ENG vs IND: ನಾಯಕತ್ವ ಬಿಟ್ಟರೂ ಜವಬ್ದಾರಿ ಮರೆಯದ ಕೊಹ್ಲಿ; ಪಂದ್ಯಕ್ಕೂ ಮುನ್ನ ಆಟಗಾರರಿಗೆ ಗೆಲುವಿನ ಟಿಪ್ಸ್ ನೀಡಿದ ವಿರಾಟ್

Virat Kohli: ವಿರಾಟ್ ನಾಯಕತ್ವದಲ್ಲಿ ಆಡಿದ ಅದೇ ಸರಣಿಯ ಉಳಿದಿರುವ ಏಕೈಕ ಟೆಸ್ಟ್ ಈಗ ನಡೆಯುತ್ತಿದೆ. ಆದರೆ, ಈ ಮಧ್ಯೆ ವಿರಾಟ್ ಕೊಹ್ಲಿ ಕೈಯಿಂದ ಟೀಂ ಇಂಡಿಯಾ ನಾಯಕತ್ವವನ್ನು ರೋಹಿತ್ ಶರ್ಮಾಗೆ ಹಸ್ತಾಂತರಿಸುವ ದೊಡ್ಡ ಬದಲಾವಣೆಯಾಗಿದೆ.

ENG vs IND: ನಾಯಕತ್ವ ಬಿಟ್ಟರೂ ಜವಬ್ದಾರಿ ಮರೆಯದ ಕೊಹ್ಲಿ; ಪಂದ್ಯಕ್ಕೂ ಮುನ್ನ ಆಟಗಾರರಿಗೆ ಗೆಲುವಿನ ಟಿಪ್ಸ್ ನೀಡಿದ ವಿರಾಟ್
ಆಟಗಾರರಿಗೆ ಟಿಪ್ಸ್ ನೀಡಿದ ಕೊಹ್ಲಿ
Follow us
| Updated By: ಪೃಥ್ವಿಶಂಕರ

Updated on:Jun 22, 2022 | 12:32 PM

ನಾಯಕತ್ವ ಹೋದರೆ ವಿರಾಟ್ ಕೊಹ್ಲಿ (Virat Kohli)ಗೆ ಬೆಲೆ ಇಲ್ಲ ಎಂದು ಹೇಳಿದ್ಯಾರು? ಟೀಮ್ ಇಂಡಿಯಾದಲ್ಲಿ ಅವರ ಪ್ರಬಲ ಉಪಸ್ಥಿತಿ ಎಂದಿಗೂ ಕೊನೆಯಾಗುವುದಿಲ್ಲ ಎಂಬುದಕ್ಕೆ ಇಂಗ್ಲೆಂಡ್ ಸರಣಿಯೇ ಸಾಕ್ಷಿಯಾಗಿದೆ. ಇದಕ್ಕೆ ಸೂಕ್ತವೆಂಬಂತೆ ಲೀಸೆಸ್ಟರ್‌ಶೈರ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮೊದಲು ಕೊಹ್ಲಿ ತನ್ನ ಪ್ರಾಮುಖ್ಯತೆಯನ್ನು ಸಾಭೀತು ಮಾಡಿದ್ದಾರೆ. ಅಭ್ಯಾಸ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಟೀಂ ಇಂಡಿಯಾದಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಿದ್ದಾರೆ. ಅಭ್ಯಾಸದ ವೇಳೆ ರೋಹಿತ್ ಶರ್ಮಾ (Rohit Sharma) ಏನು ಮಾಡಬೇಕೋ ಅದನ್ನು ಕೊಹ್ಲಿ ಮಾಡಿದ್ದಾರೆ. ಜುಲೈ 1 ರಿಂದ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ವಹಿಸುವುದಿಲ್ಲ ಎಂಬುದನ್ನು ಈ ವಿಡಿಯೋ ಸೂಚಿಸುತ್ತಿದೆ.

ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ವಿಜಯದ ಧ್ವಜ ಹಾರಿಸಿತ್ತು. ಹೀಗಾಗಿ ಭಾರತ ತಂಡ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಕೊನೆಯ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಬೇಕಿತ್ತು. ಆದರೆ ಟೀಂ ಇಂಡಿಯಾದಲ್ಲಿನ ಕೊರೊನಾ ಪ್ರಕರಣಗಳಿಂದಾಗಿ ಪಂದ್ಯವನ್ನು ಮುಂದೂಡಬೇಕಾಯಿತು. ವಿರಾಟ್ ನಾಯಕತ್ವದಲ್ಲಿ ಆಡಿದ ಅದೇ ಸರಣಿಯ ಉಳಿದಿರುವ ಏಕೈಕ ಟೆಸ್ಟ್ ಈಗ ನಡೆಯುತ್ತಿದೆ. ಆದರೆ, ಈ ಮಧ್ಯೆ ವಿರಾಟ್ ಕೊಹ್ಲಿ ಕೈಯಿಂದ ಟೀಂ ಇಂಡಿಯಾ ನಾಯಕತ್ವವನ್ನು ರೋಹಿತ್ ಶರ್ಮಾಗೆ ಹಸ್ತಾಂತರಿಸುವ ದೊಡ್ಡ ಬದಲಾವಣೆಯಾಗಿದೆ.

ಇದನ್ನೂ ಓದಿ
Image
Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!
Image
Team India: ಇಂಗ್ಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್..!
Image
T20 Blast: ಬ್ಯಾಟ್ಸ್​ಮನ್​ಗೆ ಚೆಂಡೆಸೆದು 5 ರನ್​ಗಳ ಶಿಕ್ಷೆಗೊಳಗಾದ ಬ್ರಾಥ್​ವೇಟ್

ಇದನ್ನೂ ಓದಿ:Virat Test Debut: ವಿರಾಟ್ ಟೆಸ್ಟ್ ಬದುಕಿಗೆ ಭರ್ತಿ 11 ವರ್ಷ! ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿಯ ಅವಿಸ್ಮರಣೀಯ ಇನ್ನಿಂಗ್ಸ್​ಗಳಿವು

ರೋಹಿತ್ ನಾಯಕತ್ವ ವಹಿಸಿಕೊಂಡ ವಿರಾಟ್!

ಪ್ರಸಕ್ತ ಪ್ರವಾಸದಲ್ಲಿ ಟೀಂ ಇಂಡಿಯಾ ಏಕೈಕ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸ ಪಂದ್ಯ ಆಡಬೇಕಿದೆ. ಈ ಪಂದ್ಯ ಲೀಸೆಸ್ಟರ್‌ಶೈರ್ ವಿರುದ್ಧ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ಅಭ್ಯಾಸದ ಚಿತ್ರಣ ಬೆರಗು ಮೂಡಿಸಿತ್ತು. ಈ ಚಿತ್ರಗಳಲ್ಲಿ ನಾಯಕ ರೋಹಿತ್ ಶರ್ಮಾ ಅವರ ಕೆಲಸವನ್ನು ವಿರಾಟ್ ಕೊಹ್ಲಿ ಮಾಡುತ್ತಿರುವುದು ಕಂಡುಬಂದಿದೆ. ಅವರು ತಮ್ಮ ಮಾತುಗಳಿಂದ ತಂಡಕ್ಕೆ ಶಕ್ತಿ ತುಂಬುತ್ತಿದ್ದರು.

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)

ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)

ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)

ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)

ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

Published On - 12:28 pm, Wed, 22 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ