AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eoin Morgan: ಇಯಾನ್ ಮೋರ್ಗನ್ ಶೀಘ್ರದಲ್ಲೇ ನಿವೃತ್ತಿ: ಇಂಗ್ಲೆಂಡ್ ತಂಡಕ್ಕೆ ಹೊಸ ನಾಯಕ..!

Eoin Morgan: ಐಪಿಎಲ್​ನಲ್ಲಿ ಈ ಹಿಂದೆ ಕೆಕೆಆರ್ ತಂಡದ ನಾಯಕರಾಗಿ ಕೂಡ ವಿಫಲವಾಗಿದ್ದರು. ಹೀಗಾಗಿ ಕಳೆದ ವರ್ಷ ನಡೆದ ಮೆಗಾ ಹರಾಜಿನಲ್ಲಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

Eoin Morgan: ಇಯಾನ್ ಮೋರ್ಗನ್ ಶೀಘ್ರದಲ್ಲೇ ನಿವೃತ್ತಿ: ಇಂಗ್ಲೆಂಡ್ ತಂಡಕ್ಕೆ ಹೊಸ ನಾಯಕ..!
Eoin Morgan
TV9 Web
| Edited By: |

Updated on:Jun 27, 2022 | 12:41 PM

Share

ವಿಶ್ವ ಚಾಂಪಿಯನ್​ ಇಂಗ್ಲೆಂಡ್‌ ತಂಡದ ನಾಯಕ ಇಯಾನ್ ಮೋರ್ಗನ್ (Eoin Morgan) ಶೀಘ್ರದಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮೋರ್ಗನ್ ಕ್ರಿಕೆಟ್ ಅಂಗಳಕ್ಕೆ ಗುಡ್​ ಬೈ ಹೇಳಲು ಬಯಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಹೀಗಾಗಿ ಟೀಮ್ ಇಂಡಿಯಾ (Team India) ವಿರುದ್ದದ ಸರಣಿ ಇಯಾನ್ ಮೋರ್ಗನ್ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಮೋರ್ಗನ್ ನಿವೃತ್ತಿಯ ಬಳಿಕ ಜೋಸ್ ಬಟ್ಲರ್ ಇಂಗ್ಲೆಂಡ್‌ ತಂಡದ ಹೊಸ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂಗ್ಲೆಂಡ್ ತಂಡದ ಹಂಗಾಮಿ ನಾಯಕನಾಗಿ ಕಾಣಿಸಿಕೊಂಡಿರುವ ಬಟ್ಲರ್, ತಂಡದ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಬಟ್ಲರ್ ಅವರನ್ನು ಸೀಮಿತ ಓವರ್​ಗಳ ತಂಡಕ್ಕೆ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಜೋ ರೂಟ್ ಬದಲಿಗೆ ಇತ್ತೀಚೆಗಷ್ಟೇ ನಾಯಕರಾಗಿ ಬೆನ್ ಸ್ಟೋಕ್ಸ್ ಆಯ್ಕೆಯಾಗಿದ್ದರು. ಹೀಗಾಗಿ ದೀರ್ಘಾವಧಿಯ ಕ್ರಿಕೆಟ್​ನಲ್ಲಿ ನಾಯಕನ ಬದಲಾವಣೆ ಕಂಡು ಬರುವುದಿಲ್ಲ ಎಂದೇ ಹೇಳಬಹುದು.

ಕಳೆದ ಎರಡು ವರ್ಷಗಳಿಂದ ಮೋರ್ಗನ್ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದಾರೆ. ಇತ್ತೀಚಿಗೆ ನೆದರ್ಲೆಂಡ್ಸ್ ವಿರುದ್ಧದ ಸರಣಿಯಲ್ಲೂ ಎರಡು ಬಾರಿ ಖಾತೆ ತೆರೆಯಲು ವಿಫಲರಾಗಿದ್ದರು. ಅಲ್ಲದೆ ಕೊನೆಯ ಪಂದ್ಯವನ್ನು ಗಾಯದ ಕಾರಣ ಆಡಿರಲಿಲ್ಲ. ಇತ್ತ ನಾಯಕನೇ ಕಳಪೆ ಫಾರ್ಮ್​ನಲ್ಲಿರುವ ಕಾರಣ ಇಂಗ್ಲೆಂಡ್ ಕ್ರಿಕೆಟ್​ ಬೋರ್ಡ್ ಚಿಂತೆಗೀಡಾಗಿದೆ. ಏಕೆಂದರೆ ಈ ವರ್ಷ ಟಿ20 ವಿಶ್ವಕಪ್ ಹಾಗೂ ಮುಂದಿನ ವರ್ಷ ಏಕದಿನ ವಿಶ್ವಕಪ್ ನಡೆಯಲಿದೆ. ಇದಕ್ಕೂ ಮುನ್ನ ಬಲಿಷ್ಠ ಪಡೆಯನ್ನೇ ರೂಪಿಸಲು ಇಸಿಬಿ ಪ್ಲ್ಯಾನ್ ರೂಪಿಸಿದೆ.

ಹೀಗಾಗಿಯೇ ಕಳಪೆ ಫಾರ್ಮ್​​​ನಲ್ಲಿರುವ ಇಯಾನ್ ಮೋರ್ಗನ್ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ವಿಫಲವಾದರೆ ತಂಡದಿಂದ ಹೊರಬೀಳುವುದು ಖಚಿತ ಎನ್ನಲಾಗಿತ್ತು. ಆದರೀಗ ಅದೇ ಸರಣಿಯ ಮೂಲಕ ಕ್ರಿಕೆಟ್ ಅಂಗಳಕ್ಕೆ ಗುಡ್​ ಬೈ ಹೇಳಲು ಮೋರ್ಗನ್ ಬಯಸಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

2019ರ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ಇಯಾನ್ ಮೋರ್ಗನ್, ಕೆಲ ಸಮಯದಿಂದ ಕಳಪೆ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ನಲ್ಲಿ ಈ ಹಿಂದೆ ಕೆಕೆಆರ್ ತಂಡದ ನಾಯಕರಾಗಿ ಕೂಡ ವಿಫಲವಾಗಿದ್ದರು. ಹೀಗಾಗಿ ಕಳೆದ ವರ್ಷ ನಡೆದ ಮೆಗಾ ಹರಾಜಿನಲ್ಲಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಇಂಗ್ಲೆಂಡ್ ಪರ 248 ಏಕದಿನ ಪಂದ್ಯಗಳಿಂದ ಮೋರ್ಗನ್ 14 ಸೆಂಚುರಿ ಹಾಗೂ 47 ಹಾಫ್ ಸೆಂಚುರಿಯೊಂದಿಗೆ 8447 ರನ್ ಕಲೆಹಾಕಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 115 ಪಂದ್ಯಗಳಲ್ಲಿ 2458 ರನ್​ ಬಾರಿಸಿದ್ದಾರೆ.

ಇದೀಗ ಮೋರ್ಗನ್ ತಮ್ಮ 35ನೇ ವಯಸ್ಸಿನಲ್ಲಿ ನಿವೃತ್ತಿ ನೀಡಲು ಬಯಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಇಯಾನ್ ಮೋರ್ಗನ್, ನಾನು ತಂಡಕ್ಕೆ ಉತ್ತಮ ಕೊಡುಗೆ ನೀಡುತ್ತಿಲ್ಲ ಎಂದು ಭಾವಿಸಿದರೆ, ನನ್ನ ಇನಿಂಗ್ಸ್​ ಅನ್ನು ಕೊನೆಗೊಳಿಸುತ್ತೇನೆ ಎಂದಿದ್ದರು. ಇದೀಗ ಆ ಮಾತಿನ ಅರ್ಥ ನಿವೃತ್ತಿ ಸುಳಿವು ಎಂದು ವಿಶ್ಲೇಷಿಸಲಾಗುತ್ತಿದೆ.

Published On - 12:40 pm, Mon, 27 June 22

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!