AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಡಿಕೆಯ ಸೆಲ್ಫಿ ಕೇಳಿದ ಫ್ಯಾನ್: ಕರೆಯದಿದ್ದರೂ ಪೋಸ್ ನೀಡಿದ ಅಶ್ವಿನ್..!

Dinesh Karthik: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ಅರ್ಧಶತಕ ಹಾಗೂ ದಿನೇಶ್ ಕಾರ್ತಿಕ್ ಅವರ ಸ್ಪೋಟಕ 41 ರನ್​ಗಳ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್​ ಕಲೆಹಾಕಿತು.

Dinesh Karthik: ಡಿಕೆಯ ಸೆಲ್ಫಿ ಕೇಳಿದ ಫ್ಯಾನ್: ಕರೆಯದಿದ್ದರೂ ಪೋಸ್ ನೀಡಿದ ಅಶ್ವಿನ್..!
Ashwin-DK
TV9 Web
| Edited By: |

Updated on: Jul 30, 2022 | 3:59 PM

Share

ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಸೆಂಟ್​ ಕಿಟ್ಸ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 68 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಈ ಜಯದ ಬಳಿಕ ಗೆಲುವಿನ ರುವಾರಿಗಳಾದ ದಿನೇಶ್ ಕಾರ್ತಿಕ್ ಹಾಗೂ ರವಿಚಂದ್ರನ್ ಅಶ್ವಿನ್ ಬಿಸಿಸಿಐ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು. ಪಂದ್ಯದ ಬಗ್ಗೆ ಮಾತನಾಡಿದ ಈ ಇಬ್ಬರು ಬಳಿಕ ಡ್ರೆಸ್ಸಿಂಗ್ ರೂಮ್​ನತ್ತ ಮುಖ ಮಾಡಿದ್ದರು.

ಇದೇ ವೇಳೆ ಅಭಿಮಾನಿಯೊಬ್ಬರು ಬಂದು ದಿನೇಶ್ ಕಾರ್ತಿಕ್ ಅವರಲ್ಲಿ ಸೆಲ್ಫಿಗಾಗಿ ಮನವಿ ಮಾಡಿದ್ದಾರೆ. ಇತ್ತ ದಿನೇಶ್ ಕಾರ್ತಿಕ್ ಅಭಿಮಾನಿಯ ಜೊತೆ ಸೆಲ್ಫಿಗೆ ಪೋಸ್ ನೀಡುತ್ತಿದ್ದರೆ, ಅತ್ತ ಅಶ್ವಿನ್ ಅದನ್ನು ಗಮನಿಸದೇ ಮುಂದಕ್ಕೆ ತೆರಳಿದ್ದರು. ಆ ಬಳಿಕ ದಿನೇಶ್ ಕಾರ್ತಿಕ್ ಅಭಿಮಾನಿ ಜೊತೆ ಫೋಟೋ ತೆಗೆಸಿಕೊಳ್ಳುತ್ತಿರುವುದು ನೋಡಿದ ಅಶ್ವಿನ್, ನೇರವಾಗಿ ಬಂದು ಪಕ್ಕದಲ್ಲೇ ನಿಂತು ಫೋಟೋಗೆ ಪೋಸ್ ನೀಡಿದ್ದಾರೆ.

ವಿಶೇಷ ಎಂದರೆ ಅಶ್ವಿನ್ ಅವರಲ್ಲಿ ಸೆಲ್ಫಿಗೆ ಮನವಿ ಮಾಡದಿದ್ದರೂ, ಅವರೇ ಖುದ್ದು ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಅಶ್ವಿನ್ ಅವರ ಈ ವಿನಮ್ರತೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ಟಾರ್ ಆಟಗಾರನಾಗಿದ್ದರೂ ಅಭಿಮಾನಿಯೊಂದಿಗೆ ಸರಳವಾಗಿ ವರ್ತಿಸಿದ ಅಶ್ವಿನ್ ಅವರ ನಡೆಗೆ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ಅರ್ಧಶತಕ ಹಾಗೂ ದಿನೇಶ್ ಕಾರ್ತಿಕ್ ಅವರ ಸ್ಪೋಟಕ 41 ರನ್​ಗಳ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್​ ಕಲೆಹಾಕಿತು. 191 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾದ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ 101 ರನ್​ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡಿತು.

ಇದಾಗ್ಯೂ 20 ಓವರ್​ಗಳ ಬ್ಯಾಟಿಂಗ್ ಪೂರ್ಣಗೊಳಿಸಿದ ವಿಂಡೀಸ್ ಅಂತಿಮವಾಗಿ 8 ವಿಕೆಟ್ ನಷ್ಟಕ್ಕೆ 122 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 68 ರನ್​ಗಳ ಭರ್ಜರಿ ಜಯ ಸಾಧಿಸಿತು. ಕೇವಲ 19 ಎಸೆತಗಳಲ್ಲಿ 4 ಫೋರ್ ಹಾಗೂ 2 ಭರ್ಜರಿ ಸಿಕ್ಸ್ ಸಿಡಿಸಿ 41 ರನ್​ ಬಾರಿಸಿದ್ದ ದಿನೇಶ್ ಕಾರ್ತಿಕ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ