AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiramga Anthem: ಹರ್ ಘರ್ ತಿರಂಗಾ ಸ್ಫೂರ್ತಿ ಗೀತೆಯಲ್ಲಿ ಕನ್ನಡ ಕಲರವ; ಮನೆ ಮನೆಗೂ ತ್ರಿವರ್ಣ ಎಂದ ರಾಹುಲ್

Har Ghar Tiramga Anthem: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದಿಕ ಅಮೃತ ಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ವಿಶೇಷ ಅಭಿಯಾನ ನಡೆಸುತ್ತಿದೆ. ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

Har Ghar Tiramga Anthem: ಹರ್ ಘರ್ ತಿರಂಗಾ ಸ್ಫೂರ್ತಿ ಗೀತೆಯಲ್ಲಿ ಕನ್ನಡ ಕಲರವ; ಮನೆ ಮನೆಗೂ ತ್ರಿವರ್ಣ ಎಂದ ರಾಹುಲ್
TV9 Web
| Updated By: ಪೃಥ್ವಿಶಂಕರ|

Updated on:Aug 04, 2022 | 4:32 PM

Share

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Azadi Ka Amrit Mahotsav) ದೇಶಾದ್ಯಂತ ಅದ್ಧೂರಿಯಾಗಿ ಆಚರಿಸಲು ಅದ್ಧೂರಿ ವ್ಯವಸ್ಥೆ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾ (Har Ghar Tiranga) ಎಂಬ ಅಭಿಯಾನದಡಿಯಲ್ಲಿ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವಂತೆ ಪ್ರಧಾನಿ ಮೋದಿ (Prime Minister Modi) ಕರೆ ನೀಡಿರುವುದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಈ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೇಂದ್ರ ಸಂಸ್ಕೃತಿ ಇಲಾಖೆಯು ವಿಸ್ತೃತ ಯೋಜನೆಗಳನ್ನು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗಷ್ಟೇ ಇದಕ್ಕೆ ಸಂಬಂಧಿಸಿದ ಹಾಡೊಂದು ಬಿಡುಗಡೆಯಾಗಿದೆ.

ಹರ್ ಘರ್ ತಿರಂಗಾ ಎಂಬ ಶೀರ್ಷಿಕೆಯ ಈ ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡಿನಲ್ಲಿ ಪ್ರಧಾನಿ ಮೋದಿ ಜೊತೆಗೆ ಸಿನಿಮಾ ನಟರಾದ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಪ್ರಭಾಸ್, ಅಜಯ್ ದೇವಗನ್, ಕೀರ್ತಿ ಸುರೇಶ್, ಅನುಷ್ಕಾ ಶರ್ಮಾ, ಕ್ರೀಡಾಪಟುಗಳಾದ ಕಪಿಲ್ ದೇವ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾರ್ದಿಕ್ ಪಾಂಡ್ಯ, ಪಿವಿ ಸಿಂಧು, ಇನ್ನೂ ಅನೇಕರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆಯಂತೆ. ಭಾರತದ ಎಲ್ಲಾ ಭಾಗಗಳನ್ನು ಒಂದುಗೂಡಿಸಲು ಈ ಹಾಡನ್ನು ರಚಿಸಲಾಗಿದೆ.

ಇದನ್ನೂ ಓದಿ
Image
‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಯಶ್ ಸಾಥ್​; ಫ್ಯಾನ್ಸ್ ಬಳಿ ರಾಕಿಂಗ್ ಸ್ಟಾರ್ ಹೊಸ ಕೋರಿಕೆ
Image
ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ‍್ಯಾಲಿಯಲ್ಲಿ ಭಾಗಿಯಾದ ಕೇಂದ್ರ ಸಚಿವ ಜೋಶಿ
Image
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

ಹರ್ ಘರ್ ತಿರಂಗಾ ಹಾಡಿನಲ್ಲಿ ಕನ್ನಡ ಕಲರವ

ಕೇಂದ್ರ ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿರುವ ಈ ಹಾಡಿನಲ್ಲಿ ಕೆಲವು ಖ್ಯಾತ ಕ್ರಿಕೆಟಿಗರು ತಮ್ಮ ಮಾತೃಭಾಷೆಯಲ್ಲಿ ಬರುವ ಸಾಲುಗಳಿಗೆ ಧನಿಗೂಡಿಸಿದ್ದಾರೆ. ಅವರಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕೂಡ ಸೇರಿದ್ದು, ಕನ್ನಡದಲ್ಲಿ ಬರುವ ಮನೆ ಮನೆಗೂ ತಿರಂಗ ಎಂಬ ಸಾಲುಗಳಿಗೆ ಧನಿಗೂಡಿಸುವದರೊಂದಿಗೆ ನಟಿಸಿ ಜೀವತುಂಬಿದ್ದಾರೆ.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದಿಕ ಅಮೃತ ಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ವಿಶೇಷ ಅಭಿಯಾನ ನಡೆಸುತ್ತಿದೆ. ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಕೇಂದ್ರ ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಹಿರಿಯ ನಟ ಅಮಿತಾಬ್ ಬಚ್ಚನ್ ಧ್ವನಿ ನೀಡಿದ್ದಾರೆ ಮತ್ತು ಅನುಷ್ಕಾ ಶರ್ಮಾ, ಅವರ ಪತಿ ವಿರಾಟ್ ಕೊಹ್ಲಿ, ದಕ್ಷಿಣದ ಸ್ಟಾರ್ ಪ್ರಬಾಸ್ ಕೂಡ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೀತೆಯ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ದಕ್ಷಿಣ ಭಾರತದ ಏಕೈಕ ಪುರುಷ ನಟ ಪ್ರಭಾಸ್. ವೀಡಿಯೊದ ಕೊನೆಯಲ್ಲಿ, ಪ್ರಧಾನಿ ಮೋದಿ ತಮ್ಮ ವರ್ಚಸ್ವಿ ವ್ಯಕ್ತಿತ್ವದಿಂದ ಅದನ್ನು ಅಲಂಕರಿಸಿದ್ದಾರೆ.

‘ಹರ್ ಘರ್ ತಿರಂಗಾ’ ಎಂಬುದು ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ತಿರಂಗವನ್ನು ಮನೆಗೆ ತರಲು ಮತ್ತು ಭಾರತದ 75 ನೇ ಸ್ವಾತಂತ್ರ್ಯದ ವರ್ಷವನ್ನು ಸ್ಮರಣೀಯವಾಗಿಸುವಂತೆ ಜನರನ್ನು ಪ್ರೋತ್ಸಾಹಿಸಲು ಒಂದು ಅಭಿಯಾನವಾಗಿದೆ. ಆಗಸ್ಟ್ 2 ರಿಂದ ಆಗಸ್ಟ್ 15 ರ ನಡುವೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಮತ್ತು ನಮ್ಮ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರು ತಮ್ಮ ತಮ್ಮ ವೈಯಕ್ತಿಕ ಸೋಶಿಯಲ್ ಮೀಡಿಯಾ ಡಿಪಿಯಲ್ಲಿ ಹಾಕುವ ಮೂಲಕ ‘ಹರ್ ಘರ್ ತಿರಂಗ’ ಅಭಿಯಾನವನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸುವಂತೆ ಪಿಎಂ ಮೋದಿ ಭಾನುವಾರ ಎಲ್ಲಾ ನಾಗರಿಕರಿಗೆ ಕರೆ ನೀಡಿದ್ದರು.

Published On - 4:32 pm, Thu, 4 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ