AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 284 ರನ್​ಗಳಿಗೆ ಶ್ರೀಲಂಕಾ ಆಲೌಟ್; ಭಾರತಕ್ಕೆ 178 ರನ್ ಮುನ್ನಡೆ

India vs Sri Lanka Test: ಗಾಲೆ ಟೆಸ್ಟ್‌ನಲ್ಲಿ ಭಾರತವು ಶ್ರೀಲಂಕಾ ವಿರುದ್ಧ 178 ರನ್‌ಗಳ ಅಮೂಲ್ಯ ಮುನ್ನಡೆ ಗಳಿಸಿದೆ. ಮಾನವ್ ಸುತಾರ್ ಮತ್ತು ರವೀಂದ್ರ ಜಡೇಜಾ ಅವರ ಮಾರಕ ಬೌಲಿಂಗ್ ಹೊರತಾಗಿಯೂ, ಸೋನಾಲ್ ದಿನುಷಾ ಅವರ ಚೊಚ್ಚಲ ಶತಕ ಮತ್ತು ನಿರೋಷನ್ ಡಿಕ್ವೆಲ್ಲಾ ಅವರ ಆಕರ್ಷಕ ಆಟದಿಂದ ಶ್ರೀಲಂಕಾ ಫಾಲೋ ಆನ್‌ನಿಂದ ಪಾರಾಗಿದೆ. ಈ ಮೂಲಕ ಉಭಯ ತಂಡಗಳ ನಡುವೆ ರೋಚಕ ಪೈಪೋಟಿ ಏರ್ಪಟ್ಟಿದೆ.

IND vs SL: 284 ರನ್​ಗಳಿಗೆ ಶ್ರೀಲಂಕಾ ಆಲೌಟ್; ಭಾರತಕ್ಕೆ 178 ರನ್ ಮುನ್ನಡೆ
Team India
ಪೃಥ್ವಿಶಂಕರ
|

Updated on:Aug 17, 2026 | 5:38 PM

Share

ಗಾಲೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ತಮ್ಮ ತಮ್ಮ ಮೊದಲ ಇನ್ನಿಂಗ್ಸ್ ಆಡಿ ಮುಗಿಸಿವೆ. ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 462 ರನ್ ಕಲೆಹಾಕಿದರೆ, ಆತಿಥೇಯ ಶ್ರೀಲಂಕಾ 284 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 178 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಶ್ರೀಲಂಕಾ ಪರ ಯುವ ಬ್ಯಾಟರ್ ಸೋನಾಲ್ ದಿನುಷಾ (Sonal Dinusha) ಚೊಚ್ಚಲ ಟೆಸ್ಟ್ ಶತಕ ಬಾರಿಸಿದರೆ, ನಿರೋಷನ್ ಡಿಕ್ವೆಲ್ಲಾ 80 ರನ್​ಗಳ ಇನ್ನಿಂಗ್ಸ್ ಆಡಿದರು. ಇವರಿಬ್ಬರ ಆಟದಿಂದ ಶ್ರೀಲಂಕಾ ತಂಡ ಫಾಲೋ ಆನ್​ನಿಂದ ಪಾರಾಯಿತು. ಇತ್ತ ಟೀಂ ಇಂಡಿಯಾ ಪರ ಮಾನವ್ ಸುತಾರ್ 4 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು. ಉಳಿದಂತೆ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

ಶ್ರೀಲಂಕಾಕ್ಕೆ ಕಳಪೆ ಆರಂಭ

ಶ್ರೀಲಂಕಾಕ್ಕೆ ಉತ್ತಮ ಆರಂಭವಾಗಲಿಲ್ಲ. ತಂಡದ ಅಗ್ರ ಐದು ಬ್ಯಾಟ್ಸ್‌ಮನ್‌ಗಳು ಬೇಗನೆ ಔಟಾದರು. ಹೀಗಾಗಿ 90 ರನ್‌ಗಳಿಗೆ 5 ವಿಕೆಟ್‌ಗಳು ಬಿದ್ದಿದ್ದರಿಂದ ತಂಡಕ್ಕೆ ಒತ್ತಡ ಹೆಚ್ಚಿತ್ತು. ಆದರೆ ಸೋನಲ್ ದಿನುಷಾ ಮತ್ತು ನಿರೋಷನ್ ಡಿಕ್ವೆಲ್ಲಾ ಆರನೇ ವಿಕೆಟ್‌ಗೆ 146 ರನ್‌ಗಳ ನಿರ್ಣಾಯಕ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರ ಜೊತೆಯಾಟಕ್ಕೆ ಕೆಎಲ್ ರಾಹುಲ್ ಬಿಟ್ಟ ಕ್ಯಾಚ್ ಕೂಡ ಕಾರಣವಾಯಿತು. ನಿರೋಷನ್ ಅವರ ಕ್ಯಾಚ್ ಅನ್ನು ರಾಹುಲ್ ಕೈಬಿಟ್ಟರು. ಇದರ ಲಾಭ ಪಡೆದ ನಿರೋಷನ್ ಡಿಕ್ವೆಲ್ಲಾ 115 ಎಸೆತಗಳಲ್ಲಿ 80 ರನ್​ಗಳ ಇನ್ನಿಂಗ್ಸ್ ಆಡಿದರು.

ಸೋನಲ್ ದಿನುಷಾ ಶತಕ

ಇತ್ತ ಸೋನಲ್ ದಿನುಷಾ 168 ಎಸೆತಗಳನ್ನು ಎದುರಿಸಿ ಚೊಚ್ಚಲ ಟೆಸ್ಟ್ ಶತಕವನ್ನು ಪೂರೈಸಿದರು. ಈ ಇಬ್ಬರನ್ನು ಹೊರತುಪಡಿಸಿ, ತಂಡದ ಯಾವುದೇ ಬ್ಯಾಟ್ಸ್‌ಮನ್​ಗೆ ದೊಡ್ಡ ಸ್ಕೋರ್ ಗಳಿಸಲು ಸಾಧ್ಯವಾಗಲಿಲ್ಲ. ಈ ಇಬ್ಬರ ನಡುವಿನ ಪಾಲುದಾರಿಕೆ ಇಲ್ಲದಿದ್ದರೆ, ಶ್ರೀಲಂಕಾಕ್ಕೆ ಫಾಲೋ-ಆನ್ ನೀಡಬಹುದಿತ್ತು. ಇದರಿಂದ ಭಾರತದ ಗೆಲುವಿನ ಭರವಸೆ ಇನ್ನಷ್ಟು ಹೆಚ್ಚಾಗುತ್ತಿತ್ತು. ಆದರೆ ತಂಡದ ಕೆಲವು ತಪ್ಪುಗಳು ಸಾಕಷ್ಟು ದುಬಾರಿಯಾಯಿತು.

IND vs SL: 3ನೇ ದಿನದಾಟದ 2ನೇ ಸೆಷನ್ ಶ್ರೀಲಂಕಾ ಪಾಲು

ಸ್ಪಿನ್ನರ್​ಗಳ ಕೈಚೆಳಕ

ಭಾರತ ಪರ ಸ್ಪಿನ್ನರ್ ಮಾನವ್ ಸುತಾರ್ ಅದ್ಭುತ ಪ್ರದರ್ಶನ ನೀಡಿ 21.4 ಓವರ್ ಬೌಲಿಂಗ್ ಮಾಡಿ 76 ರನ್​ಗೆ 4 ವಿಕೆಟ್ ಪಡೆದರು. ರವೀಂದ್ರ ಜಡೇಜಾ 21 ಓವರ್​ಗಳಲ್ಲಿ 3 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಕುಲ್ದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು. ಏತನ್ಮಧ್ಯೆ, ಮಳೆ ಮತ್ತೆ ಆಟವನ್ನು ಸ್ಥಗಿತಗೊಳಿಸಿದೆ. ಮೂರನೇ ದಿನದ ಆಟ ಮುಗಿದಿದೆ ಎಂದು ಘೋಷಿಸಲಾಗಿದ್ದು, ಉಳಿದ ಎರಡು ದಿನಗಳು ನಿರ್ಣಾಯಕವಾಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Mon, 17 August 26

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್