AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

Andrew Flintoff: ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು
Andrew Flintoff
TV9 Web
| Edited By: |

Updated on: Dec 14, 2022 | 9:13 AM

Share

ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ (Andrew Flintoff) ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬಿಬಿಸಿಯ (BBC) “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತದಿಂದ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲವೆಂದು ಬಿಬಿಸಿ ತನ್ನ ಹೇಳಿಕೆಯಲ್ಲಿ ಧೃಡಪಡಿಸಿದೆ.

ಟಾಪ್ ಗೇರ್ ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಮುಂಜಾನೆಯಂದು ಫ್ಲಿಂಟಾಫ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಕ್ಷಣವೇ ಸೆಟ್‌ನಲ್ಲಿದ್ದ ವೈದ್ಯಕೀಯ ತಂಡ ಅವರಿಗೆ ಚಿಕಿತ್ಸೆ ನೀಡಿತು. ಅವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶೀಘ್ರದಲ್ಲೇ ಅವರ ಆರೋಗ್ಯದ ಬಗ್ಗೆ ನಾವು ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ ಎಂದು ಬಿಸಿಸಿ ಹೇಳಿಕೊಂಡಿದೆ.

ಎರಡನೇ ಬಾರಿಗೆ ಈ ಅವಘಡ

ವಾಸ್ತವವಾಗಿ, ಫ್ಲಿಂಟಾಫ್ ಕಾರು ಅಪಘಾತದಲ್ಲಿ ಗಾಯಗೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019ರಲ್ಲಿ ಇಂತಹ ಅಪಘಾತಕ್ಕೆ ಫ್ಲಿಂಟಾಫ್ ತುತ್ತಾಗಿದ್ದರು. ತನ್ನ ಕಾರನ್ನು 124mph ವೇಗದಲ್ಲಿ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣವನ್ನು ಕಳೆದುಕೊಂಡಿದ್ದ ಫ್ಲಿಂಟಾಫ್ ಅಪಘಾತಕ್ಕೀಡಾಗಿದ್ದರು. ಅಲ್ಲೂ ಸಹ ಸಣ್ಣಪುಟ್ಟ ಗಾಯಗಳಿಂದ ಫ್ಲಿಂಟಾಫ್ ಬದುಕುಳಿದಿದ್ದರು.

2009ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

ಇಂಗ್ಲೆಂಡ್ ಪರ 79 ಟೆಸ್ಟ್ ಮತ್ತು 141 ಸೀಮಿತ ಓವರ್ ಪಂದ್ಯಗಳನ್ನು ಆಡಿರುವ ಆಂಡ್ರ್ಯೂ ಫ್ಲಿಂಟಾಫ್, 2009 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು. 2005 ರ ಆಶಸ್‌ ಸರಣಿಯಲ್ಲಿ ಇಂಗ್ಲೆಂಡ್ ಪರ ಅಮೋಘ ಪ್ರದರ್ಶನ ನೀಡಿದ್ದ ಈ ಆಲ್​ರೌಂಡರ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ