AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ

ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ
ಕೋಚ್ ರವಿಶಾಸ್ತ್ರಿ ಫ್ಲೋ ಟೆಸ್ಟ್ ವರದಿ ಪಾಸಿಟಿವ್
TV9 Web
| Updated By: ಪೃಥ್ವಿಶಂಕರ|

Updated on:Sep 05, 2021 | 3:55 PM

Share

ಭಾರತ ತಂಡ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಓವಲ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದೆ ಮತ್ತು ಇಂದು ಈ ಪಂದ್ಯದ ನಾಲ್ಕನೇ ದಿನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಾರತದ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ತಂಡದ ಸಹಾಯಕ ಸಿಬ್ಬಂದಿಯ ನಾಲ್ವರನ್ನು ಪ್ರತ್ಯೇಕಿಸಲಾಗಿದೆ. ಬಿಸಿಸಿಐ ಈ ಹೇಳಿಕೆಯನ್ನು ನೀಡುವ ಮೂಲಕ ಮಾಹಿತಿಯನ್ನು ಹೊರಹಾಕಿದೆ. ಈ ನಾಲ್ಕು ಜನರಲ್ಲಿ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಸೇರಿದ್ದಾರೆ.

ಬಿಸಿಸಿಐ ತನ್ನ ಹೇಳಿಕೆಯಲ್ಲಿ, ಬಿಸಿಸಿಐ ವೈದ್ಯಕೀಯ ತಂಡ ರವಿಶಾಸ್ತ್ರಿ, ಭರತ್ ಅರುಣ್, ಆರ್. ಶ್ರೀಧರ್ ಮತ್ತು ನಿತಿನ್ ಪಟೇಲ್ ಅವರನ್ನು ಮುನ್ನೆಚ್ಚರಿಕೆಯಾಗಿ ಪ್ರತ್ಯೇಕಿಸಲಾಗಿದೆ. ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ. ಈ ನಾಲ್ವರು ವೈದ್ಯಕೀಯ ತಂಡದ ದೃಢೀಕರಣವಿಲ್ಲದೆ ತಂಡದೊಂದಿಗೆ ಪ್ರಯಾಣಿಸುವಂತಿಲ್ಲ.

ಉಳಿದ ಸದಸ್ಯರನ್ನೂ ಪರೀಕ್ಷಿಸಲಾಗಿದೆ ಉಳಿದ ತಂಡದ ಸದಸ್ಯರ ಫ್ಲೋ ಟೆಸ್ಟ್ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಟೀಮ್ ಇಂಡಿಯಾದ ಉಳಿದ ಸದಸ್ಯರಿಗೆ ಎರಡು ಫ್ಲೋ ಪರೀಕ್ಷೆಗಳನ್ನು ಸಹ ಮಾಡಲಾಯಿತು ಒಂದು ನಿನ್ನೆ ರಾತ್ರಿ ಮತ್ತು ಒಂದು ಬೆಳಿಗ್ಗೆ. ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೈದಾನಕ್ಕೆ ಹೋಗಲು ನೆಗೆಟಿವ್ ಬಂದಿರುವ ಸದಸ್ಯರಿಗೆ ಅನುಮತಿ ನೀಡಲಾಗಿದೆ.

Published On - 3:46 pm, Sun, 5 September 21

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ