AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅನಾನುಭವಿ ಬಳಗದೊಂದಿಗೆ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ. ಇನ್ನು 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿದೆ. ಹಾಗೆಯೇ ಮಾರ್ಚ್ 7 ರಿಂದ ಶುರುವಾಗಲಿರುವ 5ನೇ ಪಂದ್ಯವು ಧರ್ಮಶಾಲಾದ HPCA ಮೈದಾನದಲ್ಲಿ ನಡೆಯಲಿದೆ.

IND vs ENG: ಅನಾನುಭವಿ ಬಳಗದೊಂದಿಗೆ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ
Team India
TV9 Web
| Edited By: |

Updated on: Feb 13, 2024 | 7:04 AM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಗುರುವಾರದಿಂದ (ಫೆ.15) ಶುರುವಾಗಲಿದೆ. ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಸಂಪೂರ್ಣ ಸರಣಿಯಿಂದ ಹಿಂದೆ ಸರಿದಿದ್ದಾರೆ. ಇನ್ನು ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಹಾಗೆಯೇ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇನ್ನು ಚೇತೇಶ್ವರ ಪೂಜಾರಾ ಹಾಗೂ ಅಜಿಂಕ್ಯ ರಹಾನೆಯನ್ನು ಆಯ್ಕೆಗೆ ಪರಿಗಣಿಸಿಲ್ಲ. ಹೀಗಾಗಿ ಟೀಮ್ ಇಂಡಿಯಾ ಯುವ ಬಳಗದೊಂದಿಗೆ ಕಣಕ್ಕಿಳಿಯಲಿದೆ.

ಅಂದರೆ ಪ್ರಸ್ತುತ ತಂಡದಲ್ಲಿರುವ ಬ್ಯಾಟರ್​ಗಳನ್ನು ಗಮನಿಸಿದರೆ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್​​ಮನ್ 50 ಟೆಸ್ಟ್ ಪಂದ್ಯಗಳನ್ನಾಡಿಲ್ಲ. ವಿಶೇಷ ಎಂದರೆ ಹಿಟ್​ಮ್ಯಾನ್ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟರ್​ಗಳು ಕನಿಷ್ಠ 30 ಟೆಸ್ಟ್ ಪಂದ್ಯಗಳನ್ನು ಆಡಿದ ಅನುಭವ ಹೊಂದಿಲ್ಲ.

ಇಲ್ಲಿ ರೋಹಿತ್ ಶರ್ಮಾ 56 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದರೆ, ಯಶಸ್ವಿ ಜೈಸ್ವಾಲ್​ ಕೇವಲ 6 ಟೆಸ್ಟ್​ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ಹಾಗೆಯೇ ಶುಭ್​ಮನ್ ಗಿಲ್​ಗೆ 22 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವಿದೆ. ಇದರ ಹೊರತಾಗಿ ರಜತ್ ಪಾಟಿದಾರ್ ಏಕೈಕ ಟೆಸ್ಟ್ ಪಂದ್ಯವಾಡಿದ್ದರೆ, ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಅನುಭವ ಕೇವಲ 7 ಪಂದ್ಯಗಳಿಗೆ ಸೀಮಿತ.

ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ತಂಡದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಮೂವರು ಇನ್ನೂ ಕೂಡ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿಲ್ಲ. ಹೀಗಾಗಿ ಸರ್ಫರಾಝ್ ಖಾನ್, ಧ್ರುವ್ ಜುರೇಲ್ ಹಾಗೂ ದೇವದತ್ ಪಡಿಕ್ಕಲ್ ರಾಜ್​ಕೋಟ್​ ಟೆಸ್ಟ್​ನಲ್ಲಿ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಅಂದರೆ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಲೈನಪ್​ ರೋಹಿತ್ ಶರ್ಮಾ ಅವರ ಅನುಭವವನ್ನು ಅವಲಂಭಿಸಿರುವುದು ಸ್ಪಷ್ಟ. ಅವರ ಜೊತೆಗೆ ಒಂದಷ್ಟು ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: PSL ನಿಂದ RCB ವೇಗಿ ಔಟ್: ಐಪಿಎಲ್​ಗೆ ಡೌಟ್..!

ಟೀಮ್ ಇಂಡಿಯಾ ಬ್ಯಾಟರ್​ಗಳ ಟೆಸ್ಟ್​ ಅನುಭವ:

  • ರೋಹಿತ್ ಶರ್ಮಾ – 56 ಟೆಸ್ಟ್​ಗಳು
  • ಯಶಸ್ವಿ ಜೈಸ್ವಾಲ್ – 6 ಟೆಸ್ಟ್​ಗಳು
  • ಶುಭ್​​​ಮನ್ ಗಿಲ್ – 22 ಟೆಸ್ಟ್​ಗಳು
  • ರಜತ್ ಪಾಟಿದಾರ್ – 1 ಟೆಸ್ಟ್​
  • ಕೆಎಸ್ ಭರತ್ – 7 ಟೆಸ್ಟ್​ಗಳು
  • ಸರ್ಫರಾಝ್ ಖಾನ್ – 0
  • ದೇವದತ್ ಪಡಿಕ್ಕಲ್ – 0
  • ಧ್ರುವ್ ಜುರೇಲ್ – 0

ಭಾರತ ಟೆಸ್ಟ್​ ತಂಡ:

ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?