AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ ತಪ್ಪಿದ ಇಂಗ್ಲೆಂಡ್: ಸತತ ಸೋಲುಗಳಿಂದ ಕಂಗೆಟ್ಟ ಆಂಗ್ಲರು

England Team: 2019 ರಲ್ಲಿ ಏಕದಿನ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಇಂಗ್ಲೆಂಡ್ ತಂಡವು ಕಳೆದೊಂದು ವರ್ಷದಿಂದ ಟ್ರ್ಯಾಕ್ ತಪ್ಪಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಬಲಿಷ್ಠ ಪಡೆಯನ್ನು ಹೊಂದಿದ್ದರೂ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಟ್ರ್ಯಾಕ್ ತಪ್ಪಿದ ಇಂಗ್ಲೆಂಡ್: ಸತತ ಸೋಲುಗಳಿಂದ ಕಂಗೆಟ್ಟ ಆಂಗ್ಲರು
England
TV9 Web
| Edited By: |

Updated on: Dec 10, 2023 | 5:12 PM

Share

ಏಕದಿನ ಕ್ರಿಕೆಟ್​ನ ಬಲಿಷ್ಠ ಪಡೆಗಳಾಗಿ ಗುರುತಿಸಿಕೊಂಡಿದ್ದ ಇಂಗ್ಲೆಂಡ್ (England) ತಂಡವು ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದಕ್ಕೆ ಸಾಕ್ಷಿಯೇ ಇತ್ತೀಚಿನ ಏಕದಿನ ವಿಶ್ವಕಪ್​ನಲ್ಲಿನ ಪ್ರದರ್ಶನ. ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಸೋತಿದೆ.

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವೆಸ್ಟ್ ಇಂಡೀಸ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ವೆಸ್ಟ್ ಇಂಡೀಸ್ 25 ವರ್ಷಗಳ ಬಳಿಕ ಆಂಗ್ಲರ ವಿರುದ್ಧ ಸರಣಿ ಗೆದ್ದಿದೆ. ಅಂದರೆ ಕಳೆದ ಎರಡುವರೆ ದಶಕಗಳಿಂದ ಇಂಗ್ಲೆಂಡ್ ತಂಡ ವಿಂಡೀಸ್ ವಿರುದ್ಧ ಪಾರುಪತ್ಯ ಮೆರೆದಿತ್ತು.

ಇದೀಗ ಆಂಗ್ಲರ ಪಡೆಗೆ ಸೋಲುಣಿಸಿ ವೆಸ್ಟ್ ಇಂಡೀಸ್ ಗೆಲುವಿನ ಲಯಕ್ಕೆ ಮರಳಿದೆ. ಏಕೆಂದರೆ ಈ ಬಾರಿಯ ವಿಶ್ವಕಪ್​ಗೆ ವೆಸ್ಟ್ ಇಂಡೀಸ್ ತಂಡವು ಅರ್ಹತೆ ಪಡೆದಿರಲಿಲ್ಲ. ಇದೀಗ ಅಂತಹ ವೆಸ್ಟ್ ಇಂಡೀಸ್ ವಿರುದ್ಧವೇ ಜೋಸ್ ಬಟ್ಲರ್ ಪಡೆ ಮುಗ್ಗರಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಕಳೆದ 12 ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ 8 ಪಂದ್ಯಗಳಲ್ಲೂ ಸೋಲನುಭವಿಸಿದೆ. ಇದೇ ಕಾರಣದಿಂದ ಜೋಸ್ ಬಟ್ಲರ್ ನಾಯಕತ್ವಕ್ಕೂ ಕುತ್ತು ಬರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಿನಲ್ಲಿ 2019 ರಲ್ಲಿ ಏಕದಿನ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಇಂಗ್ಲೆಂಡ್ ತಂಡವು ಕಳೆದೊಂದು ವರ್ಷದಿಂದ ಟ್ರ್ಯಾಕ್ ತಪ್ಪಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಬಲಿಷ್ಠ ಪಡೆಯನ್ನು ಹೊಂದಿದ್ದರೂ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಸೋಲುವ ಮೂಲಕ ಮುಜುಗರಕ್ಕೊಳಗಾಗಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಇಂಗ್ಲೆಂಡ್ ಪಡೆಯಲ್ಲಿ ಮಹತ್ವದ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: ಮಾಜಿ RCB ಆಟಗಾರನಿಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

ಪ್ರಸ್ತುತ ಇಂಗ್ಲೆಂಡ್ ಏಕದಿನ ತಂಡ : ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಗಸ್ ಅಟ್ಕಿನ್ಸನ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಝಾಕ್ ಕ್ರಾಲಿ, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಲಿಯಾಮ್ ಲಿವಿಂಗ್​ಸ್ಟೋನ್, ಒಲಿ ಪೋಪ್, ಫಿಲ್ ಸಾಲ್ಟ್, ಜೋಶ್ ಟಂಗ್ ಮತ್ತು ಜಾನ್ ಟರ್ನರ್.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ