AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs SRH: ಡೆಲ್ಲಿ-ಹೈದರಾಬಾದ್ ಪಂದ್ಯದ ಮಧ್ಯೆ ಸ್ಟೇಡಿಯಂನಲ್ಲೇ ಹೊಡೆದಾಡಿಕೊಂಡ ಫ್ಯಾನ್ಸ್: ವೈರಲ್ ವಿಡಿಯೋ

Fans Fight DC vs SRH IPL 2023: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಮತ್ತು ಎಸ್​​ಆರ್​ಹೆಚ್ ಪಂದ್ಯ ನಡೆಯುತ್ತಿದ್ದರೆ ಇತ್ತ ಗ್ಯಾಲರಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಯಾವ ಕಾರಣಕ್ಕೆ ಜಗಳ ಆಗಿದೆ ಎಂಬ ಬಗ್ಗೆ ವರದಿ ಆಗಿಲ್ಲ.

DC vs SRH: ಡೆಲ್ಲಿ-ಹೈದರಾಬಾದ್ ಪಂದ್ಯದ ಮಧ್ಯೆ ಸ್ಟೇಡಿಯಂನಲ್ಲೇ ಹೊಡೆದಾಡಿಕೊಂಡ ಫ್ಯಾನ್ಸ್: ವೈರಲ್ ವಿಡಿಯೋ
Fans Fight DC vs SRH IPL 2023
Vinay Bhat
|

Updated on:Apr 30, 2023 | 12:25 PM

Share

ಮುಖ್ಯಾಂಶಗಳು

  • ಪಂದ್ಯದ ಮಧ್ಯೆ ಸ್ಟೇಡಿಯಂನಲ್ಲೇ ಹೊಡೆದಾಡಿಕೊಂಡ ಫ್ಯಾನ್ಸ್
  • ಗ್ಯಾಲರಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ
  • ಹೈವೋಲ್ಟೇಜ್ ಪಂದ್ಯದಲ್ಲಿ ಎಸ್​ಆರ್​ಹೆಚ್ಚ್​ಗೆ 9 ರನ್​ಗಳ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ (IPL 2023) ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ (DC vs SRH) ನಡುವಣ ಪಂದ್ಯ ರಣರೋಚಕವಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Delhi Stadium) ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಆ್ಯಡಂ ಮರ್ಕ್ರಮ್ ನಾಯಕತ್ವದ ಎಸ್​ಆರ್​ಹೆಚ್ 9 ರನ್​ಗಳ ರೋಚಕ ಗೆಲುವು ಸಾಧಿಸಿತು. ಈ ಕುತೂಹಲಕಾರಿ ಪಂದ್ಯ ವೀಕ್ಷಿಸಲು ಸ್ಟೇಡಿಯಂ ಸಂಪೂರ್ಣ ಭರ್ತಿ ಆಗಿತ್ತು. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಇದರ ನಡುವೆ ಸ್ಟೇಡಿಯಂನಲ್ಲಿ ನಾಚಿಕೆಗೇಡಿನ ಘಟನೆ ನಡೆದಿದೆ. ಡೆಲ್ಲಿ ಹಾಗೂ ಹೈದರಾಬಾದ್ ತಂಡದ ಅಭಿಮಾನಿಗಳು ಪಂದ್ಯದ ಮಧ್ಯೆ ಸ್ಟೇಡಿಯಂನಲ್ಲೇ ಹೊಡೆದಾಡಿಕೊಂಡಿದ್ದಾರೆ.

ಮೈದಾನದಲ್ಲಿ ಡೆಲ್ಲಿ ಮತ್ತು ಎಸ್​​ಆರ್​ಹೆಚ್ ಪಂದ್ಯ ನಡೆಯುತ್ತಿದ್ದರೆ ಇತ್ತ ಗ್ಯಾಲರಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಯಾವ ಕಾರಣಕ್ಕೆ ಜಗಳ ಆಗಿದೆ ಎಂಬ ಬಗ್ಗೆ ವರದಿ ಆಗಿಲ್ಲ. ಆದರೆ, ಕೈ-ಕೈ ಮಿಲಾಯಿಸಿಕೊಂಡು ಜಗಳವಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ದೆಹಲಿಯ ಕ್ರೀಡಾಂಗಣದಲ್ಲಿ ಪಂದ್ಯದ ಮಧ್ಯೆ ಈರೀತಿ ಜಗಳ ಆಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ನಡೆದ ಭಾರತ- ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಪಂದ್ಯದ ವೇಳೆಯೂ ಅಭಿಮಾನಿಗಳು ಹೊಡೆದಾಡಿಕೊಂಡಿದ್ದರು.

ಇದನ್ನೂ ಓದಿ
Image
Rohit Sharma Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿಟ್​ಮ್ಯಾನ್ ರೋಹಿತ್ ಶರ್ಮಾ: ಫೋಟೋ ನೋಡಿ
Image
Happy Birthday Rohit Sharma: 36ನೇ ವಸಂತಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
Image
Andre Russell: ಕ್ಯಾಚ್ ಬಿಟ್ಟಿದ್ದಕ್ಕೆ ತನ್ನದೇ ತಂಡದ ಆಟಗಾರನಿಗೆ ಮನಬಂದಂತೆ ಬೈದ ಆಂಡ್ರೆ ರಸೆಲ್
Image
CSK vs PBKS, IPL 2023: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಚೆನ್ನೈ-ಪಂಜಾಬ್ ಮತ್ತು ಮುಂಬೈ-ರಾಜಸ್ಥಾನ್ ನಡುವೆ ಹೈವೋಲ್ಟೇಜ್ ಪಂದ್ಯ

IPL 2023: ಡಾಟ್ ಬಾಲ್​ನಲ್ಲಿ ಶತಕ ಪೂರೈಸಿದ ಮೊಹಮ್ಮದ್ ಸಿರಾಜ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್​ರೈಸರ್​ಸ್ ಹೈದರಾಬಾದ್ ತಂಡ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದತು. ಆದರೆ, ಅಭಿಷೇಕ್ ಶರ್ಮಾ ಬಿರುಸಿನ ಬ್ಯಾಟಿಂಗ್ ತಂಡದ ರನ್​ಗತಿಯನ್ನು ಏರಿಸಿತು. ಮಯಾಂಕ್ ಅಗರ್ವಾಲ್ 5, ರಾಹುಲ್ ತ್ರಿಪಾಠಿ 10, ಆ್ಯಡಂ ಮರ್ಕ್ರಮ್ 8 ಹಾಗೂ ಹ್ಯಾರಿ ಬ್ರೂಕ್ ಸೊನ್ನೆ ಸುತ್ತಿದರು. ಅಭಿಷೇಕ್ 36 ಎಸೆತಗಳಲ್ಲಿ 67 ರನ್ ಬಾರಿಸಿದರು. ಅಂತಿಮ ಹಂತದಲ್ಲಿ ಹೆನ್ರಿಚ್ ಕ್ಲಾಸೆನ್ ಕೇವಲ 27 ಎಸೆತಗಳಲ್ಲಿ 2 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 53 ರನ್ ಹಾಗೂ ಅಬ್ದುಲ್ ಸಮದ್ ಅಜೇಯ 28 ರನ್ ಸಿಡಿಸಿದ ಪರಿಣಾಮ ಎಸ್​ಆರ್​ಹೆಚ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ರನ್ ಕಲೆಹಾಕಿತು. ಡೆಲ್ಲಿ ಪರ ಮಿಚೆಲ್ ಮಾರ್ಶ್ 4 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಮೊದಲ ಓವರ್​ನಲ್ಲೇ ಡೇವಿಡ್ ವಾರ್ನರ್(0) ವಿಕೆಟ್ ಕಳೆದುಕೊಂಡಿತು. ಆದರೆ, 2ನೇ ವಿಕೆಟ್​ಗೆ ಪಿಲಿಪ್ ಸಾಲ್ಟ್ (59) ಹಾಗೂ ಮಿಚೆಲ್ ಮಾರ್ಶ್ (63) ಶತಕದ ಜೊತೆಯಾಟ ಆಡಿ ತಂಡಕ್ಕೆ ಗೆಲುವಿನ ಆಸೆ ತಂದಿಟ್ಟರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡಿತು. ಮನೀಶ್ ಪಾಂಡೆ 1, ಪ್ರಿಯಂ ಗರ್ಗ್ 12, ಸರ್ಫರಾಜ್ ಖಾನ್ 9 ರನ್​ಗೆ ಬೇಗನೆ ಔಟಾದರು. ಅಕ್ಷರ್ ಪಟೇಲ್ ಅಜೇಯ 29 ರನ್ ಬಾರಿಸಿ ಹೋರಾಡಿದರೂ ಗೆಲುವು ಸಾಧ್ಯವಾಗಲಿಲ್ಲ. ಡೆಲ್ಲಿ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತಷ್ಟೆ. ಹೈದರಾಬಾದ್ ಪರ ಮಯಾಂಕ್ ಮಾರ್ಕಂಡೆ 2 ವಿಕೆಟ್ ಕಿತ್ತರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Sun, 30 April 23

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್