Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ವಿದಾಯ ಹೇಳಿದ ಮಾಜಿ RCB ಆಟಗಾರ

Milind Kumar: ಐಪಿಎಲ್​​ನಲ್ಲಿ ದೆಹಲಿ ಮೂಲದ ಬ್ಯಾಟ್ಸ್​ಮನ್ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Aug 24, 2021 | 6:45 PM

ಟೀಮ್ ಇಂಡಿಯಾ ಅಂಡರ್-19 ತಂಡವನ್ನು ಪ್ರತಿನಿಧಿಸಿದ ಭಾರತೀಯ ಆಟಗಾರರ ವಲಸೆ ಪ್ರಕ್ರಿಯೆ ಮುಂದುವರೆದಿದೆ. ಈ ಹಿಂದೆ ಅಂಡರ್​-19 ವಿಶ್ವಕಪ್ ವಿಜೇತ ತಂಡದ ನಾಯಕ ಉನ್ಮುಕ್ತ್ ಚಂದ್, ಸ್ಮಿತ್ ಪಟೇಲ್, ಮನನ್ ಶರ್ಮಾ, ಹರ್ಮೀತ್ ಸಿಂಗ್ ಭಾರತೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಈ ಆಟಗಾರರು ಅಮೆರಿಕ ಕ್ರಿಕೆಟ್​ ಲೀಗ್​ನತ್ತ ವಲಸೆ ಹೋಗಿದ್ದರು.

ಟೀಮ್ ಇಂಡಿಯಾ ಅಂಡರ್-19 ತಂಡವನ್ನು ಪ್ರತಿನಿಧಿಸಿದ ಭಾರತೀಯ ಆಟಗಾರರ ವಲಸೆ ಪ್ರಕ್ರಿಯೆ ಮುಂದುವರೆದಿದೆ. ಈ ಹಿಂದೆ ಅಂಡರ್​-19 ವಿಶ್ವಕಪ್ ವಿಜೇತ ತಂಡದ ನಾಯಕ ಉನ್ಮುಕ್ತ್ ಚಂದ್, ಸ್ಮಿತ್ ಪಟೇಲ್, ಮನನ್ ಶರ್ಮಾ, ಹರ್ಮೀತ್ ಸಿಂಗ್ ಭಾರತೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಈ ಆಟಗಾರರು ಅಮೆರಿಕ ಕ್ರಿಕೆಟ್​ ಲೀಗ್​ನತ್ತ ವಲಸೆ ಹೋಗಿದ್ದರು.

1 / 5
ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಮಿಲಿಂದ್ ಕುಮಾರ್. ಹೌದು, ಅಂಡರ್​-19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಮಿಲಿಂದ್ ಇದೀಗ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಅಮೆರಿಕ ಪರ ಭವಿಷ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಮಿಲಿಂದ್ ಕುಮಾರ್. ಹೌದು, ಅಂಡರ್​-19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಮಿಲಿಂದ್ ಇದೀಗ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಅಮೆರಿಕ ಪರ ಭವಿಷ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 / 5
ಮಿಲಿಂದ್ ಕುಮಾರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ RCB ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್​ಗೆ ಆಡುವ ಅವಕಾಶ ದೊರೆತಿರಲಿಲ್ಲ.

ಮಿಲಿಂದ್ ಕುಮಾರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ RCB ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್​ಗೆ ಆಡುವ ಅವಕಾಶ ದೊರೆತಿರಲಿಲ್ಲ.

3 / 5
ಇದಾಗ್ಯೂ ಕಳೆದ ಬಾರಿ ಕೂಡ ಐಪಿಎಲ್​​ನಲ್ಲಿ ದೆಹಲಿ ಮೂಲದ ಬ್ಯಾಟ್ಸ್​ಮನ್ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಭಾರತೀಯ ಕ್ರಿಕೆಟ್​ನಿಂದ ಹೊರಗುಳಿದಿರುವ ಮಿಲಿಂದ್, ಅಮೆರಿಕದ ಮೈನರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಫಿಲಡೆಲ್ಫಿಯನ್ಸ್ ಪರ ಆಡಲಿದ್ದಾರೆ. ಈಗಾಗಲೇ ಈ ಲೀಗ್​ನಲ್ಲಿ ಮನನ್ ಶರ್ಮಾ ಮತ್ತು ಉನ್ಮುಕ್ತ್ ಚಂದ್ ಕೂಡ ಆಡುತ್ತಿದ್ದಾರೆ. ಇದೀಗ ಮಿಲಿಂದ್ ಸಹ ಅದೇ ಲೀಗ್​ ಅನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

ಇದಾಗ್ಯೂ ಕಳೆದ ಬಾರಿ ಕೂಡ ಐಪಿಎಲ್​​ನಲ್ಲಿ ದೆಹಲಿ ಮೂಲದ ಬ್ಯಾಟ್ಸ್​ಮನ್ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಭಾರತೀಯ ಕ್ರಿಕೆಟ್​ನಿಂದ ಹೊರಗುಳಿದಿರುವ ಮಿಲಿಂದ್, ಅಮೆರಿಕದ ಮೈನರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಫಿಲಡೆಲ್ಫಿಯನ್ಸ್ ಪರ ಆಡಲಿದ್ದಾರೆ. ಈಗಾಗಲೇ ಈ ಲೀಗ್​ನಲ್ಲಿ ಮನನ್ ಶರ್ಮಾ ಮತ್ತು ಉನ್ಮುಕ್ತ್ ಚಂದ್ ಕೂಡ ಆಡುತ್ತಿದ್ದಾರೆ. ಇದೀಗ ಮಿಲಿಂದ್ ಸಹ ಅದೇ ಲೀಗ್​ ಅನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

4 / 5
ನಿವೃತ್ತಿ ಬಗ್ಗೆ ಮಾತನಾಡಿರುವ ಮಿಲಿಂದ್, ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಇಶಾಂತ್ ಶರ್ಮಾ ಅವರಂತಹ ಶ್ರೇಷ್ಠ ಕ್ರಿಕೆಟಿಗರೊಂದಿಗೆ ಆಡುವ ಅವಕಾಶ ಲಭಿಸಿದ್ದು ನನ್ನ ಭಾಗ್ಯ. ಇದೀಗ ಒಂದೊಳ್ಳೆ ಅವಕಾಶ ಸಿಕ್ಕಿದೆ. ಹೀಗಾಗಿ ವಿದೇಶಿ ಲೀಗ್​ನಲ್ಲಿ ಭವಿಷ್ಯ ರೂಪಿಸಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿವೃತ್ತಿ ಬಗ್ಗೆ ಮಾತನಾಡಿರುವ ಮಿಲಿಂದ್, ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಇಶಾಂತ್ ಶರ್ಮಾ ಅವರಂತಹ ಶ್ರೇಷ್ಠ ಕ್ರಿಕೆಟಿಗರೊಂದಿಗೆ ಆಡುವ ಅವಕಾಶ ಲಭಿಸಿದ್ದು ನನ್ನ ಭಾಗ್ಯ. ಇದೀಗ ಒಂದೊಳ್ಳೆ ಅವಕಾಶ ಸಿಕ್ಕಿದೆ. ಹೀಗಾಗಿ ವಿದೇಶಿ ಲೀಗ್​ನಲ್ಲಿ ಭವಿಷ್ಯ ರೂಪಿಸಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

5 / 5
Follow us
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ