AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ವೆಸ್ಟ್ ಇಂಡೀಸ್ ನಂಬರ್ 1 ತಂಡವಾಗಲಿದೆ: ಗೌತಮ್ ಗಂಭೀರ್ ವಿಶ್ವಾಸ

West Indies: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡ ವಿಶ್ವಕಪ್​ನ ಭಾಗವಾಗಿಲ್ಲ. ಅಂದರೆ 1975 ಹಾಗೂ 1979 ರಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ವೆಸ್ಟ್ ಇಂಡೀಸ್ ಕಳೆದ 12 ವಿಶ್ವಕಪ್​ಗಳಲ್ಲಿ ಕಣಕ್ಕಿಳಿದಿತ್ತು.

Gautam Gambhir: ವೆಸ್ಟ್ ಇಂಡೀಸ್ ನಂಬರ್ 1 ತಂಡವಾಗಲಿದೆ: ಗೌತಮ್ ಗಂಭೀರ್ ವಿಶ್ವಾಸ
West Indies-Gautam Gambhir
TV9 Web
| Edited By: |

Updated on: Jul 02, 2023 | 10:10 PM

Share

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಿಂದ ವೆಸ್ಟ್ ಇಂಡೀಸ್ (West Indies) ತಂಡವು ಹೊರಬಿದ್ದಿದೆ. ಝಿಂಬಾಬ್ವೆಯಲ್ಲಿ ನಡೆದ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಮೂರು ಪಂದ್ಯಗಳನ್ನು ಸೋತಿರುವ ಕೆರಿಬಿಯನ್ ತಂಡ ಏಕದಿನ ವಿಶ್ವಕಪ್​ 2023 ಕ್ಕೆ ಅರ್ಹತೆ ಪಡೆಯಲು ವಿಫಲವಾಗಿದೆ. ಇದಾಗ್ಯೂ ವಿಂಡೀಸ್ ಪಡೆ ಕಂಬ್ಯಾಕ್ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್.

ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ನಾನು ವೆಸ್ಟ್ ಇಂಡೀಸ್ ಅನ್ನು ಪ್ರೀತಿಸುತ್ತೇನೆ. ನಾ ವೆಸ್ಟ್ ಇಂಡಿಯನ್ ಕ್ರಿಕೆಟ್ ಅನ್ನು ಇಷ್ಟಪಡುತ್ತೇನೆ. ​ಅವರು ಮತ್ತೆ ವಿಶ್ವ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಲಿದೆ ಎಂದು ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

ಇತ್ತ ವರ್ಷದಿಂದ ವರ್ಷಕ್ಕೆ ಕುಸಿತದತ್ತ ಸಾಗುತ್ತಿರುವ ವೆಸ್ಟ್ ಇಂಡೀಸ್ ತಂಡಕ್ಕೆ ಬೆಂಬಲ ಸೂಚಿಸಿ ಗೌತಮ್ ಗಂಭೀರ್ ಮಾಡಿರುವ ಟ್ವೀಟ್ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಏಕೆಂದರೆ ಕಳೆದ ಐದಾರು ವರ್ಷಗಳಿಂದ ವೆಸ್ಟ್ ಇಂಡೀಸ್ ಯಾವುದೇ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.

ಅದರಲ್ಲೂ ಈ ಬಾರಿಯ ವಿಶ್ವಕಪ್​ ಅರ್ಹತಾ ಸುತ್ತಿನ ಪಂದ್ಯದಲ್ಲಿ ಝಿಂಬಾಬ್ವೆ, ನೆದರ್​ಲ್ಯಾಂಡ್ಸ್ ಹಾಗೂ ಸ್ಕಾಟ್​ಲ್ಯಾಂಡ್ ವಿರುದ್ಧ ಹೀನಾಯವಾಗಿ ಸೋತಿದೆ. ಇದಾಗ್ಯೂ ಗಂಭೀರ್ ಅವರು ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ ಎಂದಿರುವುದು ಎಷ್ಟು ವರ್ಷಗಳ ಬಳಿಕ ಎಂದು ಅನೇಕರು ಕಾಲೆಳೆದಿದ್ದಾರೆ.

ಅಂದಹಾಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡ ವಿಶ್ವಕಪ್​ನ ಭಾಗವಾಗಿಲ್ಲ. ಅಂದರೆ 1975 ಹಾಗೂ 1979 ರಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ವೆಸ್ಟ್ ಇಂಡೀಸ್ ಕಳೆದ 12 ವಿಶ್ವಕಪ್​ಗಳಲ್ಲಿ ಕಣಕ್ಕಿಳಿದಿತ್ತು. ಆದರೆ ಈ ಬಾರಿ ಅರ್ಹತಾ ಸುತ್ತಿನಲ್ಲೇ ನಿರ್ಗಮಿಸುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಇದನ್ನೂ ಓದಿ: IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ತಂಡ ಹೀಗಿದೆ: ಬ್ರಾಂಡನ್ ಕಿಂಗ್ , ಜಾನ್ಸನ್ ಚಾರ್ಲ್ಸ್ , ಶಮರ್ ಬ್ರೂಕ್ಸ್ , ಶಾಯ್ ಹೋಪ್ (ನಾಯಕ) , ನಿಕೋಲಸ್ ಪೂರನ್ , ಕೈಲ್ ಮೇಯರ್ಸ್ , ಕೆವಿನ್ ಸಿಂಕ್ಲೇರ್ , ಜೇಸನ್ ಹೋಲ್ಡರ್ , ರೊಮಾರಿಯೋ ಶೆಫರ್ಡ್ , ಅಕೀಲ್ ಹೋಸೇನ್ , ಅಲ್ಝಾರಿ ಜೋಸೆಫ್, ರೋವ್​ಮನ್ ಪೊವೆಲ್ , ಕೀಸಿ ಕಾರ್ಟಿ , ಯಾನಿಕ್ ಕ್ಯಾರಿಯಾ , ಕೀಮೋ ಪಾಲ್ , ರೋಸ್ಟನ್ ಚೇಸ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ