AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಫೈನಲ್​ ಪಂದ್ಯ ರದ್ದು: ಟೀಮ್ ಇಂಡಿಯಾಗೆ ಚಿನ್ನದ ಪದಕ

Asian Games: ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

Asian Games: ಫೈನಲ್​ ಪಂದ್ಯ ರದ್ದು: ಟೀಮ್ ಇಂಡಿಯಾಗೆ ಚಿನ್ನದ ಪದಕ
Team India
TV9 Web
| Edited By: |

Updated on:Oct 07, 2023 | 3:03 PM

Share

ಭಾರತ – ಅಫ್ಘಾನಿಸ್ತಾನ್ ನಡುವಣ ಏಷ್ಯನ್ ಗೇಮ್ಸ್​ ಕ್ರಿಕೆಟ್​ ಫೈನಲ್​ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ  ಟೂರ್ನಿಯುದ್ದಕೂ ಉತ್ತಮ ಪ್ರದರ್ಶನದೊಂದಿಗೆ  ಫೈನಲ್​ಗೆ ಪ್ರವೇಶಿಸಿದ ಟೀಮ್ ಇಂಡಿಯಾಗೆ ಚಿನ್ನದ ಪದಕ ಒಲಿದಿದೆ. ಇನ್ನು ಅಫ್ಘಾನಿಸ್ತಾನ್ ಬೆಳ್ಳಿ ಪದಕ ಗೆದ್ದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು. ಈ ಮೂಲಕ ಏಷ್ಯನ್ ಗೇಮ್ಸ್​ ಕ್ರಿಕೆಟ್​ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್ , ರುತುರಾಜ್ ಗಾಯಕ್ವಾಡ್ (ನಾಯಕ) , ತಿಲಕ್ ವರ್ಮಾ , ವಾಷಿಂಗ್ಟನ್ ಸುಂದರ್ , ಶಿವಂ ದುಬೆ , ರಿಂಕು ಸಿಂಗ್ , ಜಿತೇಶ್ ಶರ್ಮಾ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ರವಿ ಬಿಷ್ಣೋಯ್ , ಸಾಯಿ ಕಿಶೋರ್ , ಅರ್ಶ್ದೀಪ್ ಸಿಂಗ್, ರಾಹುಲ್ ತ್ರಿಪಾಠಿ , ಅವೇಶ್ ಖಾನ್ , ಮುಖೇಶ್ ಕುಮಾರ್ , ಪ್ರಭ್​ಸಿಮ್ರಾನ್ ಸಿಂಗ್ , ಆಕಾಶ್ ದೀಪ್.

ಇದನ್ನೂ ಓದಿ: ಟೀಮ್ ಇಂಡಿಯಾ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್..!

ಅಫ್ಘಾನಿಸ್ತಾನ್ ತಂಡ: ಝುಬೈದ್ ಅಕ್ಬರಿ , ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್) , ನೂರ್ ಅಲಿ ಜದ್ರಾನ್ , ಅಫ್ಸರ್ ಝಜೈ , ಶಾಹಿದುಲ್ಲಾ ಕಮಾಲ್ , ಕರೀಂ ಜನತ್ , ಗುಲ್ಬದಿನ್ ನೈಬ್ (ನಾಯಕ) , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ಫರೀದ್ ಅಹ್ಮದ್ ಮಲಿಕ್ , ಝಹೀರ್ ಖಾನ್, ಸೇದಿಕುಲ್ಲಾ ಅಟಲ್ , ಸೈಯದ್ ಶಿರ್ಜಾದ್ , ನಿಜತ್ ಮಸೂದ್ , ವಫಿವುಲ್ಲಾ ತಾರಖಿಲ್.

Published On - 2:49 pm, Sat, 7 October 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ