AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಾಕ್ ತ್ರಿಮೂರ್ತಿಗಳು

India vs Pakistan: ರೋಹಿತ್ ಶರ್ಮಾ (11) ರನ್ನು ಕ್ಲೀನ್ ಬೌಲ್ಡ್ ಮಾಡಿದ ಎಡಗೈ ವೇಗಿ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (4) ಯ ವಿಕೆಟ್ ಪಡೆದರು. ಆ ಬಳಿಕ ಬಲಗೈ ವೇಗಿ ಹ್ಯಾರಿಸ್ ರೌಫ್ ಶ್ರೇಯಸ್ ಅಯ್ಯರ್ (14) ಅವರನ್ನು ಪೆವಿಲಿಯನ್​ಗೆ ಕಳುಹಿಸಿದರು. ಇನ್ನು ಶುಭ್​ಮನ್ ಗಿಲ್ (6) ರೌಫ್ ಎಸೆತದಲ್ಲಿ ಕ್ಲೀನ್ ಬೌಲ್ಡ್​ ಆದರು.

ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಾಕ್ ತ್ರಿಮೂರ್ತಿಗಳು
Pakistan Trio
TV9 Web
| Edited By: |

Updated on: Sep 02, 2023 | 8:52 PM

Share

ಏಷ್ಯಾಕಪ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ಪಾಕಿಸ್ತಾನ್ (Pakistan) ತಂಡದ ಮೂವರು ವೇಗಿಗಳು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ (Team India) ವಿರುದ್ಧ ಎಂಬುದು ವಿಶೇಷ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್​ನ 3ನೇ ಪಂದ್ಯದಲ್ಲಿ ಇಂತಹದೊಂದು ಅಪರೂಪದ ದಾಖಲೆ ನಿರ್ಮಾಣವಾಗಿದೆ. ಪಾಕಿಸ್ತಾನ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಬೌಲಿಂಗ್ ಆರಂಭಿಸಿದ ಪಾಕಿಸ್ತಾನ್ ತಂಡಕ್ಕೆ ಶಾಹೀನ್ ಅಫ್ರಿದಿ ಮೊದಲ ಯಶಸ್ಸು ತಂದುಕೊಟ್ಟಿದ್ದರು.

ರೋಹಿತ್ ಶರ್ಮಾ (11) ರನ್ನು ಕ್ಲೀನ್ ಬೌಲ್ಡ್ ಮಾಡಿದ ಎಡಗೈ ವೇಗಿ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (4) ಯ ವಿಕೆಟ್ ಪಡೆದರು. ಆ ಬಳಿಕ ಬಲಗೈ ವೇಗಿ ಹ್ಯಾರಿಸ್ ರೌಫ್ ಶ್ರೇಯಸ್ ಅಯ್ಯರ್ (14) ಅವರನ್ನು ಪೆವಿಲಿಯನ್​ಗೆ ಕಳುಹಿಸಿದರು. ಇನ್ನು ಶುಭ್​ಮನ್ ಗಿಲ್ (6) ರೌಫ್ ಎಸೆತದಲ್ಲಿ ಕ್ಲೀನ್ ಬೌಲ್ಡ್​ ಆದರು.

ಈ ಹಂತದಲ್ಲಿ ಜೊತೆಯಾದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ 138 ರನ್​ಗಳ ಜೊತೆಯಾಟವಾಡುವ ಮೂಲಕ ಟೀಮ್ ಇಂಡಿಯಾಗೆ ಆಸರೆಯಾದರು. ಆದರೆ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕೊನೆಗೂ ಹ್ಯಾರಿಸ್ ರೌಫ್ ಯುಶಸ್ವಿಯಾದರು.

ಇಶಾನ್ ಕಿಶನ್ (82) ವಿಕೆಟ್ ಪಡೆದು ರೌಫ್ ಪಾಕ್ ತಂಡಕ್ಕೆ 5ನೇ ಯಶಸ್ಸು ತಂದುಕೊಟ್ಟರೆ, ಇದರ ಬೆನ್ನಲ್ಲೇ ಶಾಹೀನ್ ಅಫ್ರಿದಿ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ (87) ಔಟಾದರು.

ಆ ನಂತರ ಬಂದ ರವೀಂದ್ರ ಜಡೇಜಾ (14) ಶಾಹೀನ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚಿತ್ತರು. ಇನ್ನು ಯುವ ವೇಗಿ ನಸೀಮ್ ಶಾ ಎಸೆತದಲ್ಲಿ ಶಾರ್ದೂಲ್ ಠಾಕೂರ್ (3) ಕ್ಯಾಚ್ ನೀಡಿ ನಿರ್ಗಮಿಸಿದರು. 49ನೇ ಓವರ್​ನಲ್ಲಿ ಕುಲ್ದೀಪ್ ಯಾದವ್ (4) ಹಾಗೂ ಜಸ್​ಪ್ರೀತ್ ಬುಮ್ರಾ (16) ವಿಕೆಟ್ ಪಡೆಯುವ ಮೂಲಕ ನಸೀಮ್ ಶಾ ಟೀಮ್ ಇಂಡಿಯಾವನ್ನು 266 ರನ್​ಗಳಿಗೆ ಆಲೌಟ್ ಮಾಡಿದರು. ಇದರೊಂದಿಗೆ ವಿಶೇಷ ದಾಖಲೆ ಪಾಕ್ ವೇಗಿಗಳ ಪಾಲಾಯಿತು.

ಪಾಕ್​ ವೇಗಿಗಳ ಪರಾಕ್ರಮ:

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಟೀಮ್ ಇಂಡಿಯಾದ 10 ಬ್ಯಾಟರ್​ಗಳು ವಿಕೆಟ್ ಒಪ್ಪಿಸಿರುವುದು ಪಾಕಿಸ್ತಾನದ ಮೂವರು ವೇಗಿಗಳಿಗೆ ಎಂಬುದು. ಅಂದರೆ ಜೊತೆಯಾಗಿ 27.5 ಓವರ್​ಗಳನ್ನು ಎಸೆದ ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಹಾಗೂ ನಸೀಮ್ ಶಾ ಒಟ್ಟು 129 ರನ್​ಗಳನ್ನು ನೀಡಿ 10 ವಿಕೆಟ್​ಗಳನ್ನು ಕಬಳಿಸಿದ್ದರು.

ಈ ಮೂಲಕ ಏಷ್ಯಾಕಪ್​ ಇತಿಹಾಸದಲ್ಲೇ ತಂಡವೊಂದನ್ನು ವೇಗಿಗಳು ಮಾತ್ರ ಸೇರಿ ಆಲೌಟ್ ಮಾಡಿದ ವಿಶೇಷ ದಾಖಲೆಯನ್ನು ಪಾಕ್ ಬೌಲರ್​ಗಳು ನಿರ್ಮಿಸಿದರು. ಏಷ್ಯಾಕಪ್​ನ 15 ಆವೃತ್ತಿಗಳ ಇತಿಹಾಸದಲ್ಲಿ ಇಂತಹದೊಂದು ಸಾಧನೆಯನ್ನು ಯಾವುದೇ ತಂಡದ ವೇಗದ ಬೌಲರ್​ಗಳು ಮಾಡಿರಲಿಲ್ಲ.

ಇದೀಗ ಪಾಕ್ ವೇಗಿಗಳಾದ ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಹಾಗೂ ನಸೀಮ್ ಶಾ ಜೊತೆಗೂಡಿ ಟೀಮ್ ಇಂಡಿಯಾವನ್ಜು ಆಲೌಟ್ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಏಷ್ಯಾಕಪ್​ನಲ್ಲಿ ಅಪರೂಪದ ದಾಖಲೆಯನ್ನು ಬರೆದಿದ್ದಾರೆ.

ಟೀಮ್ ಇಂಡಿಯಾ ವಿರುದ್ಧ ತ್ರಿಮೂರ್ತಿಗಳ ಬೌಲಿಂಗ್:

  • ಶಾಹೀನ್ ಶಾ ಅಫ್ರಿದಿ- 10 ಓವರ್- 35 ರನ್ಸ್​- 4 ವಿಕೆಟ್ಸ್​
  • ಹ್ಯಾರಿಸ್ ರೌಫ್- 9 ಓವರ್- 58 ರನ್ಸ್​- 3 ವಿಕೆಟ್ಸ್​
  • ನಸೀಮ್ ಶಾ- 8.5 ಓವರ್- 36 ರನ್ಸ್​- 3 ವಿಕೆಟ್ಸ್​.
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು