AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former Cricketers Remuneration: ಮಾಜಿ ಕ್ರಿಕೆಟರ್ಸ್, ಅಂಪೈರ್​ಗಳಿಗೆ ಬಿಸಿಸಿಐಯಿಂದ ಭರ್ಜರಿ ಬೋನಸ್: ಸಿಗುತ್ತಿರುವ ಹಣ ಎಷ್ಟು ಗೊತ್ತೇ?

BCCI: ಐಪಿಎಲ್‌ 2023 ರಿಂದ ಐಪಿಎಲ್‌ 2027 ರವರೆಗಿನ ಪ್ರಸಾರ ಹಕ್ಕು ಬರೋಬ್ಬರಿ 44,075 ಕೋಟಿ ರೂ.ಗಳ ಬೆಲೆಗೆ ಮಾರಾಟವಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಮಾಜಿ ಕ್ರಿಕೆಟಿಗರು ಮತ್ತು ಅಂಪೈರ್‌ಗಳಿಗೆ ಬಂಪರ್ ಶುಭಸುದ್ದಿಯೊಂದನ್ನು ನೀಡಿದೆ. ತಿಂಗಳ ಪಿಂಚಣಿಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದೆ.

Former Cricketers Remuneration: ಮಾಜಿ ಕ್ರಿಕೆಟರ್ಸ್, ಅಂಪೈರ್​ಗಳಿಗೆ ಬಿಸಿಸಿಐಯಿಂದ ಭರ್ಜರಿ ಬೋನಸ್: ಸಿಗುತ್ತಿರುವ ಹಣ ಎಷ್ಟು ಗೊತ್ತೇ?
BCCI
TV9 Web
| Updated By: Vinay Bhat|

Updated on:Jun 14, 2022 | 10:37 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ದಾಖಲೆ ಎಂಬಂತೆ ಐಪಿಎಲ್‌ 2023 ರಿಂದ ಐಪಿಎಲ್‌ 2027 ರವರೆಗಿನ ಎಲ್ಲಾ 410 ಪಂದ್ಯಗಳ ಪ್ರಸಾರ ಹಕ್ಕು ಬರೋಬ್ಬರಿ 44,075 ಕೋಟಿ ರೂ.ಗಳ ಬೆಲೆಗೆ ಮಾರಾಟವಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಮಾಜಿ ಕ್ರಿಕೆಟಿಗರು ಮತ್ತು ಅಂಪೈರ್‌ಗಳಿಗೆ ಬಂಪರ್ ಶುಭಸುದ್ದಿಯೊಂದನ್ನು ನೀಡಿದೆ. ಮಾಜಿ ಆಟಗಾರರ ತಿಂಗಳ ಪಿಂಚಣಿಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿದ್ದು, ಈ ನಿರ್ಧಾರದಿಂದಾಗಿ ಸುಮಾರು 900 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಮಾಧ್ಯಮ ಹಕ್ಕುಗಳಿಗಾಗಿ ನಡೆದ ಇ-ಹರಾಜಿನ 2ನೇ ದಿನದಂದು ಜಯ್ ಶಾ ಅವರು ಈ ಪ್ರಕಟಣೆ ಹೊರಡಿಸಿದ್ದಾರೆ.

“ಮಾಜಿ ಕ್ರಿಕೆಟಿಗರು (ಪುರುಷರು, ಮಹಿಳೆಯರು) ಮತ್ತು ಅಂಪೈರ್‌ಗಳ ಪಿಂಚಣಿ ಹೆಚ್ಚಿಸಿರುವುದನ್ನು ಘೋಷಿಸಲು ಸಂತಸವಾಗುತ್ತಿದೆ. ಸುಮಾರು 900 ಆಟಗಾರರು ಇದರ ಲಾಭ ಪಡೆಯಲಿದ್ದಾರೆ. ಇದರಲ್ಲಿ ಶೇ. 75 ರಷ್ಟು ಮಂದಿಯ ಪಿಂಚಣಿಯನ್ನು ಶೇ 100 ರಷ್ಟು ಹೆಚ್ಚಿಸಲಾಗಿದೆ,” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ.

ಇದನ್ನೂ ಓದಿ
Image
IND vs SA: ಮೂರನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಮಾಡಿದೆ ಮಾಸ್ಟರ್ ಪ್ಲಾನ್: ಏನದು ನೋಡಿ
Image
ATP Rankings: ನಂ.1 ಸ್ಥಾನಕ್ಕೇರಿದ ಮೆಡ್ವೆಡೆವ್! 4 ವರ್ಷದಲ್ಲಿ ಮೊದಲ ಬಾರಿಗೆ ಟಾಪ್ 2 ರಿಂದ ಜೊಕೊವಿಕ್ ಔಟ್
Image
ENG vs NZ: ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್..!
Image
ICC Awards: ಐಸಿಸಿ ತಿಂಗಳ ಆಟಗಾರ್ತಿ ಪ್ರಶಸ್ತಿ ಗೆದ್ದ ಪಾಕಿಸ್ತಾನದ ಯುವ ಮಹಿಳಾ ಕ್ರಿಕೆಟರ್

“ನಮ್ಮ ಮಾಜಿ ಕ್ರಿಕೆಟಿಗರ ಆರ್ಥಿಕ ಯೋಗಕ್ಷೇಮವನ್ನು ನೋಡಿಕೊಳ್ಳುವುದು ಬಹಳ ಮುಖ್ಯ. ಆಟಗಾರರು ಕ್ರಿಕೆಟ್‌ನ ಮತ್ತು ಮಂಡಳಿಯ ಜೀವನಾಡಿಯಾಗಿ ಉಳಿಯುತ್ತಾರೆ. ಅವರ ಆಟದ ದಿನಗಳು ಮುಗಿದ ನಂತರ ಅವರ ಜೊತೆಗಿರುವುದು ನಮ್ಮ ಕರ್ತವ್ಯ. ಅಂಪೈರ್‌ಗಳು ಅನ್‌ಸಂಗ್ ಹೀರೋಗಳು ಮತ್ತು ಬಿಸಿಸಿಐ ಅವರ ಕೊಡುಗೆಯನ್ನು ನಿಜವಾಗಿಯೂ ಗೌರವಿಸುತ್ತದೆ,” ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

IND vs SA 3rd T20I: ಇಂದು ತೃತೀಯ ಟಿ20: ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ

ಇದೀಗ ಪ್ರಥಮ ದರ್ಜೆ ಪಂದ್ಯವನ್ನಾಡಿದ ಮಾಜಿ ಆಟಗಾರರಿಗೆ ನೀಡುತ್ತಿದ್ದ ಪಿಂಚಣಿಯನ್ನು 15 ಸಾವಿರ ರೂಪಾಯಿಯಿಂದ 30 ಸಾವಿರಕ್ಕೆ ಏರಿಕೆ ಮಾಡಿದೆ. ಪ್ರತಿ ತಿಂಗಳು 37,500 ರೂ. ಪಿಂಚಣಿ ಪಡೆಯುತ್ತಿದ್ದ ಟೆಸ್ಟ್‌ ತಂಡದ ಮಾಜಿ ಆಟಗಾರರು ಇನ್ನುಂದೆ 60,000 ಹಾಗೂ 50,000 ರೂ. ಪಡೆಯುತ್ತಿದ್ದವರು 70,000 ರೂ. ಪಡೆಯಲಿದ್ದಾರೆ. ಅಂತೆಯೆ ರಾಷ್ಟ್ರೀಯ ಮಹಿಳಾ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ್ತಿಯರು 30 ಸಾವಿರ ರೂ. ಬದಲು 52,500 ರೂ. ಪಡೆಯಲಿದ್ದಾರೆ. 2003ಕ್ಕೂ ಮುನ್ನ ನಿವೃತ್ತಿಯಾಗಿದ್ದ ಪ್ರಥಮ ದರ್ಜೆ ಕ್ರಿಕೆಟ್‌ ಆಟಗಾರರು 22,500 ರೂ. ಬದಲು 45 ರೂ. ಸಾವಿರ ಪಡೆದುಕೊಳ್ಳುತ್ತಾರೆ.

IPL ಪ್ರಸಾರ ಹಕ್ಕು ದಾಖಲೆಯ ಮೊತ್ತಕ್ಕೆ ಹರಾಜು:

2023-2027ರ ಅವಧಿಯಲ್ಲಿ ನಡೆಯಲಿರುವ 410 ಪಂದ್ಯಗಳಿಗೆ ನಡೆದ ಹರಾಜಿನಲ್ಲಿ ಪ್ಯಾಕೇಜ್ ಎ (TV) ಪ್ರಸಾರದ ಹಕ್ಕು 23,575 ಕೋಟಿ ರೂಪಾಯಿಗೆ ಹರಾಜಾಗಿದೆ. ಕಳೆದ ಬಾರಿ ಸ್ಟಾರ್ ಇಂಡಿಯಾ 2017ರಲ್ಲಿ 16,347 ಕೋಟಿ ರೂ. ನೀಡಿತ್ತು. ಆದರೀಗ ಅದಕ್ಕಿಂತ 7 ಸಾವಿರ ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾಗಿದ್ದು, ಪ್ರತಿ ಪಂದ್ಯಕ್ಕೆ 57.5 ಕೋಟಿ ರೂಪಾಯಿ ದಾಖಲಾಗಿದೆ. ಡಿಸ್ನಿ ಸ್ಟಾರ್ ಮುಂದಿನ ಐದು ವರ್ಷಗಳ ಕಾಲ ಐಪಿಎಲ್‌ನ ಭಾರತೀಯ ಟಿವಿ ಹಕ್ಕುಗಳನ್ನು ಉಳಿಸಿಕೊಂಡಿದೆ. Viacom18 ಡಿಜಿಟಲ್ ಹಕ್ಕುಗಳನ್ನು ಪಡೆದುಕೊಂಡಿದೆ. ಭಾರತೀಯ ಟಿವಿ ಮತ್ತು ಪ್ರತಿ ಪಂದ್ಯದ ಡಿಜಿಟಲ್ ಹಕ್ಕುಗಳಿಂದ ಮಾತ್ರ ಪ್ರತಿ ಪಂದ್ಯದ ಮೌಲ್ಯವು 107.5 ಕೋಟಿಯಾಗಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:36 am, Tue, 14 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್