AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಫೈನಲ್​ ಪಂದ್ಯ ರದ್ದು: ಟೀಮ್ ಇಂಡಿಯಾಗೆ ಚಿನ್ನದ ಪದಕ

Asian Games: ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

Asian Games: ಫೈನಲ್​ ಪಂದ್ಯ ರದ್ದು: ಟೀಮ್ ಇಂಡಿಯಾಗೆ ಚಿನ್ನದ ಪದಕ
Team India
TV9 Web
| Edited By: |

Updated on:Oct 07, 2023 | 3:03 PM

Share

ಭಾರತ – ಅಫ್ಘಾನಿಸ್ತಾನ್ ನಡುವಣ ಏಷ್ಯನ್ ಗೇಮ್ಸ್​ ಕ್ರಿಕೆಟ್​ ಫೈನಲ್​ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ  ಟೂರ್ನಿಯುದ್ದಕೂ ಉತ್ತಮ ಪ್ರದರ್ಶನದೊಂದಿಗೆ  ಫೈನಲ್​ಗೆ ಪ್ರವೇಶಿಸಿದ ಟೀಮ್ ಇಂಡಿಯಾಗೆ ಚಿನ್ನದ ಪದಕ ಒಲಿದಿದೆ. ಇನ್ನು ಅಫ್ಘಾನಿಸ್ತಾನ್ ಬೆಳ್ಳಿ ಪದಕ ಗೆದ್ದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು. ಈ ಮೂಲಕ ಏಷ್ಯನ್ ಗೇಮ್ಸ್​ ಕ್ರಿಕೆಟ್​ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್ , ರುತುರಾಜ್ ಗಾಯಕ್ವಾಡ್ (ನಾಯಕ) , ತಿಲಕ್ ವರ್ಮಾ , ವಾಷಿಂಗ್ಟನ್ ಸುಂದರ್ , ಶಿವಂ ದುಬೆ , ರಿಂಕು ಸಿಂಗ್ , ಜಿತೇಶ್ ಶರ್ಮಾ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ರವಿ ಬಿಷ್ಣೋಯ್ , ಸಾಯಿ ಕಿಶೋರ್ , ಅರ್ಶ್ದೀಪ್ ಸಿಂಗ್, ರಾಹುಲ್ ತ್ರಿಪಾಠಿ , ಅವೇಶ್ ಖಾನ್ , ಮುಖೇಶ್ ಕುಮಾರ್ , ಪ್ರಭ್​ಸಿಮ್ರಾನ್ ಸಿಂಗ್ , ಆಕಾಶ್ ದೀಪ್.

ಇದನ್ನೂ ಓದಿ: ಟೀಮ್ ಇಂಡಿಯಾ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್..!

ಅಫ್ಘಾನಿಸ್ತಾನ್ ತಂಡ: ಝುಬೈದ್ ಅಕ್ಬರಿ , ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್) , ನೂರ್ ಅಲಿ ಜದ್ರಾನ್ , ಅಫ್ಸರ್ ಝಜೈ , ಶಾಹಿದುಲ್ಲಾ ಕಮಾಲ್ , ಕರೀಂ ಜನತ್ , ಗುಲ್ಬದಿನ್ ನೈಬ್ (ನಾಯಕ) , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ಫರೀದ್ ಅಹ್ಮದ್ ಮಲಿಕ್ , ಝಹೀರ್ ಖಾನ್, ಸೇದಿಕುಲ್ಲಾ ಅಟಲ್ , ಸೈಯದ್ ಶಿರ್ಜಾದ್ , ನಿಜತ್ ಮಸೂದ್ , ವಫಿವುಲ್ಲಾ ತಾರಖಿಲ್.

Published On - 2:49 pm, Sat, 7 October 23

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ