AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಮ್ ಕೊನ್​ಸ್ಟಾಸ್ ಜತೆ ಫೋಟೋ ಕ್ಲಿಕ್ಕಿಸಲು ಹೋಗಿ, ಕಾರು ಅಪಘಾತ ಮಾಡಿಕೊಂಡ ಅಭಿಮಾನಿ

Sam Konstas: ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಆಸ್ಟ್ರೇಲಿಯಾದಲ್ಲಿ ಸಿಕ್ಕಾಪಟ್ಟೆ ಸೆನ್ಸೇಷನ್ ಸೃಷ್ಟಿಸಿದ್ದಾರೆ. ವಿರಾಟ್ ಕೊಹ್ಲಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದ ಸ್ಯಾಮ್ ಆ ಬಳಿಕ ಜಸ್​ಪ್ರೀತ್ ಬುಮ್ರಾ ವಿರುದ್ಧ ವಾಗ್ಯುದ್ಧಕ್ಕೆ ಇಳಿದಿದ್ದರು. ಈ ಎರಡು ಘಟನೆಯೊಂದಿಗೆ ಎಲ್ಲರ ಗಮನ ಸೆಳೆದ ಕೊನ್​ಸ್ಟಾಸ್ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಸ್ಯಾಮ್ ಕೊನ್​ಸ್ಟಾಸ್ ಜತೆ ಫೋಟೋ ಕ್ಲಿಕ್ಕಿಸಲು ಹೋಗಿ, ಕಾರು ಅಪಘಾತ ಮಾಡಿಕೊಂಡ ಅಭಿಮಾನಿ
Sam Konstas
ಝಾಹಿರ್ ಯೂಸುಫ್
|

Updated on: Jan 16, 2025 | 1:03 PM

Share

ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶೀಸಿ ಆಸ್ಟ್ರೇಲಿಯಾದ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಹೀಗೆ ಸಂಪಾದಿಸಿದ ಅಭಿಯಾನಿಯೊಬ್ಬರು ಫೋಟೋ ಕ್ಲಿಕ್ಕಿಸಿಕೊಳ್ಳಲು ದುಡುಕಿ ಕಾರನ್ನು ಅಪಘಾತ ಮಾಡಿಕೊಂಡಿದ್ದಾರೆ. ಸ್ಯಾಮ್ ಕೊನ್​ಸ್ಟಾಸ್ ತಮ್ಮ ಬ್ಯಾಟಿಂಗ್ ಕಿಟ್​ನೊಂದಿಗೆ ಸಾಗುತ್ತಿರುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ತಕ್ಷಣವೇ ತಮ್ಮ ಕಾರನ್ನು ತಿರುಗಿಸಿದ್ದಾರೆ. ಅಲ್ಲದೆ ಪಕ್ಕದೇ ಪಾರ್ಕಿಂಗ್ ಮಾಡಿ ಫೋಟೋ ಕ್ಲಿಕ್ಕಿಸಲು ಓಡಿ ಹೋಗಿದ್ದಾರೆ.

ಆದರೆ ಹೀಗೆ ಕಾರಿಂದ ಇಳಿದು ಹೋಗುವ ಮುನ್ನ ಹ್ಯಾಂಡ್ ಬ್ರೇಕ್ ಹಾಕಲು ಮರೆತಿದ್ದ. ಅತ್ತ ಕೊನ್​ಸ್ಟಾಸ್ ಕಡೆಗೆ ಓಡುತ್ತಿದ್ದಂತೆ ಇತ್ತ ಕಾರು ಮುಂದೆ ಸಾಗಿದೆ. ಅಲ್ಲದೆ ಅಲ್ಲೇ ನಿಲ್ಲಿಸಲಾಗಿದ್ದ ಮತ್ತೊಂದು ಕಾರಿಗೆ ಗುದ್ದಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ನೆಟ್ಟಿಗರು ಕೊನ್​ಸ್ಟಾಸ್ ಎಫೆಕ್ಟ್ ಎಂದು ಹೆಸರು ನೀಡಿದ್ದಾರೆ.

ಸ್ಯಾಮ್ ಕೊನ್​ಸ್ಟಾಸ್ ಅಭಿಮಾನಿಯ ವಿಡಿಯೋ:

View this post on Instagram

A post shared by Sydney Thunder (@thunderbbl)

ಅಬ್ಬರಿಸಿದ್ದ ಕೊನ್​ಸ್ಟಾಸ್:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಸ್ಯಾಮ್ ಕೊನ್​ಸ್ಟಾಸ್ ಜಸ್​ಪ್ರೀತ್ ಬುಮ್ರಾ ಓವರ್​​ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಗಮನ ಸೆಳೆದಿದ್ದರು. ಅಲ್ಲದೆ ಚೊಚ್ಚಲ ಸರಣಿಯಲ್ಲಿ 1 ಅರ್ಧಶತಕದೊಂದಿಗೆ 113 ರನ್ ಬಾರಿಸಿ ಮಿಂಚಿದ್ದರು.

ಇದೀಗ 19 ವರ್ಷದ ಸ್ಯಾಮ್ ಕೊನ್​ಸ್ಟಾಸ್ ಆಸ್ಟ್ರೇಲಿಯಾದಲ್ಲಿ ಬಿಗ್ ಬ್ಯಾಷ್ ಲೀಗ್ ಆಡುತ್ತಿದ್ದಾರೆ. ಸಿಡ್ನಿ ಥಂಡರ್ ಪರ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಯುವ ದಾಂಡಿಗ ಎರಡು ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾ ಮಹಿಳೆಯರ ಅಬ್ಬರಕ್ಕೆ ಪುರುಷರ ದಾಖಲೆಯೇ ಉಡೀಸ್

ಈ ಮೂಲಕ ಆಸ್ಟ್ರೇಲಿಯಾ ಅಭಿಮಾನಿಗಳನ್ನು ತನ್ನತ್ತ ಸೆಳೆಯುವಲ್ಲಿ ಸ್ಯಾಮ್ ಕೊನ್​ಸ್ಟಾಸ್ ಯಶಸ್ವಿಯಾಗಿದ್ದು, ಇದೇ ಫಾರ್ಮ್ ಮುಂದುವರೆಸಿದರೆ ಮುಂಬರುವ ದಿನಗಳಲ್ಲಿ ಅವರು ಆಸ್ಟ್ರೇಲಿಯಾ ಟಿ20 ತಂಡದಲ್ಲೂ ಸ್ಥಾನ ಪಡೆಯುವುದರಲ್ಲಿ ಅನುಮಾನವೇ ಇಲ್ಲ.​

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ