AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

Andrew Flintoff: ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು
Andrew Flintoff
TV9 Web
| Edited By: |

Updated on: Dec 14, 2022 | 9:13 AM

Share

ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ (Andrew Flintoff) ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬಿಬಿಸಿಯ (BBC) “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತದಿಂದ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲವೆಂದು ಬಿಬಿಸಿ ತನ್ನ ಹೇಳಿಕೆಯಲ್ಲಿ ಧೃಡಪಡಿಸಿದೆ.

ಟಾಪ್ ಗೇರ್ ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಮುಂಜಾನೆಯಂದು ಫ್ಲಿಂಟಾಫ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಕ್ಷಣವೇ ಸೆಟ್‌ನಲ್ಲಿದ್ದ ವೈದ್ಯಕೀಯ ತಂಡ ಅವರಿಗೆ ಚಿಕಿತ್ಸೆ ನೀಡಿತು. ಅವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶೀಘ್ರದಲ್ಲೇ ಅವರ ಆರೋಗ್ಯದ ಬಗ್ಗೆ ನಾವು ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ ಎಂದು ಬಿಸಿಸಿ ಹೇಳಿಕೊಂಡಿದೆ.

ಎರಡನೇ ಬಾರಿಗೆ ಈ ಅವಘಡ

ವಾಸ್ತವವಾಗಿ, ಫ್ಲಿಂಟಾಫ್ ಕಾರು ಅಪಘಾತದಲ್ಲಿ ಗಾಯಗೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019ರಲ್ಲಿ ಇಂತಹ ಅಪಘಾತಕ್ಕೆ ಫ್ಲಿಂಟಾಫ್ ತುತ್ತಾಗಿದ್ದರು. ತನ್ನ ಕಾರನ್ನು 124mph ವೇಗದಲ್ಲಿ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣವನ್ನು ಕಳೆದುಕೊಂಡಿದ್ದ ಫ್ಲಿಂಟಾಫ್ ಅಪಘಾತಕ್ಕೀಡಾಗಿದ್ದರು. ಅಲ್ಲೂ ಸಹ ಸಣ್ಣಪುಟ್ಟ ಗಾಯಗಳಿಂದ ಫ್ಲಿಂಟಾಫ್ ಬದುಕುಳಿದಿದ್ದರು.

2009ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

ಇಂಗ್ಲೆಂಡ್ ಪರ 79 ಟೆಸ್ಟ್ ಮತ್ತು 141 ಸೀಮಿತ ಓವರ್ ಪಂದ್ಯಗಳನ್ನು ಆಡಿರುವ ಆಂಡ್ರ್ಯೂ ಫ್ಲಿಂಟಾಫ್, 2009 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು. 2005 ರ ಆಶಸ್‌ ಸರಣಿಯಲ್ಲಿ ಇಂಗ್ಲೆಂಡ್ ಪರ ಅಮೋಘ ಪ್ರದರ್ಶನ ನೀಡಿದ್ದ ಈ ಆಲ್​ರೌಂಡರ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!