AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: 8 ಚೀತಾಗಳು ಬಂದ ದೇಶದೆದುರು ವಿಶ್ವಕಪ್ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ

T20 World Cup: ಇದುವರೆಗೆ ಟೀಂ ಇಂಡಿಯಾ, ನಮೀಬಿಯಾ ವಿರುದ್ಧ ಕೇವಲ ಎರಡು ಕ್ರಿಕೆಟ್ ಪಂದ್ಯಗಳನ್ನು ಆಡಿದೆ. ಇದರಿಂದಾಗಿ ಮುಂಬರುವ ವಿಶ್ವಕಪ್ ಪಂದ್ಯದಲ್ಲಿ ಉಭಯ ದೇಶಗಳು ಕಣಕ್ಕಿಳಿಯುವ ಸಾಧ್ಯತೆ ಇದೆ.

T20 World Cup: 8 ಚೀತಾಗಳು ಬಂದ ದೇಶದೆದುರು ವಿಶ್ವಕಪ್ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ
Namibia cheetah, Team India
TV9 Web
| Updated By: ಪೃಥ್ವಿಶಂಕರ|

Updated on:Sep 18, 2022 | 3:36 PM

Share

ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಜನ್ಮದಿನ. ಕುತೂಹಲಕಾರಿಯಾಗಿ, ಇಂದು ಅವರ ಜನ್ಮದಿನದಂದು, ಆಫ್ರಿಕಾದ ನಮೀಬಿಯಾ ದೇಶದಿಂದ 4 ರಿಂದ 6 ವರ್ಷ ವಯಸ್ಸಿನ 5 ಹೆಣ್ಣು ಮತ್ತು 3 ಗಂಡು ಒಟ್ಟು ಎಂಟು ಚೀತಾಗಳನ್ನು ಭಾರತಕ್ಕೆ ವಿಶೇಷ ವಿಮಾನದ ಮೂಲಕ ಕರೆತರಲಾಗಿದೆ. ಭಾರತಕ್ಕೆ ತರಲಾದ ಎಲ್ಲಾ ಚೀತಾಗಳನ್ನು ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿದೆ. ಚೀತಾವನ್ನು ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ವಿಮಾನದ ಮೂಲಕ ಸಾಗಿಸಿರುವುದು ವಿಶ್ವದಲ್ಲೇ ಇದು ಮೊದಲ ಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ. ಅಳಿವಿನಂಚಿನಲ್ಲಿರುವ ಚಿರತೆಗಳಿಗೆ ಪುನರ್ವಸತಿ ಕಲ್ಪಿಸಿದ್ದಕ್ಕಾಗಿ ಮೋದಿ ಅವರನ್ನು ವ್ಯಾಪಕವಾಗಿ ಪ್ರಶಂಸಿಸಲಾಗಿದೆ.

ಭಾರತದಲ್ಲಿ ನಶಿಸಿ ಹೊಗಿದ್ದ ಚೀತಾಗಳನ್ನು ಭಾರತಕ್ಕೆ ತರಲು ಹೊರಟಿದ್ದಾರೆ ಎಂಬ ಚರ್ಚೆ ಕಳೆದ ಹಲವು ದಿನಗಳಿಂದ ನಡೆಯುತ್ತಿತ್ತು. ನಂತರ ಆಫ್ರಿಕನ್ ಚೀತಾಗಳನ್ನು ಭಾರತಕ್ಕೆ ತರಲು ಯೋಜನೆಯನ್ನು ರೂಪಿಸಲಾಯಿತು. ಬಳಿಕ ನಮೀಬಿಯಾದೊಂದಿಗಿನ ಒಪ್ಪಂದದ ನಂತರ 8 ಚೀತಾಗಳನ್ನು ದೇಶಕ್ಕೆ ತರಲಾಗಿದೆ. ಈಗ ಈ ಎಂಟು ಚೀತಾಗಳು ಬಂದ ದೇಶದೆದುರು ಟೀಂ ಇಂಡಿಯಾ ಇದೇ ಟಿ20 ವಿಶ್ವಕಪ್​ನಲ್ಲಿ ಕ್ರಿಕೆಟ್​ ಪಂದ್ಯವನ್ನಾಡಲಿದೆ.

ಇದುವರೆಗೆ ಟೀಂ ಇಂಡಿಯಾ, ನಮೀಬಿಯಾ ವಿರುದ್ಧ ಕೇವಲ ಎರಡು ಕ್ರಿಕೆಟ್ ಪಂದ್ಯಗಳನ್ನು ಆಡಿದೆ. ಇದರಿಂದಾಗಿ ಮುಂಬರುವ ವಿಶ್ವಕಪ್ ಪಂದ್ಯದಲ್ಲಿ ಉಭಯ ದೇಶಗಳು ಕಣಕ್ಕಿಳಿಯುವ ಸಾಧ್ಯತೆ ಇದೆ. ಅಕ್ಟೋಬರ್ 27ರಂದು ಉಭಯ ತಂಡಗಳ ನಡುವಿನ ಪಂದ್ಯ ನಡೆಯುವ ಸಾಧ್ಯತೆ ಇದ್ದು, ಎರಡೂ ತಂಡಗಳು ಟಿ20 ವಿಶ್ವಕಪ್‌ಗೆ ಆಟಗಾರರ ಹೆಸರನ್ನು ಪ್ರಕಟಿಸಿವೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು – ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.

ಟಿ20 ವಿಶ್ವಕಪ್‌ಗೆ ನಮೀಬಿಯಾ ತಂಡ

ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೆಜೆ ಸ್ಮಿತ್, ದಿವಾನ್ ಲಾ ಕಾಕ್, ಸ್ಟೀಫನ್ ಬಾರ್ಡ್, ನಿಕೋಲ್ ಲಾಫ್ಟಿ ಈಟನ್, ಜಾನ್ ಫ್ರೈಲಿಂಕ್, ಡೇವಿಡ್ ವಿಜ್ಕ್, ರೂಬೆನ್ ಟ್ರಂಪೆಲ್‌ಮನ್, ಜೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಜ್, ಟ್ಯಾಂಗನಿ ಲುಂಗ್‌ಮೆನಿ, ಮೈಕೆಲ್ ವ್ಯಾನ್ ಲಿಂಗೆನ್, ಬೆನ್ ಶಿಕೊಂಗೊ, ಕಾರ್ಲ್ ಲಾ ಬಿರ್ಕೆನ್‌ಸ್ಟೋವ್ ಮತ್ತು ಹಲೋ ಫ್ರಾನ್ಸ್.

Published On - 6:03 pm, Sat, 17 September 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್