ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್ ಆಯ್ಕೆ, ಅಧಿಕೃತ ಘೋಷಣೆ!

Gautam Gambhir Team India Head Coach: ಟೀಂ ಇಂಡಿಯಾಗೆ ಕೊನೆಗೂ ಹೊಸ ಕೋಚ್‌ ಆಯ್ಕೆಯಾಗಿದೆ. ನಿರೀಕ್ಷೆಯಂತೆ ಗೌತಮ್ ಗಂಭೀರ್ ಅವರು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮೂಲಕ ಗೌತಮ್ ಗಂಭೀರ್ ರಾಹುಲ್ ದ್ರಾವಿಡ್ ಅವರ ಸ್ಥಾನನ್ನು ಅಲಂಕರಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್ ಆಯ್ಕೆ, ಅಧಿಕೃತ ಘೋಷಣೆ!
ಗೌತಮ್ ಗಂಭೀರ್
Follow us
|

Updated on:Jul 09, 2024 | 8:42 PM

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್​ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.

2021ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಹೆಡ್‌ ಕೋಚ್‌ ಆಗಿ ನೇಮಕಗೊಂಡಿದ್ದ ರಾಹುಲ್‌ ದ್ರಾವಿಡ್‌ ಅವರ ಅವಧಿ 2024ರ ಟಿ20 ವಿಶ್ವಕಪ್‌ ಟೂರ್ನಿಯ ಬಳಿಕ ಅಂತ್ಯವಾಗಿದೆ. ವೆಸ್ಟ್ ಇಂಡೀಸ್‌ ಹಾಗೂ ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿದೆ. ದ್ರಾವಿಡ್‌ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ.

ಇದನ್ನೂ ಓದಿ: IPL 2025: ರಾಹುಲ್ ದ್ರಾವಿಡ್ KKR ತಂಡದ ಮೆಂಟರ್?

ಇನ್ನು ಟೀಂ ಇಂಡಿಯಾದ ಕೋಚ್ ಆಗಿ ಬಿಸಿಸಿಐ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ಭಾರತವು ನನ್ನ ಗುರುತಾಗಿದೆ. ಮತ್ತು ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಅವಕಾಶ. ಬೇರೆ ಟೋಪಿ ಧರಿಸಿದ್ದರೂ ನಾನು ಹಿಂತಿರುಗಿದ್ದಕ್ಕೆ ನನಗೆ ಗೌರವವಿದೆ. ಆದರೆ ನನ್ನ ಗುರಿ ಮೊದಲಿನಂತೆಯೇ ಇದೆ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತೆ ಮಾಡುವುದು. ಬ್ಲ್ಯೂ ಬಾಯ್ಸ್ 1.4 ಬಿಲಿಯನ್ ಭಾರತೀಯರ ಕನಸುಗಳನ್ನು ನನಸಾಗಿಸುತ್ತಾರೆ ಮತ್ತು ಈ ಕನಸುಗಳನ್ನು ನನಸಾಗಿಸಲು ನಾನು ನನ್ನ ಶಕ್ತಿಯಿಂದ ಎಲ್ಲವನ್ನೂ ಮಾಡುತ್ತೇನೆ ಎಂದು ವಿಶ್ವಾಸದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಗೌತಮ್ ಗಂಭೀರ್ ಆಯ್ಕೆಗೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ನೇರವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಸಿಸಿಐ ಸಂದರ್ಶನದಲ್ಲಿ ಗಂಭೀರ್​ಗೆ ಪ್ರತಿಸ್ಪರ್ಧಿಯಾಗಿ ಡಬ್ಲ್ಯು.ವಿ ರಾಮನ್ ಕಾಣಿಸಿಕೊಂಡಿದ್ದರು.

2021 ರಲ್ಲಿ ಭಾರತ ಮಹಿಳಾ ತಂಡದ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ರಾಮನ್ ಅವರ ಎಂಟ್ರಿಯೊಂದಿಗೆ ಭಾರತ ತಂಡದ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿತ್ತು. ಇದೀಗ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನು ಗೌತಮ್ ಗಂಭೀರ್ ಅಲಂಕರಿಸಿದ್ದಾರೆ.

ಇನ್ನು ಟೀಮ್​ ಇಂಡಿಯಾ ಕೋಚ್​ ಹುದ್ದೆಯಿಂದ ನಿವೃತ್ತಿಯಾಗಿರುವ ರಾಹುಲ್ ದ್ರಾವಿಡ್ ಇನ್ನು ಮುಂದೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಕೋಲ್ಕತ್ತಾ ನೈಟ್​ ರೇಡರ್ಸ್(KKR) ಫ್ರಾಂಚೈಸಿಯು ದ್ರಾವಿಡ್​ ಅವರನ್ನು ಮೆಂಟರ್​ ಆಗಿ ನೇಮಕ ಮಾಡಲು ಈಗಾಗಲೇ ಮಾತುಕತೆ ನಡೆಸಿದೆ ಎಂಬ ಅಂತೆ-ಕಂತೆ ಸುದ್ದಿ ಓಡಾಡುತ್ತಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Tue, 9 July 24

ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ