಗಾರರು ಮುಕ್ತವಾಗಿ ಬೀದಿಗಳಲ್ಲಿ ತಿರುಗಾಡುತ್ತಿದ್ದು, ಜತೆಗೆ ಅಭಿಮಾನಿಗಳೊಂದಿಗೆ ಫೋಟೋ ಕೂಡ ತೆಗೆಸಿಕೊಂಡಿದ್ದಾರೆ. ಈ ಮೂಲಕ ಮಂಡಳಿ ಹಾಗೂ ವೈದ್ಯಕೀಯ ತಂಡ ನೀಡಿದ ಸಲಹೆಯನ್ನು ಆಟಗಾರರು ನಿರ್ಲಕ್ಷಿಸಿದಂತಿದೆ. ಇದೇ ಬಿಸಿಸಿಐ ಅಸಮಾಧಾನಕ್ಕೆ ನಿಜವಾದ ಕಾರಣ. ಆಟಗಾರರ ಬೇಜವಬ್ದಾರಿತನದಿಂದ ಕೊರೊನಾ ಸೋಂಕು ಈಗ ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದೆ. ಇದರ ಫಲವಾಗಿ ತಂಡದ ನಾಯಕ ರೋಹಿತ್​ಗೆ (Rohit Sharma) ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್​ನಲ್ಲಿ ಅವರು ಆಡುವುದು ಅನುಮಾನವಾಗಿದೆ. ಈ ಬಗ್ಗೆ ಅಸಮಾದಾನ ಹೊರಹಾಕಿರುವ ಬಿಸಿಸಿಐ ಅಧಿಕಾರಿಯೊಬ್ಬರು, “ಇದು ನಮ್ಮ ಗಮನಕ್ಕೆ ಬಂದಿತು. ಅವರಿಗೆ ಅಪಾಯಗಳ ಬಗ್ಗೆ ಮುನ್ನೇಚ್ಚರಿಕೆಯನ್ನು ಸಹ ನೀಡಲಾಗಿತ್ತು. ಅವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ಗಳಿಲ್ಲದೆ ಜನರೊಂದಿಗೆ ಬೆರೆಯಬೇಡಿ ಎಂದು ಕೂಡ ತಿಳಿಸಲಾಗಿತ್ತು. ಆದರೆ ನೀವು ನೋಡುವಂತೆ, ರೋಹಿತ್, ವಿರಾಟ್, ರಿಷಬ್ ಮತ್ತು ಬಹುತೇಕ ಎಲ್ಲರೂ ಈ ಮಾತನ್ನು ಕಡೆಗಣಿಸಿದ್ದಾರೆ. ಇದರ ಫಲವೆಂಬಂಗತೆ ಈಗ ರೋಹಿತ್ ಸೋಂಕಿಗೆ ತುತ್ತಾಗಿದ್ದಾರೆ ಎಂದು BCCI ಅಧಿಕಾರಿಯೊಬ್ಬರು InsideSport ಗೆ ತಿಳಿಸಿದ್ದಾರೆ.

ರೋಹಿತ್ ಆಡುತ್ತಾರಾ?

ಕಳೆದ ವಾರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಶಾಪಿಂಗ್‌ಗೆ ತೆರಳಿದ್ದರು. ಈ ವೇಳೆ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದರು. ಆಗಲೂ ಮಾಸ್ಕ್ ಇಲ್ಲದೆ ತಿರುಗಾಡುತ್ತಿರುವ ಬಗ್ಗೆ ಬಿಸಿಸಿಐ ಕಳವಳ ವ್ಯಕ್ತಪಡಿಸಿತ್ತು. ಲೀಸೆಸ್ಟರ್‌ಶೈರ್ ವಿರುದ್ಧದ ಅಭ್ಯಾಸ ಪಂದ್ಯದ ಮೂರನೇ ದಿನದಂದು ರೋಹಿತ್ ಶರ್ಮಾ ಅವರ ಕೊರೊನಾ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ನಿಯಮದಂತೆ, ರೋಹಿತ್ ಲೀಸೆಸ್ಟರ್‌ಶೈರ್‌ನ ಹೋಟೆಲ್‌ನಲ್ಲಿ ಐದು ದಿನಗಳ ಕಾಲ ಪ್ರತ್ಯೇಕವಾಗಿರಬೇಕಾಗುತ್ತದೆ. ಅವರ RT PCR ಪರೀಕ್ಷೆಯು ಜೂನ್ 30 ರಂದು ಆರನೇ ದಿನದಂದು ನೆಗೆಟಿವ್ ಬರಬೇಕು, ಆಗ ಮಾತ್ರ ಅವರು ಇಂಗ್ಲೆಂಡ್ ವಿರುದ್ಧ ಪ್ರಾರಂಭವಾಗುವ ಟೆಸ್ಟ್ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತದೆ.

ಇದನ್ನೂ ಓದಿ
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!
Image
India vs Ireland 1st T20 Playing 11: ಮೊದಲ ಟಿ20 ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
Image
IND vs IRE: ಟೀಂ ಇಂಡಿಯಾಕ್ಕೆ ಜಮ್ಮು ಎಕ್ಸ್‌ಪ್ರೆಸ್ ಪ್ರವೇಶ; ಉಮ್ರಾನ್ ಮಲಿಕ್‌ಗೆ ಚೊಚ್ಚಲ ಅವಕಾಶ

ಇದನ್ನೂ ಓದಿ: T20I World Record: ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲಿದೆ ಭಾರತ; ಹೊಸ ದಾಖಲೆಯತ್ತ ರೋಹಿತ್ ಸೇನೆ!

ರೋಹಿತ್ ಬದಲು ಯಾರಿಗೆ ನಾಯಕತ್ವ?

ಇಲ್ಲವಾದಲ್ಲಿ ಅವರ ಸ್ಥಾನಕ್ಕೆ ಭಾರತ ಮತ್ತೊಬ್ಬ ನಾಯಕನನ್ನು ಆಯ್ಕೆ ಮಾಡಬೇಕಾಗುತ್ತದೆ. ಹೀಗಾಗಿ ಬಿಸಿಸಿಐ ಬುಮ್ರಾಗೆ ನಾಯಕನಪಟ್ಟ ಕಟ್ಟಲಲಿದೆ ಎಂಬ ವದಂತಿ ಈಗ ಎಲ್ಲೆಡೆ ಕೇಳಲಾರಂಭಿಸಿದೆ. ಐದನೇ ಟೆಸ್ಟ್ ಕಳೆದ ವರ್ಷ ಸೆಪ್ಟೆಂಬರ್ 10 ರಿಂದ 14 ರ ನಡುವೆ ನಡೆಯಬೇಕಿತ್ತು. ಆದರೆ ಭಾರತ ತಂಡದಲ್ಲಿ ಕೋವಿಡ್ ಸೋಂಕಿನಿಂದಾಗಿ ವಿರಾಟ್ ಮತ್ತು ರೋಹಿತ್ ಇಬ್ಬರೂ ಪಂದ್ಯವನ್ನು ಆಡಲು ನಿರಾಕರಿಸಿದರು. ಐದನೇ ಟೆಸ್ಟ್ ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಟೆಸ್ಟ್ ಸರಣಿಯ ನಂತರ ಮೂರು ODI ಮತ್ತು ಮೂರು T20I ಪಂದ್ಯಗಳ ಸರಣಿ ನಡೆಯಲಿದೆ.

Published On - 3:33 pm, Mon, 27 June 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ