AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!

Tushar Arothe: ಮಾಜಿ ಆಟಗಾರ ತುಷಾರ್ ಅರೋಥೆ ಭಾರತ ಮಹಿಳಾ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. 2018 ರಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದ ತುಷಾರ್ ಆ ಬಳಿಕ ಬೆಟ್ಟಿಂಗ್ ವಿಷಯದಲ್ಲಿ ಸುದ್ದಿಯಾಗಿದ್ದರು. ಇದೀಗ ಭಾರತ ತಂಡದ ಮಾಜಿ ಕೋಚ್ ವಿರುದ್ಧ ಕಾಳಧನದ ಆರೋಪ ಕೇಳಿ ಬಂದಿದೆ.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!
Tushar Arothe
TV9 Web
| Edited By: |

Updated on: Mar 05, 2024 | 12:33 PM

Share

ಭಾರತ ಮಹಿಳಾ ತಂಡದ ಮಾಜಿ ಕೋಚ್ ತುಷಾರ್ ಅರೋಥೆ (Tushar Arothe) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ಮನೆಯಲ್ಲಿ 1 ಕೋಟಿ ರೂ. ಮೊತ್ತ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಖಚಿತ ಮಾಹಿತಿಯೊಂದಿಗೆ ವಡೋದರದ ಪತ್ಪರ್‌ಗಂಜ್ ಪ್ರದೇಶದಲ್ಲಿರುವ ತುಷಾರ್ ಅರೋಥೆ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಪೊಲೀಸರಿಗೆ ಒಂದು ಕೋಟಿ ರೂ. ಲಭಿಸಿದೆ. ಈ ಹಣ ಹೇಗೆ ಬಂತು, ಎಲ್ಲಿಂದ ಬಂತು, ಇದರ ಮೂಲ ಯಾವುದು, ಇಂತಹ ಪ್ರಶ್ನೆಗಳಿಗೆ ಭಾರತದ ಮಾಜಿ ಕೋಚ್‌ನಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಈ ಕುರಿತು ವಡೋದರಾ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಣದ ಮೂಲದ ಬಗ್ಗೆ ಅರೋಥೆ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಮನೆಯ ಮೇಲೆ ದಾಳಿ ನಡೆಸಿ ಬೂದು ಬಣ್ಣದ ಬ್ಯಾಗ್‌ನಲ್ಲಿಟ್ಟಿದ್ದ ಒಟ್ಟು ಮೊತ್ತ 1.01 ಕೋಟಿ ರೂಪಾಯಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಂದಹಾಗೆ ಈ ಹಿಂದೆ ಕೂಡ ತುಷಾರ್ ಅರೋಥೆ ಸುದ್ದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಐಪಿಎಲ್ 2019 ರ ಸಂದರ್ಭದಲ್ಲಿ ಕೆಫೆಯೊಂದರಲ್ಲಿ ದಾಳಿ ನಡೆಸಿದ ಗುಜರಾತ್ ಪೊಲೀಸರು 19 ಜನರನ್ನು ಬಂಧಿಸಿದಾಗ, ಅವರಲ್ಲಿ ಅರೋಥೆ ಕೂಡ ಇದ್ದರು. ನಂತರ ತುಷಾರ್ ಅರೋಥೆಯ ಫೋನ್ ಮತ್ತು ಕಾರನ್ನು ಸಹ ಜಪ್ತಿ ಮಾಡಲಾಗಿತ್ತು.

ಇದಾದ ಬಳಿಕ ಪೊಲೀಸರು ಅರೋಥೆ ಅವರ ಮೊಬೈಲ್‌ನಲ್ಲಿ ತಪಾಸಣೆ ನಡೆಸಿದಾಗ ಅದರಲ್ಲಿ ಯಾವುದೇ ಬೆಟ್ಟಿಂಗ್ ಆ್ಯಪ್ ಪತ್ತೆಯಾಗಿರಲಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಈ ಹಿಂದೆ ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ತುಷಾರ್ ಅರೋಥೆ 2018ರಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ 2017 ರಲ್ಲಿ ತುಷಾರ್ ಅವರ ಕೋಚಿಂಗ್ ಸಾರಥ್ಯದಲ್ಲಿ ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್‌ನಲ್ಲಿ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಇದಾದ ಬಳಿಕ ತುಷಾರ್ ಅರೋಥೆ ಪೊಲೀಸ್ ದಾಳಿಯೊಂದಿಗೆ ಸುದ್ದಿಯಾಗುತ್ತಿದ್ದಾರೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ