AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket: ದುರಂತ.. ಬ್ರೈನ್ ಟ್ಯೂಮರ್‌ನಿಂದಾಗಿ ಒಂದೇ ದಿನ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ಸಾವು

Cricket: ಬಾಂಗ್ಲಾದೇಶದ ಮೊದಲ ಏಕದಿನ ತಂಡದ ಸದಸ್ಯರಾಗಿದ್ದ ಸಮಿಯುರ್ ರೆಹಮಾನ್ (69) ಅವರು ಬ್ರೈನ್ ಟ್ಯೂಮರ್‌ನಿಂದಾಗಿ ಢಾಕಾ ನಗರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೇ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಎಡಗೈ ಸ್ಪಿನ್ನರ್ ಮೊಶರಫ್ ಹೊಸೈನ್ ರುಬೆಲ್ (40) ಕೂಡ ಸಾವನ್ನಪ್ಪಿದ್ದಾರೆ.

Cricket: ದುರಂತ.. ಬ್ರೈನ್ ಟ್ಯೂಮರ್‌ನಿಂದಾಗಿ ಒಂದೇ ದಿನ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ಸಾವು
ಬಾಂಗ್ಲಾ ಕ್ರಿಕೆಟಿಗರು
TV9 Web
| Edited By: |

Updated on: Apr 20, 2022 | 3:29 PM

Share

ಬಾಂಗ್ಲಾದೇಶ ಕ್ರಿಕೆಟ್‌ (Bangladesh Cricket)ನಲ್ಲಿ ದುರಂತ ಸಂಭವಿಸಿದೆ. ಬ್ರೈನ್ ಟ್ಯೂಮರ್‌ನಿಂದಾಗಿ ಇಬ್ಬರು ಮಾಜಿ ಆಟಗಾರರು ಮಂಗಳವಾರ (ಏಪ್ರಿಲ್ 19) ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ಮೊದಲ ಏಕದಿನ ತಂಡದ ಸದಸ್ಯರಾಗಿದ್ದ ಸಮಿಯುರ್ ರೆಹಮಾನ್ (69) ಅವರು ಬ್ರೈನ್ ಟ್ಯೂಮರ್‌ನಿಂದಾಗಿ ಢಾಕಾ ನಗರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೇ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಎಡಗೈ ಸ್ಪಿನ್ನರ್ ಮೊಶರಫ್ ಹೊಸೈನ್ ರುಬೆಲ್ (40) ಕೂಡ ಸಾವನ್ನಪ್ಪಿದ್ದಾರೆ. ಒಂದೇ ದಿನ ಇಬ್ಬರು ಮಾಜಿ ಕ್ರಿಕೆಟಿಗರ ನಿಧನಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜೊತೆಗೆ ಅವರ ಕುಟುಂಬದವರಿಗೆ ತೀವ್ರ ಸಂತಾಪ ಸೂಚಿಸಿದೆ.

ಸಮಿಯುರ್ ರೆಹಮಾನ್.. ಬಾಂಗ್ಲಾದೇಶ ಪರ ಎರಡು ಪಂದ್ಯಗಳನ್ನು ಆಡಿದ್ದಾರೆ. ರಾಷ್ಟ್ರೀಯ ತಂಡದ ಹೊರತಾಗಿ, ರೆಹಮಾನ್ ಸ್ಥಳೀಯ ತಂಡಗಳಾದ ಢಾಕಾ ಪ್ರೀಮಿಯರ್ ಲೀಗ್ ಮತ್ತು ಬಾಂಗ್ಲಾದೇಶ ಬಿಮಾನ್‌ಗಳನ್ನು ಪ್ರತಿನಿಧಿಸಿದ್ದಾರೆ. ಅವರು ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಕೆಲವು ವರ್ಷಗಳ ಕಾಲ ಅಂಪೈರ್ ಆಗಿಯೂ ಸೇವೆ ಸಲ್ಲಿಸಿದರು. ಮುಷರಫ್ ಹುಸೇನ್ ಬಗ್ಗೆ ಹೇಳುವುದಾದರೆ, ಅವರು 2008-16ರ ನಡುವೆ ಬಾಂಗ್ಲಾದೇಶ ರಾಷ್ಟ್ರೀಯ ತಂಡಕ್ಕಾಗಿ ಐದು ODIಗಳನ್ನು ಆಡಿದ್ದಾರೆ. ಇದರಲ್ಲಿ ಒಟ್ಟು 4 ವಿಕೆಟ್ ಪಡೆದರು. ಜೊತೆಗೆ ದೇಶಿಯ ಕ್ರಿಕೆಟ್‌ನಲ್ಲೂ ಮಿಂಚಿ, ಒಟ್ಟು 572 ವಿಕೆಟ್ ಪಡೆದು ಸ್ಟಾರ್ ಸ್ಪಿನ್ನರ್ ಎನಿಸಿಕೊಂಡರು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರು ಕೂಡ ಇಬ್ಬರಿಗೆ ಗೌರವ ಸಲ್ಲಿಸಿದ್ದಾರೆ. ದೇಶಾದ್ಯಂತ ಹಲವಾರು ಕ್ರಿಕೆಟ್ ಪಂದ್ಯಗಳ ಮೊದಲು ಅವರು ಎರಡು ನಿಮಿಷಗಳ ಮೌನಾಚರಣೆ ಆಚರಿಸಿದರು.

ಇದನ್ನೂ ಓದಿ:KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ