AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ

ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ
ಕೋಚ್ ರವಿಶಾಸ್ತ್ರಿ ಫ್ಲೋ ಟೆಸ್ಟ್ ವರದಿ ಪಾಸಿಟಿವ್
TV9 Web
| Edited By: |

Updated on:Sep 05, 2021 | 3:55 PM

Share

ಭಾರತ ತಂಡ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಓವಲ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದೆ ಮತ್ತು ಇಂದು ಈ ಪಂದ್ಯದ ನಾಲ್ಕನೇ ದಿನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಾರತದ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ತಂಡದ ಸಹಾಯಕ ಸಿಬ್ಬಂದಿಯ ನಾಲ್ವರನ್ನು ಪ್ರತ್ಯೇಕಿಸಲಾಗಿದೆ. ಬಿಸಿಸಿಐ ಈ ಹೇಳಿಕೆಯನ್ನು ನೀಡುವ ಮೂಲಕ ಮಾಹಿತಿಯನ್ನು ಹೊರಹಾಕಿದೆ. ಈ ನಾಲ್ಕು ಜನರಲ್ಲಿ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಸೇರಿದ್ದಾರೆ.

ಬಿಸಿಸಿಐ ತನ್ನ ಹೇಳಿಕೆಯಲ್ಲಿ, ಬಿಸಿಸಿಐ ವೈದ್ಯಕೀಯ ತಂಡ ರವಿಶಾಸ್ತ್ರಿ, ಭರತ್ ಅರುಣ್, ಆರ್. ಶ್ರೀಧರ್ ಮತ್ತು ನಿತಿನ್ ಪಟೇಲ್ ಅವರನ್ನು ಮುನ್ನೆಚ್ಚರಿಕೆಯಾಗಿ ಪ್ರತ್ಯೇಕಿಸಲಾಗಿದೆ. ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ. ಈ ನಾಲ್ವರು ವೈದ್ಯಕೀಯ ತಂಡದ ದೃಢೀಕರಣವಿಲ್ಲದೆ ತಂಡದೊಂದಿಗೆ ಪ್ರಯಾಣಿಸುವಂತಿಲ್ಲ.

ಉಳಿದ ಸದಸ್ಯರನ್ನೂ ಪರೀಕ್ಷಿಸಲಾಗಿದೆ ಉಳಿದ ತಂಡದ ಸದಸ್ಯರ ಫ್ಲೋ ಟೆಸ್ಟ್ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಟೀಮ್ ಇಂಡಿಯಾದ ಉಳಿದ ಸದಸ್ಯರಿಗೆ ಎರಡು ಫ್ಲೋ ಪರೀಕ್ಷೆಗಳನ್ನು ಸಹ ಮಾಡಲಾಯಿತು ಒಂದು ನಿನ್ನೆ ರಾತ್ರಿ ಮತ್ತು ಒಂದು ಬೆಳಿಗ್ಗೆ. ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೈದಾನಕ್ಕೆ ಹೋಗಲು ನೆಗೆಟಿವ್ ಬಂದಿರುವ ಸದಸ್ಯರಿಗೆ ಅನುಮತಿ ನೀಡಲಾಗಿದೆ.

Published On - 3:46 pm, Sun, 5 September 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!