AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!

Tushar Arothe: ಮಾಜಿ ಆಟಗಾರ ತುಷಾರ್ ಅರೋಥೆ ಭಾರತ ಮಹಿಳಾ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. 2018 ರಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದ ತುಷಾರ್ ಆ ಬಳಿಕ ಬೆಟ್ಟಿಂಗ್ ವಿಷಯದಲ್ಲಿ ಸುದ್ದಿಯಾಗಿದ್ದರು. ಇದೀಗ ಭಾರತ ತಂಡದ ಮಾಜಿ ಕೋಚ್ ವಿರುದ್ಧ ಕಾಳಧನದ ಆರೋಪ ಕೇಳಿ ಬಂದಿದೆ.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!
Tushar Arothe
TV9 Web
| Edited By: |

Updated on: Mar 05, 2024 | 12:33 PM

Share

ಭಾರತ ಮಹಿಳಾ ತಂಡದ ಮಾಜಿ ಕೋಚ್ ತುಷಾರ್ ಅರೋಥೆ (Tushar Arothe) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ಮನೆಯಲ್ಲಿ 1 ಕೋಟಿ ರೂ. ಮೊತ್ತ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಖಚಿತ ಮಾಹಿತಿಯೊಂದಿಗೆ ವಡೋದರದ ಪತ್ಪರ್‌ಗಂಜ್ ಪ್ರದೇಶದಲ್ಲಿರುವ ತುಷಾರ್ ಅರೋಥೆ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಪೊಲೀಸರಿಗೆ ಒಂದು ಕೋಟಿ ರೂ. ಲಭಿಸಿದೆ. ಈ ಹಣ ಹೇಗೆ ಬಂತು, ಎಲ್ಲಿಂದ ಬಂತು, ಇದರ ಮೂಲ ಯಾವುದು, ಇಂತಹ ಪ್ರಶ್ನೆಗಳಿಗೆ ಭಾರತದ ಮಾಜಿ ಕೋಚ್‌ನಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಈ ಕುರಿತು ವಡೋದರಾ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಣದ ಮೂಲದ ಬಗ್ಗೆ ಅರೋಥೆ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಮನೆಯ ಮೇಲೆ ದಾಳಿ ನಡೆಸಿ ಬೂದು ಬಣ್ಣದ ಬ್ಯಾಗ್‌ನಲ್ಲಿಟ್ಟಿದ್ದ ಒಟ್ಟು ಮೊತ್ತ 1.01 ಕೋಟಿ ರೂಪಾಯಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಂದಹಾಗೆ ಈ ಹಿಂದೆ ಕೂಡ ತುಷಾರ್ ಅರೋಥೆ ಸುದ್ದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಐಪಿಎಲ್ 2019 ರ ಸಂದರ್ಭದಲ್ಲಿ ಕೆಫೆಯೊಂದರಲ್ಲಿ ದಾಳಿ ನಡೆಸಿದ ಗುಜರಾತ್ ಪೊಲೀಸರು 19 ಜನರನ್ನು ಬಂಧಿಸಿದಾಗ, ಅವರಲ್ಲಿ ಅರೋಥೆ ಕೂಡ ಇದ್ದರು. ನಂತರ ತುಷಾರ್ ಅರೋಥೆಯ ಫೋನ್ ಮತ್ತು ಕಾರನ್ನು ಸಹ ಜಪ್ತಿ ಮಾಡಲಾಗಿತ್ತು.

ಇದಾದ ಬಳಿಕ ಪೊಲೀಸರು ಅರೋಥೆ ಅವರ ಮೊಬೈಲ್‌ನಲ್ಲಿ ತಪಾಸಣೆ ನಡೆಸಿದಾಗ ಅದರಲ್ಲಿ ಯಾವುದೇ ಬೆಟ್ಟಿಂಗ್ ಆ್ಯಪ್ ಪತ್ತೆಯಾಗಿರಲಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಈ ಹಿಂದೆ ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ತುಷಾರ್ ಅರೋಥೆ 2018ರಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ 2017 ರಲ್ಲಿ ತುಷಾರ್ ಅವರ ಕೋಚಿಂಗ್ ಸಾರಥ್ಯದಲ್ಲಿ ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್‌ನಲ್ಲಿ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಇದಾದ ಬಳಿಕ ತುಷಾರ್ ಅರೋಥೆ ಪೊಲೀಸ್ ದಾಳಿಯೊಂದಿಗೆ ಸುದ್ದಿಯಾಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ