AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket: ದುರಂತ.. ಬ್ರೈನ್ ಟ್ಯೂಮರ್‌ನಿಂದಾಗಿ ಒಂದೇ ದಿನ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ಸಾವು

Cricket: ಬಾಂಗ್ಲಾದೇಶದ ಮೊದಲ ಏಕದಿನ ತಂಡದ ಸದಸ್ಯರಾಗಿದ್ದ ಸಮಿಯುರ್ ರೆಹಮಾನ್ (69) ಅವರು ಬ್ರೈನ್ ಟ್ಯೂಮರ್‌ನಿಂದಾಗಿ ಢಾಕಾ ನಗರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೇ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಎಡಗೈ ಸ್ಪಿನ್ನರ್ ಮೊಶರಫ್ ಹೊಸೈನ್ ರುಬೆಲ್ (40) ಕೂಡ ಸಾವನ್ನಪ್ಪಿದ್ದಾರೆ.

Cricket: ದುರಂತ.. ಬ್ರೈನ್ ಟ್ಯೂಮರ್‌ನಿಂದಾಗಿ ಒಂದೇ ದಿನ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ಸಾವು
ಬಾಂಗ್ಲಾ ಕ್ರಿಕೆಟಿಗರು
Follow us
TV9 Web
| Updated By: ಪೃಥ್ವಿಶಂಕರ

Updated on: Apr 20, 2022 | 3:29 PM

ಬಾಂಗ್ಲಾದೇಶ ಕ್ರಿಕೆಟ್‌ (Bangladesh Cricket)ನಲ್ಲಿ ದುರಂತ ಸಂಭವಿಸಿದೆ. ಬ್ರೈನ್ ಟ್ಯೂಮರ್‌ನಿಂದಾಗಿ ಇಬ್ಬರು ಮಾಜಿ ಆಟಗಾರರು ಮಂಗಳವಾರ (ಏಪ್ರಿಲ್ 19) ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ಮೊದಲ ಏಕದಿನ ತಂಡದ ಸದಸ್ಯರಾಗಿದ್ದ ಸಮಿಯುರ್ ರೆಹಮಾನ್ (69) ಅವರು ಬ್ರೈನ್ ಟ್ಯೂಮರ್‌ನಿಂದಾಗಿ ಢಾಕಾ ನಗರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೇ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಎಡಗೈ ಸ್ಪಿನ್ನರ್ ಮೊಶರಫ್ ಹೊಸೈನ್ ರುಬೆಲ್ (40) ಕೂಡ ಸಾವನ್ನಪ್ಪಿದ್ದಾರೆ. ಒಂದೇ ದಿನ ಇಬ್ಬರು ಮಾಜಿ ಕ್ರಿಕೆಟಿಗರ ನಿಧನಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜೊತೆಗೆ ಅವರ ಕುಟುಂಬದವರಿಗೆ ತೀವ್ರ ಸಂತಾಪ ಸೂಚಿಸಿದೆ.

ಸಮಿಯುರ್ ರೆಹಮಾನ್.. ಬಾಂಗ್ಲಾದೇಶ ಪರ ಎರಡು ಪಂದ್ಯಗಳನ್ನು ಆಡಿದ್ದಾರೆ. ರಾಷ್ಟ್ರೀಯ ತಂಡದ ಹೊರತಾಗಿ, ರೆಹಮಾನ್ ಸ್ಥಳೀಯ ತಂಡಗಳಾದ ಢಾಕಾ ಪ್ರೀಮಿಯರ್ ಲೀಗ್ ಮತ್ತು ಬಾಂಗ್ಲಾದೇಶ ಬಿಮಾನ್‌ಗಳನ್ನು ಪ್ರತಿನಿಧಿಸಿದ್ದಾರೆ. ಅವರು ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಕೆಲವು ವರ್ಷಗಳ ಕಾಲ ಅಂಪೈರ್ ಆಗಿಯೂ ಸೇವೆ ಸಲ್ಲಿಸಿದರು. ಮುಷರಫ್ ಹುಸೇನ್ ಬಗ್ಗೆ ಹೇಳುವುದಾದರೆ, ಅವರು 2008-16ರ ನಡುವೆ ಬಾಂಗ್ಲಾದೇಶ ರಾಷ್ಟ್ರೀಯ ತಂಡಕ್ಕಾಗಿ ಐದು ODIಗಳನ್ನು ಆಡಿದ್ದಾರೆ. ಇದರಲ್ಲಿ ಒಟ್ಟು 4 ವಿಕೆಟ್ ಪಡೆದರು. ಜೊತೆಗೆ ದೇಶಿಯ ಕ್ರಿಕೆಟ್‌ನಲ್ಲೂ ಮಿಂಚಿ, ಒಟ್ಟು 572 ವಿಕೆಟ್ ಪಡೆದು ಸ್ಟಾರ್ ಸ್ಪಿನ್ನರ್ ಎನಿಸಿಕೊಂಡರು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರು ಕೂಡ ಇಬ್ಬರಿಗೆ ಗೌರವ ಸಲ್ಲಿಸಿದ್ದಾರೆ. ದೇಶಾದ್ಯಂತ ಹಲವಾರು ಕ್ರಿಕೆಟ್ ಪಂದ್ಯಗಳ ಮೊದಲು ಅವರು ಎರಡು ನಿಮಿಷಗಳ ಮೌನಾಚರಣೆ ಆಚರಿಸಿದರು.

ಇದನ್ನೂ ಓದಿ:KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?