AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ವಿದಾಯ ಹೇಳಿದ ಮಾಜಿ RCB ಆಟಗಾರ

Milind Kumar: ಐಪಿಎಲ್​​ನಲ್ಲಿ ದೆಹಲಿ ಮೂಲದ ಬ್ಯಾಟ್ಸ್​ಮನ್ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

TV9 Web
| Edited By: |

Updated on: Aug 24, 2021 | 6:45 PM

Share
ಟೀಮ್ ಇಂಡಿಯಾ ಅಂಡರ್-19 ತಂಡವನ್ನು ಪ್ರತಿನಿಧಿಸಿದ ಭಾರತೀಯ ಆಟಗಾರರ ವಲಸೆ ಪ್ರಕ್ರಿಯೆ ಮುಂದುವರೆದಿದೆ. ಈ ಹಿಂದೆ ಅಂಡರ್​-19 ವಿಶ್ವಕಪ್ ವಿಜೇತ ತಂಡದ ನಾಯಕ ಉನ್ಮುಕ್ತ್ ಚಂದ್, ಸ್ಮಿತ್ ಪಟೇಲ್, ಮನನ್ ಶರ್ಮಾ, ಹರ್ಮೀತ್ ಸಿಂಗ್ ಭಾರತೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಈ ಆಟಗಾರರು ಅಮೆರಿಕ ಕ್ರಿಕೆಟ್​ ಲೀಗ್​ನತ್ತ ವಲಸೆ ಹೋಗಿದ್ದರು.

ಟೀಮ್ ಇಂಡಿಯಾ ಅಂಡರ್-19 ತಂಡವನ್ನು ಪ್ರತಿನಿಧಿಸಿದ ಭಾರತೀಯ ಆಟಗಾರರ ವಲಸೆ ಪ್ರಕ್ರಿಯೆ ಮುಂದುವರೆದಿದೆ. ಈ ಹಿಂದೆ ಅಂಡರ್​-19 ವಿಶ್ವಕಪ್ ವಿಜೇತ ತಂಡದ ನಾಯಕ ಉನ್ಮುಕ್ತ್ ಚಂದ್, ಸ್ಮಿತ್ ಪಟೇಲ್, ಮನನ್ ಶರ್ಮಾ, ಹರ್ಮೀತ್ ಸಿಂಗ್ ಭಾರತೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಈ ಆಟಗಾರರು ಅಮೆರಿಕ ಕ್ರಿಕೆಟ್​ ಲೀಗ್​ನತ್ತ ವಲಸೆ ಹೋಗಿದ್ದರು.

1 / 5
ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಮಿಲಿಂದ್ ಕುಮಾರ್. ಹೌದು, ಅಂಡರ್​-19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಮಿಲಿಂದ್ ಇದೀಗ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಅಮೆರಿಕ ಪರ ಭವಿಷ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಮಿಲಿಂದ್ ಕುಮಾರ್. ಹೌದು, ಅಂಡರ್​-19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಮಿಲಿಂದ್ ಇದೀಗ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಅಮೆರಿಕ ಪರ ಭವಿಷ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 / 5
ಮಿಲಿಂದ್ ಕುಮಾರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ RCB ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್​ಗೆ ಆಡುವ ಅವಕಾಶ ದೊರೆತಿರಲಿಲ್ಲ.

ಮಿಲಿಂದ್ ಕುಮಾರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ RCB ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್​ಗೆ ಆಡುವ ಅವಕಾಶ ದೊರೆತಿರಲಿಲ್ಲ.

3 / 5
ಇದಾಗ್ಯೂ ಕಳೆದ ಬಾರಿ ಕೂಡ ಐಪಿಎಲ್​​ನಲ್ಲಿ ದೆಹಲಿ ಮೂಲದ ಬ್ಯಾಟ್ಸ್​ಮನ್ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಭಾರತೀಯ ಕ್ರಿಕೆಟ್​ನಿಂದ ಹೊರಗುಳಿದಿರುವ ಮಿಲಿಂದ್, ಅಮೆರಿಕದ ಮೈನರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಫಿಲಡೆಲ್ಫಿಯನ್ಸ್ ಪರ ಆಡಲಿದ್ದಾರೆ. ಈಗಾಗಲೇ ಈ ಲೀಗ್​ನಲ್ಲಿ ಮನನ್ ಶರ್ಮಾ ಮತ್ತು ಉನ್ಮುಕ್ತ್ ಚಂದ್ ಕೂಡ ಆಡುತ್ತಿದ್ದಾರೆ. ಇದೀಗ ಮಿಲಿಂದ್ ಸಹ ಅದೇ ಲೀಗ್​ ಅನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

ಇದಾಗ್ಯೂ ಕಳೆದ ಬಾರಿ ಕೂಡ ಐಪಿಎಲ್​​ನಲ್ಲಿ ದೆಹಲಿ ಮೂಲದ ಬ್ಯಾಟ್ಸ್​ಮನ್ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಭಾರತೀಯ ಕ್ರಿಕೆಟ್​ನಿಂದ ಹೊರಗುಳಿದಿರುವ ಮಿಲಿಂದ್, ಅಮೆರಿಕದ ಮೈನರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಫಿಲಡೆಲ್ಫಿಯನ್ಸ್ ಪರ ಆಡಲಿದ್ದಾರೆ. ಈಗಾಗಲೇ ಈ ಲೀಗ್​ನಲ್ಲಿ ಮನನ್ ಶರ್ಮಾ ಮತ್ತು ಉನ್ಮುಕ್ತ್ ಚಂದ್ ಕೂಡ ಆಡುತ್ತಿದ್ದಾರೆ. ಇದೀಗ ಮಿಲಿಂದ್ ಸಹ ಅದೇ ಲೀಗ್​ ಅನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

4 / 5
ನಿವೃತ್ತಿ ಬಗ್ಗೆ ಮಾತನಾಡಿರುವ ಮಿಲಿಂದ್, ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಇಶಾಂತ್ ಶರ್ಮಾ ಅವರಂತಹ ಶ್ರೇಷ್ಠ ಕ್ರಿಕೆಟಿಗರೊಂದಿಗೆ ಆಡುವ ಅವಕಾಶ ಲಭಿಸಿದ್ದು ನನ್ನ ಭಾಗ್ಯ. ಇದೀಗ ಒಂದೊಳ್ಳೆ ಅವಕಾಶ ಸಿಕ್ಕಿದೆ. ಹೀಗಾಗಿ ವಿದೇಶಿ ಲೀಗ್​ನಲ್ಲಿ ಭವಿಷ್ಯ ರೂಪಿಸಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿವೃತ್ತಿ ಬಗ್ಗೆ ಮಾತನಾಡಿರುವ ಮಿಲಿಂದ್, ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಇಶಾಂತ್ ಶರ್ಮಾ ಅವರಂತಹ ಶ್ರೇಷ್ಠ ಕ್ರಿಕೆಟಿಗರೊಂದಿಗೆ ಆಡುವ ಅವಕಾಶ ಲಭಿಸಿದ್ದು ನನ್ನ ಭಾಗ್ಯ. ಇದೀಗ ಒಂದೊಳ್ಳೆ ಅವಕಾಶ ಸಿಕ್ಕಿದೆ. ಹೀಗಾಗಿ ವಿದೇಶಿ ಲೀಗ್​ನಲ್ಲಿ ಭವಿಷ್ಯ ರೂಪಿಸಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ