AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket: ದುರಂತ.. ಬ್ರೈನ್ ಟ್ಯೂಮರ್‌ನಿಂದಾಗಿ ಒಂದೇ ದಿನ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ಸಾವು

Cricket: ಬಾಂಗ್ಲಾದೇಶದ ಮೊದಲ ಏಕದಿನ ತಂಡದ ಸದಸ್ಯರಾಗಿದ್ದ ಸಮಿಯುರ್ ರೆಹಮಾನ್ (69) ಅವರು ಬ್ರೈನ್ ಟ್ಯೂಮರ್‌ನಿಂದಾಗಿ ಢಾಕಾ ನಗರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೇ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಎಡಗೈ ಸ್ಪಿನ್ನರ್ ಮೊಶರಫ್ ಹೊಸೈನ್ ರುಬೆಲ್ (40) ಕೂಡ ಸಾವನ್ನಪ್ಪಿದ್ದಾರೆ.

Cricket: ದುರಂತ.. ಬ್ರೈನ್ ಟ್ಯೂಮರ್‌ನಿಂದಾಗಿ ಒಂದೇ ದಿನ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ಸಾವು
ಬಾಂಗ್ಲಾ ಕ್ರಿಕೆಟಿಗರು
TV9 Web
| Edited By: |

Updated on: Apr 20, 2022 | 3:29 PM

Share

ಬಾಂಗ್ಲಾದೇಶ ಕ್ರಿಕೆಟ್‌ (Bangladesh Cricket)ನಲ್ಲಿ ದುರಂತ ಸಂಭವಿಸಿದೆ. ಬ್ರೈನ್ ಟ್ಯೂಮರ್‌ನಿಂದಾಗಿ ಇಬ್ಬರು ಮಾಜಿ ಆಟಗಾರರು ಮಂಗಳವಾರ (ಏಪ್ರಿಲ್ 19) ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ಮೊದಲ ಏಕದಿನ ತಂಡದ ಸದಸ್ಯರಾಗಿದ್ದ ಸಮಿಯುರ್ ರೆಹಮಾನ್ (69) ಅವರು ಬ್ರೈನ್ ಟ್ಯೂಮರ್‌ನಿಂದಾಗಿ ಢಾಕಾ ನಗರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೇ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಎಡಗೈ ಸ್ಪಿನ್ನರ್ ಮೊಶರಫ್ ಹೊಸೈನ್ ರುಬೆಲ್ (40) ಕೂಡ ಸಾವನ್ನಪ್ಪಿದ್ದಾರೆ. ಒಂದೇ ದಿನ ಇಬ್ಬರು ಮಾಜಿ ಕ್ರಿಕೆಟಿಗರ ನಿಧನಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜೊತೆಗೆ ಅವರ ಕುಟುಂಬದವರಿಗೆ ತೀವ್ರ ಸಂತಾಪ ಸೂಚಿಸಿದೆ.

ಸಮಿಯುರ್ ರೆಹಮಾನ್.. ಬಾಂಗ್ಲಾದೇಶ ಪರ ಎರಡು ಪಂದ್ಯಗಳನ್ನು ಆಡಿದ್ದಾರೆ. ರಾಷ್ಟ್ರೀಯ ತಂಡದ ಹೊರತಾಗಿ, ರೆಹಮಾನ್ ಸ್ಥಳೀಯ ತಂಡಗಳಾದ ಢಾಕಾ ಪ್ರೀಮಿಯರ್ ಲೀಗ್ ಮತ್ತು ಬಾಂಗ್ಲಾದೇಶ ಬಿಮಾನ್‌ಗಳನ್ನು ಪ್ರತಿನಿಧಿಸಿದ್ದಾರೆ. ಅವರು ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಕೆಲವು ವರ್ಷಗಳ ಕಾಲ ಅಂಪೈರ್ ಆಗಿಯೂ ಸೇವೆ ಸಲ್ಲಿಸಿದರು. ಮುಷರಫ್ ಹುಸೇನ್ ಬಗ್ಗೆ ಹೇಳುವುದಾದರೆ, ಅವರು 2008-16ರ ನಡುವೆ ಬಾಂಗ್ಲಾದೇಶ ರಾಷ್ಟ್ರೀಯ ತಂಡಕ್ಕಾಗಿ ಐದು ODIಗಳನ್ನು ಆಡಿದ್ದಾರೆ. ಇದರಲ್ಲಿ ಒಟ್ಟು 4 ವಿಕೆಟ್ ಪಡೆದರು. ಜೊತೆಗೆ ದೇಶಿಯ ಕ್ರಿಕೆಟ್‌ನಲ್ಲೂ ಮಿಂಚಿ, ಒಟ್ಟು 572 ವಿಕೆಟ್ ಪಡೆದು ಸ್ಟಾರ್ ಸ್ಪಿನ್ನರ್ ಎನಿಸಿಕೊಂಡರು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರು ಕೂಡ ಇಬ್ಬರಿಗೆ ಗೌರವ ಸಲ್ಲಿಸಿದ್ದಾರೆ. ದೇಶಾದ್ಯಂತ ಹಲವಾರು ಕ್ರಿಕೆಟ್ ಪಂದ್ಯಗಳ ಮೊದಲು ಅವರು ಎರಡು ನಿಮಿಷಗಳ ಮೌನಾಚರಣೆ ಆಚರಿಸಿದರು.

ಇದನ್ನೂ ಓದಿ:KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ