AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ ಅಲ್ಲ: ಅಭ್ಯಾಸ ಪಂದ್ಯ ಮುಗಿದ ಬಳಿಕ ಡುಪ್ಲೆಸಿಸ್ ಹೊಗಳಿದ್ದು ಯಾರನ್ನ ಗೊತ್ತೇ?

RCB vs PBKS, IPL 2022: ಫಾಫ್ ಡುಪ್ಲೆಸಿಸ್ ನೇತೃತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಅನ್ನು ಭಾನುವಾರ ಎದುರಿಸಲಿದೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಸೇರಿದಂತೆ ಆರ್​ಸಿಬಿಯ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

Virat Kohli: ಕೊಹ್ಲಿ ಅಲ್ಲ: ಅಭ್ಯಾಸ ಪಂದ್ಯ ಮುಗಿದ ಬಳಿಕ ಡುಪ್ಲೆಸಿಸ್ ಹೊಗಳಿದ್ದು ಯಾರನ್ನ ಗೊತ್ತೇ?
TV9 Web
| Edited By: |

Updated on: Mar 26, 2022 | 12:41 PM

Share

ಐಪಿಎಲ್ 2022 (IPL 2022) ಟೂರ್ನಿಗೆ ಇಂದು ಚಾಲನೆ ದೊರಕಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗುತ್ತಿದೆ. ಇದರ ಮುಂದಿನ ಮುಂದಿನ ದಿನ ಅಂದರೆ ಭಾನುವಾರ ಫಾಫ್ ಡುಪ್ಲೆಸಿಸ್ ನೇತೃತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ (RCB vs PBKS) ಅನ್ನು ಎದುರಿಸಲಿದೆ. ಗೆಲುವಿನ ಮೂಲಕ ಅಭಿಯಾನ ಆರಂಭಿಸುವ ತವಕದಲ್ಲಿರುವ ಆರ್​ಸಿಬಿ ಕಠಿಣ ಪ್ರ್ಯಾಕ್ಟೀಸ್​ನಲ್ಲಿ ನಿರತವಾಗಿದೆ. ಈಗಾಗಲೇ ಆರ್​ಸಿಬಿ ಮೊದಲ ಅಭ್ಯಾಸ ಪಂದ್ಯವನ್ನು ಕೂಡ ಆಡಿದ್ದು ಆಟಗಾರರು ಬೊಂಬಾಟ್ ಪ್ರದರ್ಶನ ತೋರಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಕೂಡ ನೆಟ್​ನಲ್ಲಿ ಬೆವರು ಹರಿಸುತ್ತಿದ್ದಾರೆ. ಇದರ ಫೋಟೋವನ್ನು ಅವರು  ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಆರ್​ಸಿಬಿಯ ಅಭ್ಯಾಸ ಪಂದ್ಯ:

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ತನ್ನ ಟೀಮ್ ಅನ್ನು ಎರಡು ತಂಡವಾಗಿ ವಿಭಾಗಿಸಿ ಅಭ್ಯಾಸ ಪಂದ್ಯವನ್ನು ಆಡಿತು. ಇದರಲ್ಲಿ ಆರ್​​ಸಿಬಿ ಬ್ಯಾಟರ್​ಗಳು ಧೂಳೆಬ್ಬಿಸಿದರು. ಫಾಫ್ ಡುಪ್ಲೆಸಿಸ್ ಇಲೆವೆನ್ ತಂಡ ಮತ್ತು ಹರ್ಷಲ್ ಪಟೇಲ್ ಇಲೆವೆನ್ ತಂಡಗಳಾಗಿ ವಿಂಗಡಿಸಿ ಅಭ್ಯಾಸ ಪಂದ್ಯವನ್ನು ಆಯೋಜಿಸಲಾಗಿತ್ತು. ಅಭ್ಯಾಸ ಪಂದ್ಯವನ್ನು ಫಾಫ್ ಡುಪ್ಲೆಸಿಸ್ ತಂಡ 2 ರನ್‌ಗಳಿಂದ ಪಂದ್ಯ ಗೆದ್ದುಕೊಂಡಿತು. ಫಾಫ್ ಇಲೆವೆನ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು. ಫಾಫ್ (40 ಎಸೆತಗಳಲ್ಲಿ 76) ಮತ್ತು ರುದರ್‌ಫೋರ್ಡ್ (59) ಅರ್ಧಶತಕ ಬಾರಿಸಿದರೆ, ಯುವ ಆಟಗಾರ ಅನುಜ್ ರಾವತ್ (46) ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಹರ್ಷಲ್ ಪಟೇಲ್ ಮೂರು ವಿಕೆಟ್ ಪಡೆದರು. ನಂತರ ಹರ್ಷಲ್ ಪಟೇಲ್ ತಂಡ ನಿಗದಿತ 20 ಓವರ್‌ಗಳಲ್ಲಿ 213 ರನ್ ಗಳಿಸಿ ಎರಡು ರನ್‌ಗಳಿಂದ ಸೋಲು ಕಂಡಿತು. ತಂಡದಲ್ಲಿ ಯುವ ಆಟಗಾರ ಸುಯೇಶ್ (46 ಎಸೆತಗಳಲ್ಲಿ 87) ಅರ್ಧಶತಕ ಗಳಿಸಿದರು. ದಿನೇಶ್ ಕಾರ್ತಿಕ್ (21 ಎಸೆತಗಳಲ್ಲಿ 49) ಮತ್ತು ಡೇವಿಡ್ ವಿಲ್ಲೆ (17 ಎಸೆತಗಳಲ್ಲಿ 25) ಉತ್ತಮ ಆಟ ಪ್ರದರ್ಶಿಸಿದರು. ಆಕಾಶ್ ದೀಪ್ ನಾಲ್ಕು ವಿಕೆಟ್, ಹಸರಂಗ ಮತ್ತು ಶಹಾಬಾಜ್ ತಲಾ ಒಂದು ವಿಕೆಟ್ ಕಿತ್ತರು.

ನಾಯಕನ ಮಾತು:

ಅಭ್ಯಾಸ ಪಂದ್ಯದ ಬಳಿಕ ಪ್ರತಿಕ್ರಿಯಿಸಿದ ಆರ್​ಸಿಬಿ ಫಾಫ್‌ ಡುಪ್ಲೆಸಿಸ್‌ ಆಟಗಾರರ ಪ್ರದರ್ಶನವನ್ನು ಹಾಡಿ ಹೊಗಳಿದ್ದಾರೆ. ಪ್ರಮುಖವಾಗಿ ಇಬ್ಬರು ಆಟಗಾರರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. “ದಿನೇಶ್‌ ಕಾರ್ತಿಕ್‌ ನಿಜಕ್ಕೂ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಆದರೆ ನಾನು ಆಕಾಶ್‌ ದೀಪ್‌ ಅವರ ಬೌಲಿಂಗ್‌ಗೆ ತುಂಬಾ ಆಕರ್ಷಿತನಾಗಿದ್ದೇನೆ. ಹೊಸ ಚೆಂಡಿನಲ್ಲಿ ಅವರು ಅದ್ಭುತವಾಗಿ ಬೌಲ್‌ ಮಾಡಿದ್ದರು. ಗುಡ್‌ ಹಾರ್ಡ್‌ ಲೆನ್ತ್‌ಗಳಲ್ಲಿ ಅವರು ಚೆಂಡನ್ನು ಹಾಕಿದ್ದರು. ಆಕಾಶ್‌ ದೀಪ್ ಅವರ ವೇಗ ನನಗೆ ಅಚ್ಚರಿ ಉಂಟು ಮಾಡಿತು. ಯುವ ವೇಗಿ ಮುಂಚೂಣಿಯಲ್ಲಿ ನಿಂತು ತಂಡವನ್ನು ಮುನ್ನಡೆಸುತ್ತಿರುವುದನ್ನು ನೋಡಲು ತುಂಬಾ ಖುಷಿಯಾಗುತ್ತಿದೆ,” ಎಂದು ಹೇಳಿದ್ದಾರೆ.

ಕೊಹ್ಲಿ ನೆಟ್​​ನಲ್ಲಿ ಅಭ್ಯಾಸ:

ವಿರಾಟ್ ಕೊಹ್ಲಿ ಆರ್​ಸಿಬಿಯ ಎರಡು ಟೀಮ್​ನ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಬದಲಾಗಿ ಇವರು ನೆಟ್​ನಲ್ಲಿ ಬೆವರು ಹರಿಸತ್ತಿದ್ದರು. ಹೌದು, ಆರ್​ಸಿಬಿ ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಫೋಟೋವನ್ನು ಹಂಚಿಕೊಂಡು, “ಮೊದಲ ಪಂದ್ಯಕ್ಕೆ ಕಾತುರನಾಗಿದ್ದೇನೆ. ಐಪಿಎಲ್​ ಬಗ್ಗೆ ಉತ್ಸುಕನಾಗಿದ್ದೇನೆ. ಟೂರ್ನಮೆಂಟ್ ಆರಂಭವಾಗುವುದಕ್ಕೂ ಮುನ್ನ ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟಂಗೆ ಆಗುತ್ತಿದೆ,” ಎಂದು ಬರೆದುಕೊಂಡಿದ್ದಾರೆ.

ಆರ್​ಸಿಬಿ ತಂಡದ ಸಂಪೂರ್ಣ ಆಟಗಾರರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್ (ನಾಯಕ), ಹರ್ಷಲ್ ಪಟೇಲ್, ವನಿಂದು ಹಸರಂಗಾ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರಾಯ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್.

IPL 2022: ಅಭ್ಯಾಸದ ವೇಳೆ ಎದುರೆದುರಾದ ಧೋನಿ-ಕೊಹ್ಲಿ: ಈ ಸಂದರ್ಭ ಏನಾಯಿತು ನೋಡಿ

CSK vs KKR, IPL 2022: ವಾಂಖೆಡೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?: ಟಾಸ್ ಗೆದ್ದ ತಂಡ ಏನನ್ನು ಆಯ್ಕೆ ಮಾಡಿಕೊಳ್ಳಬೇಕು?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ