AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಭಾರತ-ಶ್ರೀಲಂಕಾ ಪಂದ್ಯದ ವೇಳೆ ಸುಸಜ್ಜಿತ ಆಸ್ಪತ್ರೆಗಾಗಿ ಕನ್ನಡಿಗನ ಹೋರಾಟ

Asia Cup 2022: ತಿಂಗಳುಗಳ ಹಿಂದೆಯಷ್ಟೇ ಚಿಕಿತ್ಸೆಗೆಂದು ಉಡುಪಿ ಆಸ್ಪತ್ರೆಗೆ ಅಂಬ್ಯುಲೆನ್ಸ್‌ನಲ್ಲಿ ತೆರಳುತ್ತಿದ್ದ ಹೊನ್ನಾವರ ಮೂಲದ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದರು.

Asia Cup 2022: ಭಾರತ-ಶ್ರೀಲಂಕಾ ಪಂದ್ಯದ ವೇಳೆ ಸುಸಜ್ಜಿತ ಆಸ್ಪತ್ರೆಗಾಗಿ ಕನ್ನಡಿಗನ ಹೋರಾಟ
ಅಬ್ದುಲ್
TV9 Web
| Updated By: ಝಾಹಿರ್ ಯೂಸುಫ್|

Updated on:Sep 08, 2022 | 11:26 AM

Share

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಹೋರಾಟ ಮುಂದುವರೆದಿದೆ. ಆದರೆ ಈ ಬಾರಿ ಈ ಹೋರಾಟದ ಕೂಗು ಕೇಳಿಬಂದಿದ್ದು ದೂರದ ದುಬೈನಿಂದ. ಅದು ಕೂಡ ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಿಂದ ಎಂಬುದು ವಿಶೇಷ. ಏಷ್ಯಾಕಪ್​ನಲ್ಲಿನ ಸೂಪರ್-4 ಹಂತದ ಪಂದ್ಯದಲ್ಲಿ ಭಾರತ-ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿತ್ತು. ಎಲ್ಲರೂ ಟೀಮ್ ಇಂಡಿಯಾವನ್ನು ಹುರಿದುಂಬಿಸುತ್ತಿದ್ದರೆ, ಇತ್ತ ಹೊನ್ನಾವರದ ಅಬ್ದುಲ್ ಎನ್ನುವವರು ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪ್ರತೆ ಬೇಕೆಂದು ಬರಹವನ್ನು ಹಿಡಿದುಕೊಂಡು ನಿಂತು ಎಲ್ಲರ ಗಮನ ಸೆಳೆದಿದ್ದಾರೆ.

ಹೊನ್ನಾವರದ ಚಂದಾವರ ಮೂಲದವರಾಗಿರುವ ಅಬ್ದುಲ್ ಕೆಲ ವರ್ಷಗಳಿಂದ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ವೇಳೆ ಭಾರತ-ಶ್ರೀಲಂಕಾ ನಡುವಣ ಪಂದ್ಯವನ್ನು ವೀಕ್ಷಿಸಲು ತೆರಳಿದ್ದಾರೆ. ಅಲ್ಲದೆ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸುತ್ತಾ ಉತ್ತರ ಕನ್ನಡಕ್ಕೆ ಒಂದು ಸುಸಜ್ಜಿತ ಆಸ್ಪತ್ರೆ ಬೇಕೆಂಬ ಬರಹ ಪ್ರದರ್ಶಿಸಿ ಊರಿನ ಹೋರಾಟಗಾರರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇಷ್ಟು ದಿನ ರಾಜ್ಯದ ಜನರ ಗಮನ ಮಾತ್ರ ಸೆಳೆಯುತ್ತಿದ್ದ ಉತ್ತರ ಕನ್ನಡ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯ ಹೋರಾಟ ಇದೀಗ ಅಂತಾರಾಷ್ಟ್ರೀಯ ಮಟ್ಟದತ್ತ ಸಾಗುತ್ತಿದೆ. ಅಬ್ದುಲ್ ಅವರ ಈ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗಿದ್ದು, ಎಲ್ಲರೂ ಈ ರೀತಿಯಲ್ಲಿ ಸಂದರ್ಭಗಳನ್ನು ಬಳಸಿ ನಾಡಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣದ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಬೇಕೆಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆಸ್ಪತ್ರೆ ಇಲ್ಲದೆ ಅಲೆದಾಟ, ಅದುವೇ ಹೋರಾಟ:

ಉತ್ತರ ಕನ್ನಡ ಜಿಲ್ಲೆಯಲ್ಲೇ ಯಾವುದೇ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ, ಮಂಗಳೂರನ್ನು ಅವಲಂಭಿಸುವವರೇ ಹೆಚ್ಚು. ಹೀಗಾಗಿಯೇ ಸಾಮಾಜಿಕ ಹೋರಾಟಗಾರ ಆರ್‌.ಜಿ. ನಾಯ್ಕ ನೇತೃತ್ವದಲ್ಲಿ ವರ್ಷಗಳ ಹಿಂದೆ ನಡೆದ ಪಕ್ಷಾತೀತ ಸಭೆಯಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಹೊನ್ನಪ್ಪ ನಾಯಕ, ಬಿಜೆಪಿ ಮುಖಂಡರಾದ ಜಿ.ಐ ಹೆಗಡೆ, ಎಂ.ಎಂ. ಹೆಗಡೆ ಅನೇಕರು ಭಾಗವಹಿಸಿದ್ದರು. ಅಲ್ಲದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುಮಟಾದಲ್ಲಿ ಸ್ಥಾಪಿಸುವ ಒಮ್ಮತದ ನಿರ್ಣಯವನ್ನು ಸಹ ತೆಗೆದುಕೊಳ್ಳಲಾಗಿತ್ತು. ಅದರಂತೆ  ಜಿಲ್ಲೆಯ ಕೇಂದ್ರ ಸ್ಥಳವಾದ ಕುಮಟಾದಲ್ಲಿ ಸುಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂದು ಶಾಸಕ ಶಾಸಕ ದಿನಕರ ಶೆಟ್ಟಿ ಅವರ ನೇತೃತ್ವದಲ್ಲಿ ಸರಕಾರದ ಮೇಲೆ ಒತ್ತಡ ಹೇರಲಾಗಿತ್ತು.

ಅಷ್ಟೇ ಅಲ್ಲದೆ ಈ ಬೇಡಿಕೆ ಈಡೇರಿಸುವಂತೆ ಹಲವು ರೀತಿಯಲ್ಲಿ ಹೋರಾಟಗಳು ನಡೆದಿದ್ದವು. ಇದರ ಬಗ್ಗೆ ಮಾಹಿತಿ ಪಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಪರಿಶೀಲಿಸಿ ಬೇಡಿಕೆ ಈಡೇರಿಸುವ ಭರವಸೆಯನ್ನೂ ಸಹ ನೀಡಿದ್ದರು. ಆದರೆ ಇದಾಗಿ ತಿಂಗಳುಗಳು ಕಳೆದರೂ ಆಸ್ಪತ್ರೆ ನಿರ್ಮಾಣದ ಬಗ್ಗೆ ಸರ್ಕಾರದ ಕಡೆಯಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇನ್ನೊಂದೆಡೆ ತಿಂಗಳುಗಳ ಹಿಂದೆಯಷ್ಟೇ ಚಿಕಿತ್ಸೆಗೆಂದು ಉಡುಪಿ ಆಸ್ಪತ್ರೆಗೆ ಅಂಬ್ಯುಲೆನ್ಸ್‌ನಲ್ಲಿ ತೆರಳುತ್ತಿದ್ದ ಹೊನ್ನಾವರ ಮೂಲದ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆನ್ನುವ ಕೂಗುಗಳು ಮತ್ತೆ ಕೇಳಿಬಂದಿದ್ದವು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಈ ಹೋರಾಟ ಮುಂದುವರೆದಿತ್ತು.

ಇದೀಗ ಈ ಹೋರಾಟವನ್ನು ಬೆಂಬಲಿಸಿ ಭಾರತ-ಶ್ರೀಲಂಕಾ ನಡುವಣ ಪಂದ್ಯದ ವೇಳೆWe Need Emergency Hospital In Uttara Kannada ಎನ್ನುವ ಬರಹ ಪ್ರದರ್ಶಿಸಿ ಅಬ್ದುಲ್ ಮತ್ತೊಮ್ಮೆ ಸರ್ಕಾರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

Published On - 11:24 am, Thu, 8 September 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್