AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶುರುವಾಗಿದೆ ಎಂಎಸ್​ ಧೋನಿ ಕ್ರಿಕೆಟ್ ಅಕಾಡೆಮಿ

ಬೆಂಗಳೂರಿನಲ್ಲಿ ಯುವ ಕ್ರಿಕೆಟಿಗರಿಗೆ ಬಹಳ ಸಂಭ್ರಮದ ದಿನವಿದು. ಈಗ, ಶ್ರೇಷ್ಠ ಕ್ರಿಕೆಟಿಗ, ಮಹೇಂದ್ರ ಸಿಂಗ್ ಧೋನಿಯ ಮಾರ್ಗದರ್ಶನದ ಜೊತೆಗೆ ಅತ್ಯುತ್ತಮ ತರಬೇತುದಾರರಿಂದ ಕ್ರಿಕೆಟ್ ಕಲಿಯಬಹುದು.

ಬೆಂಗಳೂರಿನಲ್ಲಿ ಶುರುವಾಗಿದೆ ಎಂಎಸ್​ ಧೋನಿ ಕ್ರಿಕೆಟ್ ಅಕಾಡೆಮಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 12, 2021 | 7:15 PM

Share

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಂಎಸ್​ಡಿ ಕ್ರಿಕೆಟ್ ಅಕಾಡೆಮಿ ಬೆಂಗಳೂರಿನಲ್ಲಿ ಶುರುವಾಗಿದೆ. ಗೇಮ್‌ಪ್ಲೇ ಮತ್ತು ಆರ್ಕಾ ಸ್ಪೋರ್ಟ್ಸ್, ಎಂ.ಎಸ್. ಧೋನಿ ಕ್ರಿಕೆಟ್ ಅಕಾಡೆಮಿ (MSDCA) ಸಹಯೋಗದಲ್ಲಿ ಈ ಅಕಾಡೆಮಿ ಕಾರ್ಯ ನಿರ್ವಹಿಸಲಿದ್ದು, ಅತ್ಯಾಧುನಿಕ ಮೂಲಸೌಕರ್ಯ ಮತ್ತು ವಿಶ್ವ ದರ್ಜೆಯ ತರಬೇತಿ ಸೌಲಭ್ಯಗಳು ಇಲ್ಲಿರಲಿದೆ. ಇನ್ನು ಎಂ ಎಸ್ ಡಿ ಸಿ ಎ (MSDCA)ಯಲ್ಲಿ ತರಬೇತಿ ಪಡೆಯುವವರಿಗೆ ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕಮಹೇಂದ್ರ ಸಿಂಗ್ ಧೋನಿ ಮಾರ್ಗದರ್ಶನ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಧೋನಿ “ಬೆಂಗಳೂರಿನಲ್ಲಿ MSDCA ಪ್ರಾರಂಭಿಸಲು ತುಂಬಾ ಉತ್ಸುಕನಾಗಿದ್ದೇನೆ. ಧೋನಿ ಕ್ರಿಕೆಟ್ ಅಕಾಡೆಮಿ ನಿಮ್ಮ ಕೌಶಲ್ಯಗಳನ್ನು ಚುರುಕುಗೊಳಿಸಲು ಉತ್ತಮ ತಂತ್ರಗಳು ಮತ್ತು ತಂತ್ರಜ್ಞಾನದ ಸಹಾಯದಿಂದ 360 ಡಿಗ್ರಿ ತರಬೇತಿ ವಿಧಾನವನ್ನು ಒದಗಿಸುವುದು ಅಕಾಡೆಮಿಯ ಗುರಿಯಾಗಿದೆ. ನಾವು ಅರ್ಹ ತರಬೇತುದಾರರು ಮತ್ತು ಫಿಟ್ನೆಸ್ ತಜ್ಞರನ್ನು ಕರೆತರುತ್ತೇವೆ. ಈಗಲೇ ನೋಂದಾಯಿಸಿ ಮತ್ತು ನನ್ನ ಅಕಾಡೆಮಿಯ ಭಾಗವಾಗಲು ಸಿದ್ಧರಾಗಿ. ಇದು ಕೇವಲ ಕ್ರಿಕೆಟರ್ ಆಗಲು ಅಷ್ಟೇ ಅಲ್ಲ. ಮಾನಸಿಕ ಮತ್ತು ದೈಹಿಕ ಕೌಶಲ್ಯಗಳನ್ನು ಕಲಿಯಲು ಧೋನಿ ಕ್ರಿಕೆಟ್ ಅಕಾಡೆಮಿಯಲ್ಲಿ ನಮ್ಮೊಂದಿಗೆ ಸೇರಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

“ನನ್ನ ಒಂದೇ ಒಂದು ಸಲಹೆ ಎಂದರೆ, ಫಲಿತಾಂಶಕ್ಕಿಂತ ಹೆಚ್ಚು ಪ್ರಕ್ರಿಯೆ ಮುಖ್ಯವಾದುದು. ಫಲಿತಾಂಶವು ನಮ್ಮ ಪ್ರಕ್ರಿಯೆಯ ಫಲ ಅಷ್ಟೇ. ಆದರೆ, ಇಂದಿನ ಜಗತ್ತಿನಲ್ಲಿ ನಾವು ಪ್ರಕ್ರಿಯೆಗಿಂತ ಹೆಚ್ಚಾಗಿ ಫಲಿತಾಂಶದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಆದ್ದರಿಂದ, ಪ್ರಕ್ರಿಯೆಯ ಮೇಲೆ ಗಮನ ಕೊಡಿ. ಎಲ್ಲಾ ಸಣ್ಣ ವಿಷಯಗಳನ್ನು ನೋಡಿಕೊಳ್ಳಿ ಮತ್ತು ಇದರಿಂದ ಅಂತಿಮವಾಗಿ ನೀವು ಬಯಸಿದ ಫಲಿತಾಂಶವನ್ನು ಪಡೆಯುತ್ತೀರಿ. ನಾವು ಇನ್ನೂ ಹೆಚ್ಚಿನದನ್ನು ಪಡೆಯಬೇಕಾಗಿತ್ತು ಎಂದು ದೂರುತ್ತಲೇ ಇರುತ್ತೇವೆ. ಆದರೆ ವಾಸ್ತವವಾಗಿ, ನಾವು ಏನು ಮಾಡಿದ್ದೇವೆ ಎಂಬುದರ ಫಲವೇ ನಮಗೆ ಸಿಗುವ ಫಲಿತಾಂಶವಾಗಿರುತ್ತದೆ. ಆದ್ದರಿಂದ, ನಾವು ಚೆನ್ನಾಗಿ ತಯಾರಾದರೆ, ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು. ನಾವು ನಮಗೇ ಪ್ರಾಮಾಣಿಕರಾಗಿದ್ದರೆ, ನಾವು ಬಯಸಿದ ಫಲಿತಾಂಶವನ್ನು ಪಡೆಯುತ್ತೇವೆ. ಒಂದು ವೇಳೆ ಅಲ್ಲಿ ಯಾವುದೇ ನ್ಯೂನತೆಯಿದ್ದರೆ, ಅದು ನಮ್ಮ ಮುಂದಿನ ಕಲಿಕೆಯಾಗಿರುತ್ತದೆ ಎಂದು ಎಂ.ಎಸ್. ಧೋನಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೇಮ್‌ಪ್ಲೇ ಮಾಲೀಕರಾದ ಶ್ರೀ ದೀಪಕ್ ಎಸ್. ಭಟ್ನಾಗರ್, “ಗೇಮ್‌ಪ್ಲೇ ಗೆ ಮಾತ್ರವಲ್ಲದೆ ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಎಲ್ಲಾ ಕ್ರಿಕೆಟಿಗರಿಗೂ ಇಂದು ಮಹತ್ವದ ದಿನವಾಗಿದೆ. ಬೆಂಗಳೂರಿನಲ್ಲಿ ಆರಂಭಗೊಂಡ ಎಂ ಎಸ್ ಧೋನಿ ಕ್ರಿಕೆಟ್ ಅಕಾಡೆಮಿ, ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಮಾಡಲು ಬಯಸುವ ಮಕ್ಕಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಅತ್ಯುತ್ತಮ ಮೂಲಸೌಕರ್ಯ ಮತ್ತು ವಿಶ್ವ ದರ್ಜೆಯ ತರಬೇತಿ ಸೌಲಭ್ಯಗಳನ್ನು ಹೊಂದಿದೆ,” ಎಂದು ಹೇಳಿದರು.

ಸ್ವತಃ ಮಹೇಂದ್ರ ಸಿಂಗ್ ಧೋನಿ ಅಕಾಡೆಮಿಯ ಮಾರ್ಗದರ್ಶಕರಾಗಿರುವುದರಿಂದ, ಬೆಂಗಳೂರಿನ ಎಲ್ಲಾ ಯುವಜನರಿಗೆ ಕ್ರಿಕೆಟ್ ಮಾಂತ್ರಿಕನಿಂದ ಕಲಿಯಲು ಸಾಧ್ಯ. ಜೊತೆಗೆ ಮೀಸಲಾದ ಅರ್ಹ ತರಬೇತುದಾರರ ತಂಡದಿಂದಲೂ ಕೂಡ ಕಲಿಯಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ನಾವು ಎಂ ಎಸ್ ಡಿ ಸಿ ಎ ಬೆಂಗಳೂರು ಆರಂಭಿಸುವುದರ ಮೂಲಕ ಭಾರತೀಯ ಕ್ರಿಕೆಟ್ ಬೆಳೆಯಲು ಕೊಡುಗೆ ನೀಡಲು ಬಯಸುತ್ತೇವೆ ಎಂದು ಶ್ರೀ ದೀಪಕ್ ಎಸ್. ಭಟ್ನಾಗರ್ ಹೇಳಿದರು.

“ಬೆಂಗಳೂರಿನಲ್ಲಿ ಯುವ ಕ್ರಿಕೆಟಿಗರಿಗೆ ಬಹಳ ಸಂಭ್ರಮದ ದಿನವಿದು. ಈಗ, ಶ್ರೇಷ್ಠ ಕ್ರಿಕೆಟಿಗ, ಮಹೇಂದ್ರ ಸಿಂಗ್ ಧೋನಿಯ ಮಾರ್ಗದರ್ಶನದ ಜೊತೆಗೆ ಅತ್ಯುತ್ತಮ ತರಬೇತುದಾರರಿಂದ ಕ್ರಿಕೆಟ್ ಕಲಿಯಬಹುದು. ಬೆಂಗಳೂರಿನಲ್ಲಿರುವ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಅಕಾಡೆಮಿಗೆ ಕರೆತರಲು ನಾನು ಈ ಮೂಲಕ ಆಹ್ವಾನಿಸುತ್ತೇನೆ” ಎಂದು ಎಂ.ಎಸ್. ಧೋನಿ ಕ್ರಿಕೆಟ್ ಅಕಾಡೆಮಿ ಬೆಂಗಳೂರಿನ ಸಂಯೋಜಕರಾಗಿರುವ ಎಂ. ವಿಶ್ವನಾಥ್ ತಿಳಿಸಿದರು.

ಒಬ್ಬ ಯಶಸ್ವಿ ಕ್ರಿಕೆಟಿಗನಾಗಲು, ಆತ ಆತ್ಮವಿಶ್ವಾಸದಿಂದಿರಬೇಕು, ಒತ್ತಡದಲ್ಲಿ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ವಿವಿಧ ಪರಿಸರಗಳಿಗೆ ಹೊಂದಿಕೊಳ್ಳಬೇಕು ಎಂಬ ನಂಬಿಕೆಯೊಂದಿಗೆ ಎಂ ಎಸ್ ಡಿ ಸಿ ಎ ಕಾರ್ಯನಿರ್ವಹಿಸುತ್ತದೆ. ಕ್ರಿಕೆಟ್ ತಂತ್ರಗಳು ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಆಟದ ಅರ್ಥ ಮತ್ತು ಅಂತಃಪ್ರಜ್ಞೆಯನ್ನು ಸುಧಾರಿಸಲು ಅಕಾಡೆಮಿಯ ತರಬೇತಿ ಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಎಂ ಎಸ್ ಡಿ ಸಿ ಎ ಯ ಗಮನ, ಕೇವಲ ನೆಟ್‌ಗಳಲ್ಲಿ ಪ್ರದರ್ಶನ ನೀಡಲು ಆಟಗಾರರಿಗೆ ಸಹಾಯ ಮಾಡುವುದಲ್ಲ, ಬದಲಿಗೆ ವಾಸ್ತವವಾಗಿ ಆಟದಲ್ಲಿ ಯಶಸ್ವಿಯಾಗಬಲ್ಲ ವ್ಯಕ್ತಿಯಾಗಿ ಅವರನ್ನು ರೂಪಿಸುವುದು. ಹೀಗಾಗಿ ಬೇರೆ ಅಕಾಡೆಮಿಗಿಂತ ಧೋನಿಯ ಕ್ರಿಕೆಟ್ ಅಕಾಡೆಮಿ ಭಿನ್ನವಾಗಿರಲಿದೆ ಎಂದು ಎಂ. ವಿಶ್ವನಾಥ್ ಹೇಳಿದರು.

MSDCA ಅಕಾಡೆಮಿ ವಿಳಾಸ: ಸರ್ವೆ ನಂ. 34, ಕಾಡ ಅಗ್ರಹಾರ, ಬಿದರಹಳ್ಳಿ ಹೋಬಳಿ, ಬೆಂಗಳೂರು

Published On - 7:14 pm, Tue, 12 October 21

Follow Us
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!