AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs SL: ಇಂಗ್ಲೆಂಡ್ ವಿರುದ್ಧ ಪುಟಿದೆದ್ದ ಶ್ರೀಲಂಕಾ

England vs Sri Lanka, 1st Test: ಆ ಬಳಿಕ ಬಂದ ಅನುಭವಿ ಏಂಜೆಲೊ ಮ್ಯಾಥ್ಯೂಸ್ (0) ಸೊನ್ನೆ ಸುತ್ತಿ ಹಿಂತಿರುಗಿದ್ದರು. ಇದರ ನಡುವೆ ಕುಸಾಲ್ ಮೆಂಡಿಸ್ 24 ರನ್​ ಬಾರಿಸಿದರೆ, ಚಂಡಿಮಲ್ 17 ರನ್​ಗಳ ಕೊಡುಗೆ ನೀಡಿದರು. ಅತ್ತ 92 ರನ್​ಗಳಿಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಧನಂಜಯ ಡಿಸಿಲ್ವಾ ಹಾಗೂ ಮಿಲನ್ ರತ್ನಾಯಕೆ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು.

ENG vs SL: ಇಂಗ್ಲೆಂಡ್ ವಿರುದ್ಧ ಪುಟಿದೆದ್ದ ಶ್ರೀಲಂಕಾ
ENG vs SL
ಝಾಹಿರ್ ಯೂಸುಫ್
|

Updated on: Aug 22, 2024 | 7:33 AM

Share

ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶ್ರೀಲಂಕಾ 236 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ. ಆರಂಭಿಕರಾದ ನಿಶಾಂಕ್ ಮದುಷ್ಕ (4) ಹಾಗೂ ಕರುಣರತ್ನೆ (2) 6 ರನ್​ಗಳಿಸುವಷ್ಟರಲ್ಲಿ ಪೆವಿಲಿಯನ್ ಸೇರಿದರು.

ಇನ್ನು ಆ ಬಳಿಕ ಬಂದ ಅನುಭವಿ ಏಂಜೆಲೊ ಮ್ಯಾಥ್ಯೂಸ್ (0) ಸೊನ್ನೆ ಸುತ್ತಿ ಹಿಂತಿರುಗಿದ್ದರು. ಇದರ ನಡುವೆ ಕುಸಾಲ್ ಮೆಂಡಿಸ್ 24 ರನ್​ ಬಾರಿಸಿದರೆ, ಚಂಡಿಮಲ್ 17 ರನ್​ಗಳ ಕೊಡುಗೆ ನೀಡಿದರು.

ಅತ್ತ 92 ರನ್​ಗಳಿಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಧನಂಜಯ ಡಿಸಿಲ್ವಾ ಹಾಗೂ ಮಿಲನ್ ರತ್ನಾಯಕೆ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು.

ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದ ಶ್ರೀಲಂಕಾ ತಂಡಕ್ಕೆ ಆಸರೆಯಾಗಿ ನಿಂತ ಈ ಜೋಡಿ 63 ರನ್​ಗಳನ್ನು ಕಲೆಹಾಕಿದರು. ಆದರೆ ತಂಡದ ಮೊತ್ತ 176 ರನ್ ಆಗಿದ್ದಾಗ ಧನಂಜಯ ಡಿಸಿಲ್ವಾ (74) ಶೊಯೇಬ್ ಬಶೀರ್ ಎಸೆತದಲ್ಲಿ ಔಟಾದರು.

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ಮಿಲನ್ 72 ರನ್​ಗಳನ್ನು ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಅಂತಿಮವಾಗಿ ಶ್ರೀಲಂಕಾ ತಂಡವು 236 ರನ್​ಗಳಿಸಿ ಆಲೌಟ್ ಆಯಿತು. ಇಂಗ್ಲೆಂಡ್ ಪರ ಸ್ಪಿನ್ನರ್ ಶೊಯೇಬ್ ಬಶೀರ್ 3 ವಿಕೆಟ್ ಕಬಳಿಸಿದರೆ, ವೇಗಿ ಮಾರ್ಕ್ ವುಡ್ 3 ವಿಕೆಟ್ ಉರುಳಿಸಿದರು.

ಇನ್ನು ಮೊದಲ ದಿನದಾಟದ ಅಂತ್ಯದ ವೇಳೆ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಯಾವುದೇ ವಿಕೆಟ್ ನಷ್ಟವಿಲ್ಲದೆ 22 ರನ್​ಗಳಿಸಿದೆ. ಸದ್ಯ ಬೆನ್ ಡಕೆಟ್ (13) ಹಾಗೂ ಡೇನಿಯಲ್ ಲಾರೆನ್ಸ್ (9) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಡೇನಿಯಲ್ ಲಾರೆನ್ಸ್ , ಬೆನ್ ಡಕೆಟ್ , ಒಲೀ ಪೋಪ್ (ನಾಯಕ) , ಜೋ ರೂಟ್ , ಹ್ಯಾರಿ ಬ್ರೂಕ್ , ಜೇಮೀ ಸ್ಮಿತ್ (ವಿಕೆಟ್ ಕೀಪರ್) , ಕ್ರಿಸ್ ವೋಕ್ಸ್ , ಗಸ್ ಅಟ್ಕಿನ್ಸನ್ , ಮ್ಯಾಥ್ಯೂ ಪಾಟ್ಸ್ , ಮಾರ್ಕ್ ವುಡ್ , ಶೋಯೆಬ್ ಬಶೀರ್.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಶ್ರೀಲಂಕಾ ಪ್ಲೇಯಿಂಗ್ 11: ದಿಮುತ್ ಕರುಣಾರತ್ನೆ , ನಿಶಾನ್ ಮದುಷ್ಕ , ಕುಸಲ್ ಮೆಂಡಿಸ್ , ಏಂಜೆಲೊ ಮ್ಯಾಥ್ಯೂಸ್ , ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್) , ಧನಂಜಯ ಡಿ ಸಿಲ್ವಾ (ನಾಯಕ) , ಕಮಿಂದು ಮೆಂಡಿಸ್ , ಪ್ರಭಾತ್ ಜಯಸೂರ್ಯ , ಅಸಿತ ಫೆರ್ನಾಂಡೋ , ವಿಶ್ವ ಫೆರ್ನಾಂಡೋ , ಮಿಲನ್ ರತ್ನಾಯಕೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?