AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ಗೆ ವಿದಾಯ ಹೇಳಿದ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಟೀಮ್ ಇಂಡಿಯಾ ಆಟಗಾರ..!

Team India: ಐಪಿಎಲ್​ನಲ್ಲಿ 2010 ರಲ್ಲಿ ಡೆಕ್ಕನ್ ಚಾರ್ಜರ್ಸ್ (ಈಗಿನ ಸನ್‌ರೈಸರ್ಸ್ ಹೈದರಾಬಾದ್) ಪರ ಪದಾರ್ಪಣೆ ಮಾಡಿದ್ದ ರಾಹುಲ್ ಶರ್ಮಾ ಆ ಬಳಿಕ ಪುಣೆ ವಾರಿಯರ್ಸ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು.

ಕ್ರಿಕೆಟ್​ಗೆ ವಿದಾಯ ಹೇಳಿದ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಟೀಮ್ ಇಂಡಿಯಾ ಆಟಗಾರ..!
Rahul Sharma
TV9 Web
| Edited By: |

Updated on: Aug 29, 2022 | 9:25 PM

Share

ಟೀಮ್ ಇಂಡಿಯಾ ಸ್ಪಿನ್ನರ್ ರಾಹುಲ್ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿರುವ ರಾಹುಲ್ ಶರ್ಮಾ, ಈ ಅದ್ಭುತ ಪಯಣದಲ್ಲಿ ನನ್ನನ್ನು ಬೆಂಬಲಿಸಿದ ಅಭಿಮಾನಿಗಳು ಮತ್ತು ಬಿಸಿಸಿಐಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಒಂದು ಕಾಲದಲ್ಲಿ ಐಪಿಎಲ್​ನಲ್ಲಿ ಮಿಂಚುವ ಮೂಲಕ ರಾಹುಲ್ ಶರ್ಮಾ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು.

2011 ರಲ್ಲಿ ಟೀಮ್ ಇಂಡಿಯಾ ಪರ ಪದಾರ್ಪಣೆಯನ್ನು ಕೂಡ ಮಾಡಿದ್ದರು. ಆದರೆ ಆ ಬಳಿಕ ಯುವ ಆಟಗಾರ ಬೆಲ್ ಪಾಲ್ಸಿ (ಮುಖದ ಪಾರ್ಶ್ವವಾಯು) ಸಮಸ್ಯೆಗೀಡಾಗಿದ್ದರು. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಪಾರ್ಶ್ವವಾಯು ಸಮಸ್ಯೆಯ ಕಾರಣ ಐಪಿಎಲ್​ನಿಂದ ಕೂಡ ಹೊರಗುಳಿಯಬೇಕಾಯಿತು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಟೀಮ್ ಇಂಡಿಯಾ ಪರ ಆಡುವ ಕನಸನ್ನು ಈಡೇರಿಸಿಕೊಂಡಿದ್ದ ರಾಹುಲ್ ಶರ್ಮಾ, ಭಾರತದ ಪರ 4 ಏಕದಿನ ಮತ್ತು 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ ಒಟ್ಟು 9 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಇನ್ನು ರಾಹುಲ್ ಶರ್ಮಾಗೆ ಗೌತಮ್ ಗಂಭೀರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್ ಮತ್ತು ಎಂಎಸ್ ಧೋನಿಯಂತಹ ದಿಗ್ಗಜ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳುವ ಅವಕಾಶ ಕೂಡ ಲಭಿಸಿತ್ತು ಎಂಬುದು ವಿಶೇಷ.

ಐಪಿಎಲ್​ನಲ್ಲಿ 2010 ರಲ್ಲಿ ಡೆಕ್ಕನ್ ಚಾರ್ಜರ್ಸ್ (ಈಗಿನ ಸನ್‌ರೈಸರ್ಸ್ ಹೈದರಾಬಾದ್) ಪರ ಪದಾರ್ಪಣೆ ಮಾಡಿದ್ದ ರಾಹುಲ್ ಶರ್ಮಾ ಆ ಬಳಿಕ ಪುಣೆ ವಾರಿಯರ್ಸ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 44 ಐಪಿಎಲ್ ಪಂದ್ಯವಾಡಿದ್ದ ರಾಹುಲ್ ಶರ್ಮಾ 40 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!