AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಚಿನ್ ಬಾಲ್ಯ ಸೇಹಿತ ವಿನೋದ್ ಕಾಂಬ್ಳಿಯನ್ನು ಬಂಧಿಸಿದ ಮುಂಬೈ ಪೊಲೀಸರು..!

Vinod Kambli: ಮಾಹಿತಿಯ ಪ್ರಕಾರ, ಫೆಬ್ರವರಿ 27 ರ ಭಾನುವಾರ ಮಧ್ಯಾಹ್ನ ಕಾಂಬ್ಳಿಯನ್ನು ಬಾಂದ್ರಾದ ಅವರ ಮನೆಯಿಂದ ಬಂಧಿಸಲಾಗಿದೆ. ಕಾಂಬ್ಳಿ ಅವರು ಮದ್ಯದ ಅಮಲಿನಲ್ಲಿ ಬಾಂದ್ರಾದ ತಮ್ಮ ರೆಸಿಡೆನ್ಶಿಯಲ್ ಸೊಸೈಟಿಯ ಗೇಟ್‌ನಲ್ಲಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಚಿನ್ ಬಾಲ್ಯ ಸೇಹಿತ ವಿನೋದ್ ಕಾಂಬ್ಳಿಯನ್ನು ಬಂಧಿಸಿದ ಮುಂಬೈ ಪೊಲೀಸರು..!
ವಿನೋದ್ ಕಾಂಬ್ಳಿ
TV9 Web
| Updated By: ಪೃಥ್ವಿಶಂಕರ|

Updated on:Feb 27, 2022 | 10:13 PM

Share

ಭಾರತೀಯ ಕ್ರಿಕೆಟ್ ತಂಡದ (Indian cricket team) ಮಾಜಿ ಆಕ್ರಮಣಕಾರಿ ಬ್ಯಾಟ್ಸ್‌ಮನ್ ವಿನೋದ್ ಕಾಂಬ್ಳಿ (Vinod Kambli) ತಮ್ಮ ಚಟುವಟಿಕೆಗಳಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ತಮ್ಮ ವರ್ತನೆಯಿಂದಲೇ ಸುದ್ದಿಯಾಗಿದ್ದ ಕಾಂಬ್ಳಿ ಮತ್ತೊಮ್ಮೆ ಸುದ್ದಿಗೆ ಬಂದಿದ್ದು, ಈ ಬಾರಿ ಕಾರಣ ಸರಿಯಿಲ್ಲ. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಕಾಂಬ್ಳಿ ತಮ್ಮ ಆಕ್ರಮಣಕಾರಿ ವರ್ತನೆಯಿಂದ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈ ಪೊಲೀಸರು ಈ ಮಾಜಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ನನ್ನು ಕುಡಿದ ಅಮಲಿನಲ್ಲಿ ಆಕ್ಸಿಡೆಂಟ್ ಮಾಡಿರುವ ಆರೋಪದ ಮೇಲೆ ಬಂಧಿಸಿದ್ದಾರೆ. ಪೊಲೀಸರು ಕಾಂಬ್ಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಬಳಿಕ ಅವರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಮಾಹಿತಿಯ ಪ್ರಕಾರ, ಫೆಬ್ರವರಿ 27 ರ ಭಾನುವಾರ ಮಧ್ಯಾಹ್ನ ಕಾಂಬ್ಳಿಯನ್ನು ಬಾಂದ್ರಾದ ಅವರ ಮನೆಯಿಂದ ಬಂಧಿಸಲಾಗಿದೆ. ಕಾಂಬ್ಳಿ ಅವರು ಮದ್ಯದ ಅಮಲಿನಲ್ಲಿ ಬಾಂದ್ರಾದ ತಮ್ಮ ರೆಸಿಡೆನ್ಶಿಯಲ್ ಸೊಸೈಟಿಯ ಗೇಟ್‌ನಲ್ಲಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದಾದ ಬಳಿಕ ಅಲ್ಲಿದ್ದ ಸೊಸೈಟಿಯ ಸಿಬ್ಬಂದಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದು, ಸ್ಥಳೀಯರು ಪೊಲೀಸರಿಗೆ ದೂರು ನೀಡಿ ನಂತರ ಬಂಧಿಸಲಾಗಿದೆ.

ವೈದ್ಯಕೀಯ ಪರೀಕ್ಷೆ ನಂತರ ಜಾಮೀನು

ಬಂಧನದ ನಂತರ ಕಾಂಬ್ಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಮುಂಬೈ ಪೊಲೀಸರು, ವಿನೋದ್ ಕಾಂಬ್ಳಿ ಅವರನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅವರ ವೈದ್ಯಕೀಯ ಪರೀಕ್ಷೆಯನ್ನು ಭಾಭಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ ಮತ್ತು ಅವರ ರಕ್ತದ ಮಾದರಿಯನ್ನು ಸಿಎಗೆ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಸೈಬರ್ ವಂಚನೆ

ಕೆಲ ತಿಂಗಳ ಹಿಂದೆಯಷ್ಟೇ ಕಾಂಬ್ಳಿ ಬೇರೆ ಕಾರಣಕ್ಕೆ ಸುದ್ದಿಯಾಗಿದ್ದರು. ಡಿಸೆಂಬರ್ 2021 ರಲ್ಲಿ, ಸೈಬರ್ ವಂಚನೆಗೆ ಮಾಜಿ ಎಡಗೈ ಬ್ಯಾಟ್ಸ್‌ಮನ್ ಕಾಂಬ್ಳಿ ಬಲಿಯಾಗಿದ್ದರು. ತಮ್ಮ ಖಾತೆಯಿಂದ ಒಂದು ಲಕ್ಷ ರೂಪಾಯಿ ಹಣ ಡ್ರಾ ಆಗಿದೆ ಎಂದು ಹೇಳಿ ಕಾಂಬ್ಳಿ ಬಾಂದ್ರಾ ಪೊಲೀಸರಿಗೆ ದೂರು ನೀಡಿದ್ದರು.

ಕಾಂಬ್ಳಿ ಅವರ ವೃತ್ತಿಜೀವನ

ವಿನೋದ್ ಕಾಂಬ್ಳಿ 1990 ರ ದಶಕದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು ಮತ್ತು ದೀರ್ಘಕಾಲದವರೆಗೆ ತಂಡದ ಭಾಗವಾಗಿದ್ದರು. ಅವರು 17 ಟೆಸ್ಟ್‌ಗಳಲ್ಲಿ 54 ರ ಸರಾಸರಿಯಲ್ಲಿ 1084 ರನ್ ಗಳಿಸಿದರು, ಇದರಲ್ಲಿ 4 ಶತಕಗಳು ಸೇರಿವೆ. ಅದೇ ಸಮಯದಲ್ಲಿ, 104 ODIಗಳಲ್ಲಿ, ಅವರ ಬ್ಯಾಟ್‌ನಿಂದ 2477 ರನ್ ಹರಿದುಬಂದಿವೆ. ಇದರಲ್ಲಿ ಅವರು 2 ಶತಕ ಮತ್ತು 14 ಅರ್ಧ ಶತಕಗಳನ್ನು ಗಳಿಸಿದರು.

ಇದನ್ನೂ ಓದಿ:IND vs SL: ರೋಹಿತ್​ಗೆ ದಾಖಲೆಯ ಪಂದ್ಯ, ತಂಡದಲ್ಲಿ ಹಲವು ಬದಲಾವಣೆ; ಉಭಯ ತಂಡಗಳ ಪ್ಲೇಯಿಂಗ್ XI

Published On - 10:12 pm, Sun, 27 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ