AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಪಕ್ಷಕ್ಕೆ ಸೇರಿದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ

Dinesh Mongia: 2003 ರಲ್ಲಿ ಏಕದಿನ ವಿಶ್ವಕಪ್​ ಫೈನಲ್ ಪ್ರವೇಶಿಸಿದ್ದ ಭಾರತ ತಂಡದ ಭಾಗವಾಗಿದ್ದ ಎಡಗೈ ಆಲ್​ರೌಂಡರ್ ದಿನೇಶ್ ಮೊಂಗಿಯಾ ಐದು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದರು.

BJP ಪಕ್ಷಕ್ಕೆ ಸೇರಿದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ
Team India
TV9 Web
| Updated By: ಝಾಹಿರ್ ಯೂಸುಫ್|

Updated on:Dec 28, 2021 | 3:30 PM

Share

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಅವರು ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಮೊಂಗಿಯಾ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪಂಜಾಬ್ ಚುನಾವಣೆಯಲ್ಲಿ ದಿನೇಶ್ ಮೊಂಗಿಯಾ ಸಕ್ರಿಯ ಪಾತ್ರ ವಹಿಸುವ ಸಾಧ್ಯತೆಯಿದ್ದು, ಹೀಗಾಗಿ ಅವರು ಪಕ್ಷಕ್ಕೆ ಸೇರಿದ್ದಾ. ಇನ್ನು ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗನ ಜೊತೆ ಕಾಂಗ್ರೆಸ್ ಎಂಎಲ್​ಎ ಫತಾಹ್ ಜಂಗ್ ಬಾಜ್ವಾ, ಹರಗೋವಿಂದ್ ಲಾಧಿ, ಕಮಲ್ ಬಾಕ್ಸಿ, ಮಧುಮಿತ್ ಮತ್ತು ಅಕಾಲಿ ದಳ ಪಕ್ಷದ ನಾಯಕ ರಾಜದೇವ್ ಖಾಲ್ಸಾ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

2001 ರಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದ್ದ ದಿನೇಶ್ ಮೊಂಗಿಯಾ ಸೆಪ್ಟೆಂಬರ್ 2019 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 2007 ರಲ್ಲಿ ಬಾಂಗ್ಲಾದೇಶದ ವಿರುದ್ಧ ಅವರು ಕೊನೆಯ ಬಾರಿ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ 12 ವರ್ಷಗಳ ಕಾಲ ಅವರು ದೇಶೀಯ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು. ಆದರೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಸಾಧ್ಯವಾಗಿರಲಿಲ್ಲ.

ಐಪಿಎಲ್​ನಲ್ಲಿ ಸಿಕ್ಕಿಲ್ಲ ಚಾನ್ಸ್..! ದಿನೇಶ್ ಮೊಂಗಿಯಾ ಅವರು 2007 ರಲ್ಲಿ BCCI ನಿಂದ ನಿಷೇಧಿಸಲ್ಪಟ್ಟ ICL (ಇಂಡಿಯಾ ಕ್ರಿಕೆಟ್ ಲೀಗ್) ಲೀಗ್‌ನಲ್ಲಿ ಭಾಗವಹಿಸಿದ್ದರು. ಆ ಬಳಿಕ ಐಸಿಎಲ್ ಆಡಿದ ಆಟಗಾರರಿಗೆ ಬಿಸಿಸಿಐ ನಿಷೇಧ ಹೇರಿತ್ತು. ಹೀಗಾಗಿ ಐಪಿಎಲ್​ ಆರಂಭದ ವೇಳೆ ಅವರಿಗೆ ಐಪಿಎಲ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಬಿಸಿಸಿಐ ಈ ನಿಷೇಧವನ್ನು ಹಿಂತೆಗೆದುಕೊಂಡರೂ ದಿನೇಶ್ ಮೊಂಗಿಯಾ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು.

2003 ರಲ್ಲಿ ಏಕದಿನ ವಿಶ್ವಕಪ್​ ಫೈನಲ್ ಪ್ರವೇಶಿಸಿದ್ದ ಭಾರತ ತಂಡದ ಭಾಗವಾಗಿದ್ದ ಎಡಗೈ ಆಲ್​ರೌಂಡರ್ ದಿನೇಶ್ ಮೊಂಗಿಯಾ ಐದು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರ ಪ್ಲೇಯಿಂಗ್ 11 ನ ಖಾಯಂ ಸದಸ್ಯರಾಗಿರಲಿಲ್ಲ. ಟೀಮ್ ಇಂಡಿಯಾ ಪರ 57 ಏಕದಿನ ಪಂದ್ಯಗಳನ್ನಾಡಿರುವ ಮೊಂಗಿಯಾ 27.95 ರ ಸರಾಸರಿಯಲ್ಲಿ 1230 ರನ್ ಗಳಿಸಿದ್ದರು. ಹಾಗೆಯೇ 14 ವಿಕೆಟ್‌ಗಳನ್ನು ಸಹ ಪಡೆದಿದ್ದರು. ಜಿಂಬಾಬ್ವೆ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ 159 ರನ್ ಗಳಿಸಿದ್ದು ಅವರ ಅತ್ಯುತ್ತಮ ಸ್ಕೋರ್. ಇದು ಮೊಂಗಿಯಾ ಅವರ ವೃತ್ತಿ ಜೀವನದ ಏಕೈಕ ಶತಕವಾಗಿತ್ತು. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಏಕೈಕ T20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದ ದಿನೇಶ್ ಮೊಂಗಿಯಾ ಆ ಪಂದ್ಯದಲ್ಲಿ 38 ರನ್ ಗಳಿಸಿದ್ದರು. ಇನ್ನು ಲಂಕಾಶೈರ್ ಮತ್ತು ಲೀಸೆಸ್ಟರ್‌ಶೈರ್ ತಂಡದ ಭಾಗವಾಗಿ ಮೊಂಗಿಯಾ ಇಂಗ್ಲೆಂಡ್‌ನಲ್ಲಿ ಕೌಂಟಿ ಕ್ರಿಕೆಟ್ ಆಡಿದರು.

ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 121 ಪಂದ್ಯಗಳನ್ನಾಡಿರುವ ದಿನೇಶ್ ಮೊಂಗಿಯಾ ಒಟ್ಟು 21 ಶತಕ ಬಾರಿಸಿದ್ದರು. ಅಲ್ಲದೆ ಈ ಹಿಂದೆ ಪಂಜಾಬ್ ಕ್ರಿಕೆಟ್ ಸಂಸ್ಥೆಯ (ಪಿಸಿಎ) ಆಯ್ಕೆಗಾರರನ್ನಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಟೀಮ್ ಇಂಡಿಯಾ ಆಟಗಾರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Former cricketer Dinesh Mongia to join BJP ahead of Punjab polls)

Published On - 3:29 pm, Tue, 28 December 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?