AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಸರಣಿಗೆ ಅಫ್ಘಾನಿಸ್ತಾನ್ ಕಿರಿಯರ ತಂಡವನ್ನು ಕಳಿಸಿದ ತಾಲಿಬಾನ್

ಅಫ್ಘಾನ್-ಬಾಂಗ್ಲಾ ಅಂಡರ್ 19 ಸರಣಿ ಸೆಪ್ಟೆಂಬರ್ 10 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಐದು ಏಕದಿನ ಪಂದ್ಯಗಳನ್ನು ಹಾಗೂ ನಾಲ್ಕು ದಿನದ 1 ಪಂದ್ಯವನ್ನು ಆಡಲಿದೆ.

ಬಾಂಗ್ಲಾ ಸರಣಿಗೆ ಅಫ್ಘಾನಿಸ್ತಾನ್ ಕಿರಿಯರ ತಂಡವನ್ನು ಕಳಿಸಿದ ತಾಲಿಬಾನ್
Afghan Cricket Team
TV9 Web
| Edited By: |

Updated on: Sep 05, 2021 | 4:46 PM

Share

ಅಫ್ಘಾನಿಸ್ತಾನವನ್ನು (Afghanistan) ತಾಲಿಬಾನ್​ (Taliban) ವಶಪಡಿಸಿಕೊಂಡ ಬಳಿಕ ಕೇಳಿ ಅಫ್ಘಾನ್ ಕ್ರಿಕೆಟ್ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿತ್ತು. ಮನರಂಜನೆ, ಮಹಿಳಾ ಸ್ವಾತಂತ್ರ್ಯಗಳಿಗೆ ನಿರ್ಬಂಧ ಹೇರಿದ್ದ ತಾಲಿಬಾನಿಗಳು ಕ್ರಿಕೆಟ್ ಆಡಲು ಅವಕಾಶ ನೀಡುವುದು ಕೂಡ ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ಕ್ರಿಕೆಟ್ ಆಡಲು ಸಂಪೂರ್ಣ ಸ್ವಾತಂತ್ರ್ಯ ನೀಡುವುದಾಗಿ ತಾಲಿಬಾನಿಗಳು ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ನಿಗದಿಯಾಗಿರುವ ಸರಣಿಯನ್ನೂ ಕೂಡ ಅಫ್ಘಾನಿಸ್ತಾನ್ ಆಡಲಿದೆ ಎಂದು ತಿಳಿಸಿದೆ. ಇದರ ಬೆನ್ನಲ್ಲೇ ಅಫ್ಘಾನಿಸ್ತಾನ್ ಅಂಡರ್ 19 ತಂಡವನ್ನು ತಾಲಿಬಾನಿಗಳು ಬಾಂಗ್ಲಾದೇಶದ (Bangladesh) ವಿರುದ್ದದ ಸರಣಿಗೆ ಕಳುಹಿಸಿಕೊಟ್ಟಿದೆ. ಅಫ್ಘಾನಿಸ್ತಾನ್ ತಾಲಿಬಾನಿಗಳ ವಶವಾದ ಬಳಿಕ ಇದು ಅಫ್ಘಾನ್ ಕ್ರಿಕೆಟ್​ನ ಮೊದಲ ವಿದೇಶಿ ಪ್ರವಾಸ ಎಂಬುದು ವಿಶೇಷ. ಇದರೊಂದಿಗೆ ಮುಂದಿನ ಟಿ20 ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ತಂಡ ಭಾಗವಹಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

ಈ ಹಿಂದೆ ನಿಗದಿಪಡಿಸಿದಂತೆ ಅಂಡರ್​ 19 ಸರಣಿ ನಡೆಯುತ್ತಿದ್ದು, ಇದಕ್ಕಾಗಿಅಫ್ಘಾನಿಸ್ತಾನ್ ತಂಡದ 8 ಆಟಗಾರರು ಢಾಕಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಅರೆ. ಇನ್ನು ಉಳಿದ ಆಟಗಾರರು ಇತರೆ ಎರಡು ಗುಂಪುಗಳಾಗಿ ಆಗಮಿಸಲಿದ್ದಾರೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ವಕ್ತಾಯ ರಬೀದ್ ಇಮಾಮ್ ತಿಳಿಸಿದ್ದಾರೆ.

ಅಫ್ಘಾನ್-ಬಾಂಗ್ಲಾ ಅಂಡರ್ 19 ಸರಣಿ ಸೆಪ್ಟೆಂಬರ್ 10 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಐದು ಏಕದಿನ ಪಂದ್ಯಗಳನ್ನು ಹಾಗೂ ನಾಲ್ಕು ದಿನದ 1 ಪಂದ್ಯವನ್ನು ಆಡಲಿದೆ. ಎಲ್ಲಾ ಪಂದ್ಯಗಳು ಸಿಲ್ಹೆಟ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 10 ರಿಂದ 25 ರವರೆಗೆ ಸರಣಿ ಜರುಗಲಿದೆ.

ಈ ಸರಣಿಯೊಂದಿಗೆ ಮತ್ತೆ ಅಫ್ಘಾನಿಸ್ತಾನ್ ಕ್ರಿಕೆಟ್​ಗೆ ಚಾಲನೆ ನೀಡಲು ತಾಲಿಬಾನಿಗಳು ನಿರ್ಧರಿಸಿದ್ದಾರೆ. ಇದಾಗ್ಯೂ ಟಿ20 ವಿಶ್ವಕಪ್​ಗೆ ಅಫ್ಘಾನ್ ತಂಡದ ಆಯ್ಕೆ ಬಗ್ಗೆ ಇನ್ನೂ ಕೂಡ ಅಫ್ಘಾನಿಸ್ತಾನ್ ಕ್ರಿಕೆಟ್ ಮಂಡಳಿ ನಿರ್ಧಾರ ತೆಗೆದುಕೊಂಡಿಲ್ಲ. ಸೆಪ್ಟೆಂಬರ್ 10 ರೊಳಗೆ ಟಿ20 ವಿಶ್ವಕಪ್​ಗೆ ತಂಡವನ್ನು ಪ್ರಕಟಿಸಬೇಕಿದ್ದು, ಹೀಗಾಗಿ ಚುಟುಕು ಕದನದಲ್ಲಿ ಅಫ್ಘಾನಿಸ್ತಾನದ ಭಾಗವಹಿಸುವಿಕೆ ಈ ವಾರದೊಳಗೆ ಸ್ಪಷ್ಟವಾಗಲಿದೆ.

ಇದನ್ನೂ ಓದಿ: IPL 2021: ಈ ಸಲ ಕಪ್ ನಮ್ದೆ ಎಂದ RCB ತಂಡದ ಬಿಗ್ ಫ್ಯಾನ್

ಇದನ್ನೂ ಓದಿ: ಪರಿಸರ ಸ್ನೇಹಿ ಗಣೇಶ ವಿಗ್ರಹಗಳು; ಧಾರವಾಡದ ಕಲಾವಿದ ಕುಟುಂಬದ ಅದ್ಭುತ ಕಾರ್ಯ

ಇದನ್ನೂ ಓದಿ: ಮೊಬೈಲ್ ಬಳಕೆದಾರರ ಗಮನಕ್ಕೆ: ಇನ್ಮುಂದೆ ಈ ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುವುದಿಲ್ಲ

(First Afghan Cricket Team In Taliban Era Arrives In Bangladesh)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ