AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌- ಶ್ರೀಲಂಕಾ ವಿಶ್ವಕಪ್ ಕಾಳಗಕ್ಕೆ ಮಳೆಯ ಆತಂಕ? ಇಲ್ಲಿದೆ ಬೆಂಗಳೂರಿನ ಹವಾಮಾನ ವರದಿ

Bengaluru Weather Report in Kannada: 2023ರ ಏಕದಿನ ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಇಂದು ಅಂದರೆ, ಅಕ್ಟೋಬರ್ 26 ರ ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್‌ಗಳು ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿರುವುದರಿಂದ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದಾರೆ.

ಇಂಗ್ಲೆಂಡ್‌- ಶ್ರೀಲಂಕಾ ವಿಶ್ವಕಪ್ ಕಾಳಗಕ್ಕೆ ಮಳೆಯ ಆತಂಕ? ಇಲ್ಲಿದೆ ಬೆಂಗಳೂರಿನ ಹವಾಮಾನ ವರದಿ
ಬೆಂಗಳೂರಿನ ಹವಾಮಾನ ವರದಿ
ಪೃಥ್ವಿಶಂಕರ
|

Updated on:Oct 26, 2023 | 7:27 AM

Share

2023ರ ಏಕದಿನ ವಿಶ್ವಕಪ್‌ನ (ICC World Cup 2023) 25ನೇ ಪಂದ್ಯದಲ್ಲಿ ಇಂದು ಅಂದರೆ, ಅಕ್ಟೋಬರ್ 26 ರ ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾವನ್ನು (England vs Sri Lanka) ಎದುರಿಸಲಿದೆ. ಹಾಲಿ ಚಾಂಪಿಯನ್‌ಗಳು ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿರುವುದರಿಂದ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ ಏಕೈಕ ಗೆಲುವು ದಾಖಲಿಸಿರುವ ಇಂಗ್ಲೆಂಡ್, ಟೂರ್ನಿಯ ಸೆಮಿಫೈನಲ್​ಗೇರಬೇಕೆಂದರೆ, ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಉಳಿದ ಎಲ್ಲಾ ಲೀಗ್ ಪಂದ್ಯಗಳನ್ನು ಗೆಲ್ಲಬೇಕಿದೆ. ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಪ್ರಸ್ತುತ 10 ತಂಡಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಏತನ್ಮಧ್ಯೆ, ಶ್ರೀಲಂಕಾ ತನ್ನ ಕೊನೆಯ ಮುಖಾಮುಖಿಯಲ್ಲಿ ನೆದರ್ಲೆಂಡ್ಸ್ ವಿರುದ್ಧ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸೋಲಿನ ಸರಣಿಯನ್ನು ಮುರಿದಿದೆ. ಇಂಗ್ಲೆಂಡ್‌ನಂತೆ, ಲಂಕಾ ಕೂಡ ನಾಲ್ಕು ಮುಖಾಮುಖಿಗಳಲ್ಲಿ ಕೇವಲ ಒಂದೇ ಒಂದು ಗೆಲುವು ಸಾಧಿಸಿದೆ. ಲಂಕಾ ಈಗಾಗಲೇ ಆಸ್ಟ್ರೇಲಿಯಾ, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾದ ಎದುರು ಸೋಲು ಕಂಡಿದೆ. ಈ ನಡುವೆ ತಂಡದ ಅನೇಕ ಆಟಗಾರರ ಇಂಜುರಿ ಸಮಸ್ಯೆ ಲಂಕಾ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ENG vs SL: ಬೆಂಗಳೂರಿನಲ್ಲಿ ಇಂದು 2ನೇ ವಿಶ್ವಕಪ್ ಪಂದ್ಯ; ಬಲಿಷ್ಠ ಇಂಗ್ಲೆಂಡ್​ಗೆ ಲಂಕಾ ಸವಾಲು

ಬೆಂಗಳೂರು ಹವಾಮಾನ ಹೇಗಿರಲಿದೆ?

ಗುರುವಾರದಂದು ಬೆಂಗಳೂರಿನಲ್ಲಿ ಹವಾಮಾನವು ಹೆಚ್ಚಾಗಿ ಬಿಸಿಲಿನಿಂದ ಕೂಡಿರುತ್ತದೆ ಮತ್ತು ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ. ಸಂಜೆ ಸಮೀಪಿಸುತ್ತಿದ್ದಂತೆ, ಬೆಂಗಳೂರಿನಂತಹ ನಗರದಲ್ಲಿ ನಿರೀಕ್ಷಿಸಿದಂತೆ ತಾಪಮಾನವು 19 ರಿಂದ 20 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುತ್ತದೆ. ಅದೃಷ್ಟವಶಾತ್, ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲರ್‌ಗಳಿಗೆ ಅನುಕೂಲವಾಗುವಂತೆ ಮೋಡ ಕವಿದ ವಾತಾವರಣ ಇರಲಿದ್ದು, ಇದರ ಹೊರತಾಗಿ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿಮಾನಿಗಳು ಮಳೆಯ ಆತಂಕವಿಲ್ಲದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಎಂದಿನಂತೆ ಪಂದ್ಯವೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ 1:30ಕ್ಕೆ ನಡೆಯಲ್ಲಿದೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮೊಯಿನ್ ಅಲಿ, ಡೇವಿಡ್ ಮಲನ್, ಜೋಸ್ ಬಟ್ಲರ್, ಜೋ ರೂಟ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಬ್ರೈಡನ್ ಕಾರ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಫ್ರಾ ಆರ್ಚರ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರನ್, ಹ್ಯಾರಿ ಬ್ರೂಕ್ ಮತ್ತು ಗಸ್ ಅಟ್ಕಿನ್ಸನ್.

ಶ್ರೀಲಂಕಾ ತಂಡ: ಏಂಜೆಲೊ ಮ್ಯಾಥ್ಯೂಸ್, ದಿಮುತ್ ಕರುಣಾರತ್ನೆ, ಕುಸಾಲ್ ಪೆರೆರಾ, ಧನಂಜಯ ಡಿ ಸಿಲ್ವಾ, ಕಸುನ್ ರಜಿತ, ದುಷ್ಮಂತ ಚಮೀರ, ಕುಸಲ್ ಮೆಂಡಿಸ್, ಚಮಿಕ ಕರುಣರತ್ನೆ, ಸದೀರ ಸಮರವಿಕ್ರಮ, ದುಶನ್ ಹೇಮಂತ, ಲಹಿರು ಕುಮಾರ, ಚರಿತ್ ಅಸಲಂಕ, ಪಾತುಮ್ ನಿಸ್ಸಾಂಕ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ದಿಲ್ಶನ್ ಮಧುಶಂಕ ಮತ್ತು ಮತೀಶ ಪತಿರಾನ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 am, Thu, 26 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ