AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಗಾಲೆ ಟೆಸ್ಟ್ 2ನೇ ದಿನದಾಟದ ಸಮಯ ಬದಲಾವಣೆ

India vs Sri Lanka Test: ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್‌ನ ಮೊದಲ ದಿನದಂದು ಮಳೆಯಿಂದಾಗಿ 73 ಓವರ್‌ಗಳ ಆಟ ಮಾತ್ರ ನಡೆಯಿತು. ಆದರೂ ಭಾರತ ಎರಡು ವಿಕೆಟ್‌ಗೆ 288 ರನ್ ಗಳಿಸಿ ಮೇಲುಗೈ ಸಾಧಿಸಿತು. ದೇವದತ್ ಪಡಿಕ್ಕಲ್ ಅಜೇಯ 131 ರನ್ ಗಳಿಸಿದರೆ, ಕೆಎಲ್ ರಾಹುಲ್ 77 ರನ್ ಗಳಿಸಿ ನಿವೃತ್ತರಾದರು. ಕಳೆದುಹೋದ ಓವರ್‌ಗಳನ್ನು ಸರಿದೂಗಿಸಲು ಎರಡನೇ ದಿನದ ಆಟ 9:45ಕ್ಕೆ ಆರಂಭವಾಗಿ 98 ಓವರ್‌ಗಳಿಗೆ ವಿಸ್ತರಿಸಲಾಗಿದೆ.

IND vs SL: ಗಾಲೆ ಟೆಸ್ಟ್ 2ನೇ ದಿನದಾಟದ ಸಮಯ ಬದಲಾವಣೆ
Team India
ಪೃಥ್ವಿಶಂಕರ
|

Updated on: Aug 15, 2026 | 10:44 PM

Share

ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಸಂಪೂರ್ಣವಾಗಿ ಭಾರತ ತಂಡದ ಪರವಾಗಿತ್ತು. ಭಾರತೀಯ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹಾಕಿದರು. ಇದರ ಫಲವಾಗಿ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 2 ವಿಕೆಟ್‌ಗಳನ್ನು ಕಳೆದುಕೊಂಡು 288 ರನ್ ಕಲೆಹಾಕಿ ಪಂದ್ಯದಲ್ಲಿ ಭಿಗಿ ಹಿಡಿತ ಸಾಧಿಸಿದೆ. ಆದಾಗ್ಯೂ, ಮಧ್ಯಂತರ ಮಳೆಯಿಂದಾಗಿ ಆಟಕ್ಕೆ ಹಲವಾರು ಬಾರಿ ಅಡ್ಡಿಯುಂಟಾಯಿತು. ಇದರ ಪರಿಣಾಮವಾಗಿ ಮೊದಲ ದಿನ ಪೂರ್ಣ 90 ಓವರ್​ಗಳನ್ನು ಬೌಲ್ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ದಿನದಾಟವನ್ನು ನಿಗದಿತ ಸಮಯಕ್ಕೂ ಮುಂಚಿತವಾಗಿ ಆರಂಭಿಸಲು ನಿರ್ಧರಿಸಲಾಗಿದೆ.

ಮೊದಲ ದಿನ 73 ಓವರ್​ಗಳ ಆಟ

ಮೊದಲ ದಿನದಂದು ಗಾಲೆಯಲ್ಲಿ ಹವಾಮಾನವು ಆಗಾಗ್ಗೆ ಬದಲಾಗುತ್ತಿತ್ತು. ಎರಡನೇ ಸೆಷನ್ ಆರಂಭಕ್ಕೂ ಮುನ್ನ ಮಳೆಯಿಂದಾಗಿ ಆಟಗಾರರು ಮತ್ತು ಅಭಿಮಾನಿಗಳು ಬಹಳ ಸಮಯ ಕಾಯಬೇಕಾಯಿತು. ಆದಾದ ನಂತರೂ ಮಳೆಯಿಂದಾಗಿ ಕೊನೆಯ ಸೆಷನ್​ಗೂ ಅಡ್ಡಿಯುಂಟಾಯಿತು. ಇದರ ಪರಿಣಾಮವಾಗಿ ಪೂರ್ಣ 90 ಓವರ್‌ಗಳ ಆಟ ನಡೆಯಲಿಲ್ಲ. ಬದಲಿಗೆ ಮೊದಲ ದಿನ 73 ಓವರ್​ಗಳ ಆಟ ನಡೆಯಿತು. ಹೀಗಾಗಿ ಬಾಕಿ ಉಳಿದಿರುವ 17 ಓವರ್​ಗಳನ್ನು ಎರಡನೇ ದಿನದಂದು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಅದರಂತೆ ಪಂದ್ಯದ ಅಧಿಕಾರಿಗಳು ಎರಡನೇ ದಿನದ ವೇಳಾಪಟ್ಟಿಯನ್ನು ಮರು ನಿಗದಿಪಡಿಸುವ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಮೊದಲ ದಿನದ ಆಟ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಿತ್ತು. ಆದರೆ, ಎರಡನೇ ದಿನದ ಆಟ ಬೆಳಿಗ್ಗೆ 9:45 ಕ್ಕೆ ಆರಂಭವಾಗಲಿದೆ. ಹೆಚ್ಚುವರಿಯಾಗಿ, ಓವರ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಮೊದಲ ದಿನದ ನಷ್ಟವನ್ನು ಸರಿದೂಗಿಸಲು ಎರಡನೇ ದಿನಕ್ಕೆ ಒಟ್ಟು 98 ಓವರ್‌ಗಳನ್ನು ಯೋಜಿಸಲಾಗಿದೆ. ಎರಡನೇ ದಿನದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಮೂರನೇ ದಿನದ ಆಟ ಕೂಡ ಬೇಗನೇ ಆರಂಭವಾಗಬಹುದು.

IND vs SL: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ರನೌಟ್​ಗೆ ಬಲಿಯಾದ ಜೈಸ್ವಾಲ್

ಮೊದಲ ದಿನ ಭಾರತದ ಮೇಲುಗೈ

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಂದು ಭಾರತ ಎರಡು ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿದೆ. ತಂಡದ ಪರ ದೇವದತ್ ಪಡಿಕ್ಕಲ್ ಅದ್ಭುತ ಇನ್ನಿಂಗ್ಸ್ ಆಡಿ 131 ರನ್ ಗಳಿಸಿ ಅಜೇಯರಾಗಿ ಉಳಿದರೆ, ಕೆಎಲ್ ರಾಹುಲ್ ಕೂಡ 77 ರನ್ ಗಳಿಸಿ ಗಾಯದಿಂದಾಗಿ ಆಟದಿಂದ ನಿವೃತ್ತರಾಗಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್ 32 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರೆ, ರಿಷಭ್ ಪಂತ್ 27 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಇದೀಗ ಟೀಂ ಇಂಡಿಯಾ ಪಂದ್ಯದ ಎರಡನೇ ದಿನದಂದು ದೊಡ್ಡ ಮೊತ್ತವನ್ನು ಕಲೆಹಾಕುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?