AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇಂಗ್ಲೆಂಡ್ ಪ್ರವಾಸ ಅಂತ್ಯ: ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?, ಎದುರಾಳಿ ಯಾರು?

ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯ ನಂತರ ಭಾರತ ತಂಡ ಸುಮಾರು ಒಂದು ತಿಂಗಳು ವಿಶ್ರಾಂತಿ ಪಡೆಯಲಿದೆ. ಆಗಸ್ಟ್‌ನಲ್ಲಿ ಭಾರತಕ್ಕೆ ಯಾವುದೇ ಪಂದ್ಯ ಇರುವುದಿಲ್ಲ. ಭಾರತ ಕ್ರಿಕೆಟ್ ತಂಡವು ಈಗ 2025 ರ ಏಷ್ಯಾ ಕಪ್‌ನಲ್ಲಿ ನೇರವಾಗಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದೆ. ಈ ಪಂದ್ಯಾವಳಿಯನ್ನು ಸೆಪ್ಟೆಂಬರ್ 9 ರಿಂದ 28 ರವರೆಗೆ ಟಿ 20 ಸ್ವರೂಪದಲ್ಲಿ ಆಯೋಜಿಸಲಾಗಿದೆ.

Team India: ಇಂಗ್ಲೆಂಡ್ ಪ್ರವಾಸ ಅಂತ್ಯ: ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?, ಎದುರಾಳಿ ಯಾರು?
Team India (5)
ಪ್ರೀತಿ ಭಟ್​, ಗುಣವಂತೆ
| Edited By: |

Updated on:Aug 31, 2025 | 8:11 PM

Share

ಬೆಂಗಳೂರು (ಆ. 05): ಭಾರತ ತಂಡದ (Indian Crictet Team) ಇಂಗ್ಲೆಂಡ್ ಪ್ರವಾಸ ಮುಗಿದಿದೆ. ಶುಭ್​ಮನ್ ಗಿಲ್ ಅವರ ತಂಡ ಈ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿತು. 5 ಪಂದ್ಯಗಳ ಟೆಸ್ಟ್ ಸರಣಿ 2-2 ರಲ್ಲಿ ಸಮಬಲಗೊಂಡಿತ್ತು. ಭಾರತ ಪ್ರತಿ ಪಂದ್ಯದಲ್ಲೂ ಪ್ರಾಬಲ್ಯ ಸಾಧಿಸಿತು. ಅದೃಷ್ಟವಿದ್ದರೆ, ಫಲಿತಾಂಶ 4-0 ಆಗಬಹುದಿತ್ತು. ಆದರೆ, ಅಂತಿಮ ಹಂತದಲ್ಲಿ ಮಾಡಿದ ಕೆಲ ಎಡವಟ್ಟಿನಿಂದ ಸರಣಿ ಸಮಬಲವಾಯಿತು. ಜೂನ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಿತು. ಮೊದಲ ಟೆಸ್ಟ್‌ನಲ್ಲಿ ಸೋತ ನಂತರ, ತಂಡವು ಎರಡನೇ ಟೆಸ್ಟ್‌ನಲ್ಲಿ ಜಯಗಳಿಸಿತು. ಇಂಗ್ಲೆಂಡ್ ಮೂರನೇ ಟೆಸ್ಟ್‌ನಲ್ಲಿ ಜಯಗಳಿಸಿತು ಮತ್ತು ನಾಲ್ಕನೇ ಪಂದ್ಯ ಡ್ರಾ ಆಗಿತ್ತು. ಓವಲ್ ಮೈದಾನದಲ್ಲಿ ಕೊನೆಯ ದಿನದಂದು ನಡೆದ 5 ನೇ ಟೆಸ್ಟ್‌ನಲ್ಲಿ ಭಾರತ ಜಯಗಳಿಸಿತು.

ಒಂದು ತಿಂಗಳಿಗಿಂತ ಹೆಚ್ಚು ವಿಶ್ರಾಂತಿ

ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯ ನಂತರ ಭಾರತ ತಂಡ ಸುಮಾರು ಒಂದು ತಿಂಗಳು ವಿಶ್ರಾಂತಿ ಪಡೆಯಲಿದೆ. ಆಗಸ್ಟ್‌ನಲ್ಲಿ ಭಾರತಕ್ಕೆ ಯಾವುದೇ ಪಂದ್ಯ ಇರುವುದಿಲ್ಲ. ಹಿಂದಿನ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಗಸ್ಟ್​ನಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಬೇಕಿತ್ತು. ಮೂರು ಏಕದಿನ ಪಂದ್ಯಗಳ ಜೊತೆಗೆ ಮೂರು ಪಂದ್ಯಗಳ ಟಿ20 ಸರಣಿಯೂ ಆಡಬೇಕಿತ್ತು. ಆದರೆ ಕಳೆದ ತಿಂಗಳು ಬಿಸಿಸಿಐ ಹೇಳಿಕೆ ನೀಡಿ ಇದನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ಈಗ ಭಾರತ ಮುಂದಿನ ವರ್ಷ ಬಾಂಗ್ಲಾದೇಶ ಪ್ರವಾಸ ಮಾಡಲಿದೆ.

ಏಷ್ಯಾಕಪ್‌ನಲ್ಲಿ ಆಡಲಿರುವ ಟೀಮ್ ಇಂಡಿಯಾ

ಭಾರತ ಕ್ರಿಕೆಟ್ ತಂಡವು ಈಗ 2025 ರ ಏಷ್ಯಾ ಕಪ್‌ನಲ್ಲಿ ನೇರವಾಗಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದೆ. ಈ ಪಂದ್ಯಾವಳಿಯನ್ನು ಸೆಪ್ಟೆಂಬರ್ 9 ರಿಂದ 28 ರವರೆಗೆ ಟಿ 20 ಸ್ವರೂಪದಲ್ಲಿ ಆಯೋಜಿಸಲಾಗಿದೆ. ಭಾರತ ತಂಡವು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇದರ ನಂತರ, ತಂಡವು 14 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಭಾರತವು ಸೆಪ್ಟೆಂಬರ್ 19 ರಂದು ಓಮನ್ ವಿರುದ್ಧ ಸೆಣಸಲಿದೆ. ಇದರ ನಂತರ, ಸೂಪರ್ -4 ಪಂದ್ಯಗಳು ನಡೆಯಲಿವೆ. ಅಲ್ಲಿಯೂ ಭಾರತ ಮತ್ತು ಪಾಕಿಸ್ತಾನ ನಡುವೆ ಘರ್ಷಣೆ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ
Image
ಕರುಣ್ ಮಾತ್ರವಲ್ಲ ಟೀಮ್ ಇಂಡಿಯಾದಿಂದ ಈ 5 ಆಟಗಾರರಿಗೆ ಗೇಟ್ ಪಾಸ್
Image
ಒಂದೇ ಸರಣಿಯಲ್ಲಿ ದಿಗ್ಗಜ ನಾಯಕರ ದಾಖಲೆ ಸರಿಗಟ್ಟಿದ ಗಿಲ್
Image
ಡಿಎಸ್‌ಪಿ ಸಿರಾಜ್​ಗೆ ಬಡ್ತಿ ನೀಡುತ್ತಾ ತೆಲಂಗಾಣ ಸರ್ಕಾರ?
Image
ಸಿರಾಜ್ ಸೇರಿದಂತೆ 7 ಆಟಗಾರರನ್ನು ಹೊಗಳಿದ ಜಯ್​ ಶಾ

IND vs ENG: ಕರುಣ್ ಮಾತ್ರವಲ್ಲ ಟೀಮ್ ಇಂಡಿಯಾದಿಂದ ಈ 5 ಆಟಗಾರರಿಗೆ ಗೇಟ್ ಪಾಸ್

ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ

ಟೆಸ್ಟ್ ಕ್ರಿಕೆಟ್ ಬಗ್ಗೆ ಹೇಳುವುದಾದರೆ, ಭಾರತ ತಂಡ ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೈದಾನಕ್ಕಿಳಿಯಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಅಕ್ಟೋಬರ್ 2 ರಿಂದ ಆರಂಭವಾಗಲಿದೆ. ಪಂದ್ಯಗಳು ಅಹಮದಾಬಾದ್ ಮತ್ತು ದೆಹಲಿಯಲ್ಲಿ ನಡೆಯಲಿವೆ. ಇದರ ನಂತರ, ಅಕ್ಟೋಬರ್ 19 ರಿಂದ 25 ರವರೆಗೆ ಭಾರತ ಆಸ್ಟ್ರೇಲಿಯಾದಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಗ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 am, Tue, 5 August 25

Follow Us
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?