AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್​ ಸಿಕ್ಸ್​ಗೆ ಬೆರಗಾದ ಗೌತಮ್ ಗಂಭೀರ್!

India vs Afghanistan, 1st ODI: ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡ 194 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಕೆಎಲ್ ರಾಹುಲ್​ ಸಿಕ್ಸ್​ಗೆ ಬೆರಗಾದ ಗೌತಮ್ ಗಂಭೀರ್!
Gautam Gambhir - Kl RahulImage Credit source: JioHotstar
ಝಾಹಿರ್ ಯೂಸುಫ್
|

Updated on: Jun 14, 2026 | 7:57 AM

Share

ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.  ಈ ಸ್ಫೋಟಕ ಬ್ಯಾಟಿಂಗ್​ ನಡುವೆ ಕೆಲವು ಕ್ಲಾಸ್ ಶಾಟ್​ಗಳಿಂದ ಗಮನ ಸೆಳೆದಿದ್ದರು. ಈ ವೇಳೆ ಡಗೌಟ್‌ನಲ್ಲಿ ಕುಳಿತಿದ್ದ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ರಿಯಾಕ್ಷನ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಗಂಭೀರ್ ರಿಯಾಕ್ಷನ್!

21ನೇ ಓವರ್​ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 161 ರನ್​ ಕಲೆಹಾಕಿತ್ತು. ಅದರಂತೆ ಕೊನೆಯ 4 ಓವರ್​ಗಳಲ್ಲಿ ಭಾರತ ತಂಡಕ್ಕೆ 33 ರನ್​ಗಳ ಅವಶ್ಯಕತೆಯಿತ್ತು. 22ನೇ ಓವರ್​ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾ ಉರ್ ರೆಹಮಾನ್ ಶರೀಫಿ ಎಸೆದ ಫುಲ್ ಲೆಂಗ್ತ್ ಎಸೆತವನ್ನು ಕೆಎಲ್ ರಾಹುಲ್ ಅತ್ಯಂತ ನಯವಾಗಿ, ಬ್ಯಾಟ್ ಫೇಸ್ ಓಪನ್ ಮಾಡಿ ಕವರ್ಸ್ ಮೇಲಿಂದ ಭರ್ಜರಿಯಾಗಿ ಸಿಕ್ಸರ್​​ಗಟ್ಟಿದರು.

ಸಾಮಾನ್ಯವಾಗಿ ಗಂಭೀರ ಮುಖಭಾವಕ್ಕೇ ಹೆಸರಾದ ಗೌತಮ್ ಗಂಭೀರ್, ಈ ಶಾಟ್ ನೋಡಿದ ತಕ್ಷಣ ಒಂದು ಕ್ಷಣ ಆಶ್ಚರ್ಯಚಕಿತರಾದರು. ತಕ್ಷಣವೇ ಪಕ್ಕದಲ್ಲೇ ಕುಳಿತಿದ್ದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಕಡೆಗೆ ತಿರುಗಿ ಅಚ್ಚರಿಯ ನೋಟವನ್ನು ವಿನಿಮಯ ಮಾಡಿಕೊಂಡರು. ಗಂಭೀರ್ ಅವರ ಈ ಅಪರೂಪದ ಹಾವಭಾವದ ತುಣುಕು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಂದ್ಯದ ಮುಖ್ಯಾಂಶಗಳು:

  • ಕೆಎಲ್ ಕಮಾಲ್: 5ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಾಹುಲ್ ಕೇವಲ 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಬ್ಬರದ 39 ರನ್* ಸಿಡಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.
  • ಗಿಲ್ ಮೈಲಿಗಲ್ಲು: ನಾಯಕ ಶುಭ್​ಮನ್ ಗಿಲ್ 84* ರನ್ ಗಳಿಸಿ ಅಜೇಯರಾಗಿ ಉಳಿದಿದ್ದಲ್ಲದೆ, ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ (62 ಇನಿಂಗ್ಸ್) 3,000 ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು.
  • ಅಫ್ಘಾನ್ ಹೋರಾಟ: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ, ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಅವರ ಆಕರ್ಷಕ ಶತಕದ (102 ರನ್) ನೆರವಿನೊಂದಿಗೆ 194 ರನ್‌ಗಳಿಸಲು ಶಕ್ತರಾಗಿದ್ದರು.
  • ಟೀಮ್ ಇಂಡಿಯಾಗೆ ಜಯ: ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ 22.5 ಓವರ್​ಗಳಲ್ಲಿ 195 ರನ್​ ಬಾರಿಸಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: Shubman Gill: ಪರವಾಗಿಲ್ಲ, ತಪ್ಪು ನನ್ನದೇ ಅಂದಿದ್ದಾರೆ..!

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇನ್ನು ಉಭಯ ತಂಡಗಳ ಎರಡನೇ ಮುಖಾಮುಖಿ ಜುಲೈ 17 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಲಕ್ನೋನ ಏಕಾನ ಸ್ಟೇಡಿಯಂ ಆತಿಥ್ಯವಹಿಸಲಿದೆ.

Follow Us
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ