Mumbai Indians: ಟಾಸ್ ಮೂಲಕ ನಿರ್ಧಾರವಾಗಲಿದೆ ಮುಂಬೈ ಇಂಡಿಯನ್ಸ್​ ಪ್ಲೇಆಫ್​ ಭವಿಷ್ಯ..!

Mumbai Indians Playoff Chances: ಸನ್​ರೈಸರ್ಸ್​ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ 171 ರನ್​ಗಳ ಬೃಹತ್ ಅಂತರದಿಂದ ಗೆದ್ದರೆ ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಬಹುದು.

Mumbai Indians: ಟಾಸ್ ಮೂಲಕ ನಿರ್ಧಾರವಾಗಲಿದೆ ಮುಂಬೈ ಇಂಡಿಯನ್ಸ್​ ಪ್ಲೇಆಫ್​ ಭವಿಷ್ಯ..!
Mi vs Srh
Follow us
| Updated By: ಝಾಹಿರ್ ಯೂಸುಫ್

Updated on:Oct 08, 2021 | 3:23 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 (IPL 2021) ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತ ಕೊನೆಯ ದಿನ (ಅ.08) 2 ಪಂದ್ಯಗಳು ನಡೆಯಲಿದ್ದು, ಈ ಎರಡೂ ಪಂದ್ಯಗಳು ಏಕಕಾಲಕ್ಕೆ ನಡೆಯುತ್ತಿರುವುದು ವಿಶೇಷ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (DC)​, ಚೆನ್ನೈ ಸೂಪರ್ ಕಿಂಗ್ಸ್​ (CSK) ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಇದೀಗ 55ನೇ ಪಂದ್ಯದ ಮೂಲಕ ಪ್ಲೇಆಫ್​ ಪ್ರವೇಶಿಸಲಿರುವ 4ನೇ ತಂಡ ಯಾವುದು ಎಂಬುದು ನಿರ್ಧಾರವಾಗಲಿದೆ. ಏಕೆಂದರೆ ಗುರುವಾರ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ (KKR) ತಂಡವು ರಾಜಸ್ಥಾನ್​ ರಾಯಲ್ಸ್ (RR)​ ವಿರುದ್ದ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ 5ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ಗೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಇದೆ. ಆದರೆ ಅದು ಪವಾಡ ರೂಪದಲ್ಲಿ ಗೆಲುವು ದಾಖಲಿಸಿದರೆ ಮಾತ್ರ.

ಅಂದರೆ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ 171 ರನ್​ಗಳ ಬೃಹತ್ ಅಂತರದಿಂದ ಗೆದ್ದರೆ ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲೇಬೇಕು. ಒಂದು ವೇಳೆ ಟಾಸ್ ಗೆದ್ದು ಸನ್​ರೈಸರ್ಸ್​ ಹೈದರಾಬಾದ್ ತಂಡವು ಬ್ಯಾಟಿಂಗ್ ಆಯ್ದುಕೊಂಡರೆ ಮುಂಬೈ ಪ್ಲೇಆಫ್​ ರೇಸ್​ನಿಂದ ಅಧಿಕೃತವಾಗಿ ಹೊರಬೀಳಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ಸನ್​ರೈಸರ್ಸ್​ ವಿರುದ್ದ​ ಚೇಸ್ ಮಾಡಿ ಗೆದ್ದರೂ ಕೆಕೆಆರ್ ತಂಡದ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿ, ಬೃಹತ್ ಮೊತ್ತ ಪೇರಿಸಿ 171 ರನ್​ಗಳ ಅಂತರದಿಂದ ರೋಹಿತ್ ಪಡೆ ಗೆಲ್ಲಲೇಬೇಕು.

ಇತ್ತ ಸನ್​ರೈಸರ್ಸ್​ ಹೈದರಾಬಾದ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡರೆ ಮುಂಬೈ ಇಂಡಿಯನ್ಸ್​ ತಂಡದ ಪ್ಲೇಆಫ್​ ಕನಸು ನುಚ್ಚು ನೂರಾಗಲಿದೆ. ಹೀಗಾಗಿ ಟಾಸ್ ಪ್ರಕ್ರಿಯೆ ಮುಂಬೈ ಇಂಡಿಯನ್ಸ್​ ಪ್ಲೇಆಫ್​ ಭವಿಷ್ಯವನ್ನು ನಿರ್ಧರಿಸಲಿದೆ. ಒಂದು ವೇಳೆ ಮುಂಬೈ ಟಾಸ್ ಸೋತರೆ ಕೆಕೆಆರ್​ ಪ್ಲೇಆಫ್ ಆಡುವುದು ಅಧಿಕೃತವಾಗಲಿದೆ. ಕಳೆದ 13 ಸೀಸನ್​ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟಾಸ್ ಪ್ರಕ್ರಿಯೆಯು ತಂಡವೊಂದರ ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸುತ್ತಿರುವುದು ವಿಶೇಷ. ಹೀಗಾಗಿ ಮುಂಬೈ ಇಂಡಿಯನ್ಸ್​-ಸನ್​ರೈಸರ್ಸ್​ ಹೈದರಾಬಾದ್​ ಪಂದ್ಯವು ಟಾಸ್ ಕಾರಣದಿಂದ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅದರಂತೆ ಶಾರ್ಜಾ ಮೈದಾನದಲ್ಲಿ ಯಾರು ಟಾಸ್ ಗೆಲ್ಲಲಿದ್ದಾರೆ? ಕಾದು ನೋಡಬೇಕಿದೆ.

ಇದನ್ನೂ ಓದಿ:  IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ…

ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

(first time a toss will decide a team’s fate for the playoffs spot)

Published On - 3:22 pm, Fri, 8 October 21

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ