AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಸ್ಯಾಮ್ಸನ್ ಅಲ್ಲ, ಗೆಲುವಿಗೆ ಈತ ಕಾರಣ: ಗಂಭೀರ್ ಅಚ್ಚರಿಯ ಹೇಳಿಕೆ

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ವೆಸ್ಟ್ ಇಂಡೀಸ್ ನೀಡಿದ 195 ರನ್​ಗಳ ಗುರಿ ಬೆನ್ನತ್ತಿದ ಭಾರತದ ಪರ ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 97 ರನ್ ಬಾರಿಸಿದ್ದರು. ಈ ಭರ್ಜರಿ ಅರ್ಧಶತಕದ ನೆರವಿನೊಂದಿಗೆ ಭಾರತ ತಂಡ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿದೆ.

ಸಂಜು ಸ್ಯಾಮ್ಸನ್ ಅಲ್ಲ, ಗೆಲುವಿಗೆ ಈತ ಕಾರಣ: ಗಂಭೀರ್ ಅಚ್ಚರಿಯ ಹೇಳಿಕೆ
Gautam Gambhir
ಝಾಹಿರ್ ಯೂಸುಫ್
|

Updated on: Mar 02, 2026 | 11:59 AM

Share

T20 World Cup 2026: ಟಿ20 ವಿಶ್ವಕಪ್ 2026ರ ಸೆಮಿಫೈನಲ್​ಗೆ ಟೀಮ್ ಇಂಡಿಯಾ ಲಗ್ಗೆಯಿಟ್ಟಿದೆ. ಅದು ಸಹ ಬಲಿಷ್ಠ ವೆಸ್ಟ್ ಇಂಡೀಸ್ ಪಡೆಯನ್ನು ಬಗ್ಗು ಬಡಿಯುವ ಮೂಲಕ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಅಜೇಯ 97 ರನ್ ಬಾರಿಸಿದರು. ಈ ಮೂಲಕ 19.2 ಓವರ್​ಗಳಲ್ಲಿ ಭಾರತ ತಂಡವನ್ನು ಗುರಿ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡವು ಟಿ20 ವಿಶ್ವಕಪ್​ನ ಸೆಮಿಫೈನಲ್​ಗೇರಿದೆ.

ಇನ್ನು ಈ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ಭಾರತದ ಗೆಲುವಿಗೆ ಸಂಜು ಸ್ಯಾಮ್ಸನ್ ಮಾತ್ರ ಕಾರಣರಲ್ಲ. ಇತರೆ ಆಟಗಾರರ ಕೊಡುಗೆ ಕೂಡ ಅತ್ಯಮೂಲ್ಯವಾಗಿತ್ತು ಎಂದಿದ್ದಾರೆ.

ಅದರಲ್ಲೂ 19 ನೇ ಓವರ್‌ನಲ್ಲಿ ಶಿವಂ ದುಬೆ ಬಾರಿಸಿದ ಎರಡು ಫೋರ್​ಗಳು ಸಂಜು ಸ್ಯಾಮ್ಸನ್ ಮೇಲಿನ ಅಗಾಧ ಒತ್ತಡವನ್ನು ನಿವಾರಿಸುವಲ್ಲಿ ನಿರ್ಣಾಯಕವಾಗಿದ್ದವು.  ಹಾರ್ದಿಕ್ ಪಾಂಡ್ಯ ಡಾಟ್ ಬಾಲ್‌ಗೆ ಔಟಾದ ನಂತರ 10 ಎಸೆತಗಳಲ್ಲಿ 17 ರನ್‌ಗಳು ಬೇಕಾಗಿದ್ದಾಗ, ದುಬೆ ಅವರ ತಕ್ಷಣದ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದರು.

ಶಿವಂ ದುಬೆ ಅವರ ಈ ನಿರ್ಣಾಯಕ ಪಾತ್ರವು ಪಂದ್ಯವು ಸಂಪೂರ್ಣವಾಗಿ ಭಾರತದ ಪರ ವಾಲುವಂತೆ ಮಾಡಿತು. ಹೀಗಾಗಿ ಟೀಮ್ ಇಂಡಿಯಾದ ಗೆಲುವಿನ ಶ್ರೇಯಸ್ಸು ದುಬೆ ಅವರಿಗೂ ಸಲ್ಲಬೇಕು ಎಂದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.

ಸಾಮಾನ್ಯವಾಗಿ ಪಂದ್ಯ ಮುಗಿದಾಗ ನಾವು ಕೆಲವು ಕೊಡುಗೆಗಳ ಬಗ್ಗೆ ಮಾತ್ರ ಮಾಡುತ್ತೇವೆ. ನನ್ನ ಪ್ರಕಾರ, ಶಿವಂ ಅವರ ಆ ಎರಡು ಫೋರ್​ಗಳು ಸಂಜು ಅವರ 97 ರನ್​​ ಗಳಷ್ಟೇ ಮುಖ್ಯ. ಇದು ತಂಡದ ಆಟ.  ಅಲ್ಲದೆ ಯಾವಾಗಲೂ ತಂಡದ ಆಟವಾಗಿಯೇ ಉಳಿಯುತ್ತದೆ.

ಹೀಗಾಗಿಯೇ ಶಿವಂ ದುಬೆ ಬಾರಿಸಿದ 2 ಫೋರ್​ಗಳು ಸಂಜು ಅವರ ಇನ್ನಿಂಗ್ಸ್‌ನಷ್ಟೇ ಮುಖ್ಯ ದುಬೆ ನಿರ್ಣಾಯಕ ಹಂತದಲ್ಲಿ ಎರಡು ಬೌಂಡರಿಗಳನ್ನು ಬಾರಿಸದೇ ಇದ್ದಿದ್ದರೆ. ನಾವು ಇಂದು ಸಂಜು ಸ್ಯಾಮ್ಸನ್ ಬಗ್ಗೆ ಮಾತನಾಡುತ್ತಿರಲಿಲ್ಲ. ಅವರು ವಿಶೇಷ ಇನಿಂಗ್ಸ್ ಆಡಿದ್ದಾರೆ, ಆ ಸಣ್ಣ ಕೊಡುಗೆಗಳು ಪಂದ್ಯಗಳನ್ನು ಗೆಲ್ಲಲು ನಿಮಗೆ ಸಹಾಯ ಮಾಡುತ್ತವೆ.

ಇದನ್ನೂ ಓದಿ: ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..!

ಇದಾಗ್ಯೂ ದೊಡ್ಡ ಕೊಡುಗೆಗಳು ಸುದ್ದಿಯಾಗುತ್ತವೆ. ಆದರೆ ಸಣ್ಣ ಕೊಡುಗೆಗಳು ತಂಡವನ್ನು ಪಂದ್ಯ ಗೆಲ್ಲಿಸಿಕೊಡುವಲ್ಲಿ ಸಹಾಯ ಮಾಡುತ್ತವೆ. ಹೀಗಾಗಿ ಇಂತಹ ಕೊಡುಗೆಗಳು ಬಹಳ ಮುಖ್ಯ. ಹೀಗಾಗಿಯೇ ಟೀಮ್ ಇಂಡಿಯಾ ಗೆಲುವಿಗೆ ಶಿವಂ ದುಬೆ ಕೂಡ ಕಾರಣಕರ್ತರು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!