AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್: ಇಲ್ಲಿದೆ ಭಾರತದ ಪ್ಲೇಯಿಂಗ್ XI

India Playing XI vs England: ಭಾರತ- ಇಂಗ್ಲೆಂಡ್ ನಡುವಣ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

India vs England: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್: ಇಲ್ಲಿದೆ ಭಾರತದ ಪ್ಲೇಯಿಂಗ್ XI
India vs England Semi Final
TV9 Web
| Edited By: |

Updated on:Nov 10, 2022 | 1:05 PM

Share

ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗುತ್ತಿದೆ. ಈಗಾಗಲೇ ಮೊದಲ ಸೆಮಿ ಫೈನಲ್ ಪಂದ್ಯ ನಡೆದಿದ್ದು ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿರುವ ಪಾಕಿಸ್ತಾನ (New Zealand vs Pakistan) ತಂಡ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡದೆ ಹಿಂದಿನ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಇದನ್ನೂ ಓದಿ
Image
IND vs ENG: ಭಾರತ- ಇಂಗ್ಲೆಂಡ್ ಸೆಮೀಸ್ ಕದನಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ
Image
Danushka Gunathilaka: ಧನುಷ್ಕಾ ಗುಣತಿಲಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ದೊಡ್ಡ ತಿರುವು: ಮಹಿಳೆಯಿಂದ ಮತ್ತೊಂದು ಆರೋಪ
Image
India vs England: ಹೈವೋಲ್ಟೇಜ್ ಸೆಮೀಸ್ ಪಂದ್ಯಕ್ಕೆ 1 ದೊಡ್ಡ ಬದಲಾವಣೆ: ಇಲ್ಲಿದೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
Image
Adelaide Weather: ಭಾರತ ಇಂಗ್ಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ನೋಡಿ ಹವಾಮಾನ ವರದಿ

ಇಂಗ್ಲೆಂಡ್ ತಂಡ: ಅಲೆಕ್ಸ್ ಹೇಲ್ಸ್, ಜೋಸ್ ಬಟ್ಲರ್ (ನಾಯಕ/ವಿಕೆಟ್‌ಕೀಪರ್), ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೋಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ಜೋರ್ಡನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್.

ಭಾರತ ತಂಡ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ. ಆದರೆ, ಈ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಎದುರಾಗಿರುವ ಉಭಯ ತಂಡಗಳಿಗೆ ಅಡಿಲೇಡ್​ ಮೈದಾನ ಯಾರಿಗೆ ವರವಾಗಲಿದೆ ಎಂಬುದು ರೋಚಕತೆ ಸೃಷ್ಟಿಸಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಹೀಗಾಗಿ ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶ ಕೂಡ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ. ಭಾರತ- ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. 2007, 2009 ಮತ್ತು 2012ರಲ್ಲಿ ಪರಸ್ಪರ ವಿರುದ್ಧ ಆಡಿವೆ. ಗುರುವಾರ ಆಡಿದರೆ ನಾಲ್ಕು ಬಾರಿ ಮುಖಾಮುಖಿಯಾದಂತಾಗುತ್ತದೆ. ಈವರೆಗಿನ ವಿಶ್ವಕಪ್‌ನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಎರಡು ಬಾರಿ ಜಯ ಸಾಧಿಸಿದೆ ಮತ್ತು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಒಂದು ಬಾರಿ ಗೆಲುವು ಕಂಡಿದೆ.

Published On - 1:05 pm, Thu, 10 November 22

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್