AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs AUS: ಟಿ20, ಏಕದಿನ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟ; ಐದು ಹೊಸ ಮುಖಗಳಿಗೆ ಅವಕಾಶ

ENG vs AUS: ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ನಿರತವಾಗಿರುವ ಇಂಗ್ಲೆಂಡ್ ತಂಡ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಐದು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದೀಗ ಈ ಎರಡೂ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ.

ENG vs AUS: ಟಿ20, ಏಕದಿನ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟ; ಐದು ಹೊಸ ಮುಖಗಳಿಗೆ ಅವಕಾಶ
ಶ್ರೀಲಂಕಾ ತಂಡ
ಪೃಥ್ವಿಶಂಕರ
|

Updated on: Aug 26, 2024 | 10:19 PM

Share

ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ನಿರತವಾಗಿರುವ ಇಂಗ್ಲೆಂಡ್ ತಂಡ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಐದು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದೀಗ ಈ ಎರಡೂ ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ವಿಶೇಷವೆಂದರೆ ಟಿ20 ತಂಡದಲ್ಲಿ ಇಂಗ್ಲೆಂಡ್ ಮಂಡಳಿ ಐವರು ಹೊಸ ಆಟಗಾರರ ಅವಕಾಶ ನೀಡಿದೆ. ಈ ಪೈಕಿ ಮೂವರು ಆಟಗಾರರಿಗೆ ಏಕದಿನ ತಂಡದಲ್ಲೂ ಸ್ಥಾನ ನೀಡಲಾಗಿದೆ. ಬ್ಯಾಟ್ಸ್‌ಮನ್ ಜೋರ್ಡಾನ್ ಕಾಕ್ಸ್, ಆಲ್‌ರೌಂಡರ್‌ಗಳಾದ ಜಾಕೋಬ್ ಬೆಥೆಲ್ ಮತ್ತು ಡಾನ್ ಮೌಸ್ಲಿ, ವೇಗದ ಬೌಲರ್‌ಗಳಾದ ಜೋಶ್ ಹಲ್ ಮತ್ತು ಜಾನ್ ಟರ್ನರ್ ತಂಡದಲ್ಲಿ ಸ್ಥಾನ ಪಡೆದ ಹೊಸ ಮುಖಗಳಾಗಿವೆ.

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿರುವ ಮಾರ್ಕ್​ವುಡ್ ಸರಣಿಯಿಂದಲೇ ಹೊರಬಿದ್ದಿದ್ದು, ಅವರ ಬದಲಿಗೆ ಜೋಶ್ ಹಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧ ಪ್ರಕಟಗೊಂಡಿರುವ ಎರಡೂ ಸರಣಿಗಳಿಗು ಜೋಶ್ ಹಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಬೆತೆಲ್ ಮತ್ತು ಟರ್ನರ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಉಭಯ ಸರಣಿಗಳಿಗೆ ಇಂಗ್ಲೆಂಡ್ ತಂಡ

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್, ಸ್ಯಾಮ್ ಕರನ್, ಜೋಶ್ ಹಲ್, ವಿಲ್ ಜಾಕ್ವೆಸ್, ಲಿಯಾಮ್ ಲಿವಿಂಗ್‌ಸ್ಟೋನ್, ಸಾಕಿಬ್ ಮಹಮೂದ್, ಡಾನ್ ಮುಸ್ಲಿ, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಜಾನ್ ಟರ್ನರ್.

ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೋಶ್ ಹಲ್, ವಿಲ್ ಜಾಕ್ಸ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೇಮೀ ಸ್ಮಿತ್, ರೀಸ್ ಟೋಪ್ಲಿ, ಜಾನ್ ಟರ್ನರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ