AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!

Tushar Arothe: ಮಾಜಿ ಆಟಗಾರ ತುಷಾರ್ ಅರೋಥೆ ಭಾರತ ಮಹಿಳಾ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. 2018 ರಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದ ತುಷಾರ್ ಆ ಬಳಿಕ ಬೆಟ್ಟಿಂಗ್ ವಿಷಯದಲ್ಲಿ ಸುದ್ದಿಯಾಗಿದ್ದರು. ಇದೀಗ ಭಾರತ ತಂಡದ ಮಾಜಿ ಕೋಚ್ ವಿರುದ್ಧ ಕಾಳಧನದ ಆರೋಪ ಕೇಳಿ ಬಂದಿದೆ.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!
Tushar Arothe
TV9 Web
| Updated By: ಝಾಹಿರ್ ಯೂಸುಫ್|

Updated on: Mar 05, 2024 | 12:33 PM

Share

ಭಾರತ ಮಹಿಳಾ ತಂಡದ ಮಾಜಿ ಕೋಚ್ ತುಷಾರ್ ಅರೋಥೆ (Tushar Arothe) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ಮನೆಯಲ್ಲಿ 1 ಕೋಟಿ ರೂ. ಮೊತ್ತ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಖಚಿತ ಮಾಹಿತಿಯೊಂದಿಗೆ ವಡೋದರದ ಪತ್ಪರ್‌ಗಂಜ್ ಪ್ರದೇಶದಲ್ಲಿರುವ ತುಷಾರ್ ಅರೋಥೆ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಪೊಲೀಸರಿಗೆ ಒಂದು ಕೋಟಿ ರೂ. ಲಭಿಸಿದೆ. ಈ ಹಣ ಹೇಗೆ ಬಂತು, ಎಲ್ಲಿಂದ ಬಂತು, ಇದರ ಮೂಲ ಯಾವುದು, ಇಂತಹ ಪ್ರಶ್ನೆಗಳಿಗೆ ಭಾರತದ ಮಾಜಿ ಕೋಚ್‌ನಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಈ ಕುರಿತು ವಡೋದರಾ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಣದ ಮೂಲದ ಬಗ್ಗೆ ಅರೋಥೆ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಮನೆಯ ಮೇಲೆ ದಾಳಿ ನಡೆಸಿ ಬೂದು ಬಣ್ಣದ ಬ್ಯಾಗ್‌ನಲ್ಲಿಟ್ಟಿದ್ದ ಒಟ್ಟು ಮೊತ್ತ 1.01 ಕೋಟಿ ರೂಪಾಯಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಂದಹಾಗೆ ಈ ಹಿಂದೆ ಕೂಡ ತುಷಾರ್ ಅರೋಥೆ ಸುದ್ದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಐಪಿಎಲ್ 2019 ರ ಸಂದರ್ಭದಲ್ಲಿ ಕೆಫೆಯೊಂದರಲ್ಲಿ ದಾಳಿ ನಡೆಸಿದ ಗುಜರಾತ್ ಪೊಲೀಸರು 19 ಜನರನ್ನು ಬಂಧಿಸಿದಾಗ, ಅವರಲ್ಲಿ ಅರೋಥೆ ಕೂಡ ಇದ್ದರು. ನಂತರ ತುಷಾರ್ ಅರೋಥೆಯ ಫೋನ್ ಮತ್ತು ಕಾರನ್ನು ಸಹ ಜಪ್ತಿ ಮಾಡಲಾಗಿತ್ತು.

ಇದಾದ ಬಳಿಕ ಪೊಲೀಸರು ಅರೋಥೆ ಅವರ ಮೊಬೈಲ್‌ನಲ್ಲಿ ತಪಾಸಣೆ ನಡೆಸಿದಾಗ ಅದರಲ್ಲಿ ಯಾವುದೇ ಬೆಟ್ಟಿಂಗ್ ಆ್ಯಪ್ ಪತ್ತೆಯಾಗಿರಲಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಈ ಹಿಂದೆ ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ತುಷಾರ್ ಅರೋಥೆ 2018ರಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ 2017 ರಲ್ಲಿ ತುಷಾರ್ ಅವರ ಕೋಚಿಂಗ್ ಸಾರಥ್ಯದಲ್ಲಿ ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್‌ನಲ್ಲಿ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಇದಾದ ಬಳಿಕ ತುಷಾರ್ ಅರೋಥೆ ಪೊಲೀಸ್ ದಾಳಿಯೊಂದಿಗೆ ಸುದ್ದಿಯಾಗುತ್ತಿದ್ದಾರೆ.

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ