AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ವಿರಾಟ್ ಕೊಹ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಗಂಭೀರ್

Team India: ಭಾರತ ತಂಡವು ಜುಲೈ 27 ರಿಂದ ಶ್ರೀಲಂಕಾ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಮೊದಲು ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಆಗಸ್ಟ್ 2 ರಿಂದ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಪದಗ್ರಹಣ ಮಾಡಲಿದ್ದಾರೆ. ಹಾಗೆಯೇ ಏಕದಿನ ಸರಣಿ ಮೂಲಕ ವಿರಾಟ್ ಕೊಹ್ಲಿ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Gautam Gambhir: ವಿರಾಟ್ ಕೊಹ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಗಂಭೀರ್
Gautam Gambhir-Virat Kohli
ಝಾಹಿರ್ ಯೂಸುಫ್
|

Updated on: Jul 22, 2024 | 11:14 AM

Share

ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾದ ಬೆನ್ನಲ್ಲೇ ಹುಟ್ಟಿಕೊಂಡ ಪ್ರಶ್ನೆ ಎಂದರೆ ವಿರಾಟ್ ಕೊಹ್ಲಿ ಜೊತೆ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದು. ಇದಕ್ಕೆ ಕಾರಣ ಕೊಹ್ಲಿ-ಗಂಭೀರ್ ಸೇರಿದಂತೆ ಕಂಡು ಬರುವ ವಾಕ್ಸಮರ, ಜಗಳ. ಇದಕ್ಕೆ ಸಾಕ್ಷಿಯಾಗಿ ಹಲವು ಐಪಿಎಲ್​ ಪಂದ್ಯಗಳಿವೆ.  ಇದೀಗ ಗೌತಮ್ ಗಂಭೀರ್ ಅವರ ಕೋಚಿಂಗ್​ನಲ್ಲಿ ಕಣಕ್ಕಿಳಿಯಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಹೊಸ ಅಧ್ಯಾಯ ಶುರುವಾಗಲಿದೆ. ಈ ಅಧ್ಯಾಯಕ್ಕೂ ಮುನ್ನ ಮತ್ತದೇ ಪ್ರಶ್ನೆ ಎದುರಾಗಿದೆ.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರಿಗೆ ವಿರಾಟ್ ಕೊಹ್ಲಿ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆ ಕೇಳಿ ಬರುತ್ತಿದ್ದಂತೆ ಗಂಭೀರ್ ಕೆಲ ಕ್ಷಣ ವಿಚಲಿತರಾದರು. ಅಲ್ಲದೆ ತುಸು ಖಾರವಾಗಿಯೇ ಉತ್ತರ ನೀಡಿದರು.

ನನ್ನ ಹಾಗೂ ವಿರಾಟ್ ಕೊಹ್ಲಿ ನಡುವೆ ಸಂಬಂಧ ಸರಿಯಿಲ್ಲ ಎಂಬುದು ಕೇವಲ ವದಂತಿಗಳು ಅಷ್ಟೇ. ಇದೆಲ್ಲಾ ಟಿಆರ್​ಪಿಗಾಗಿ ಒಳ್ಳೆಯದು. ಆದರೆ ನನ್ನ ಹಾಗೂ ಕೊಹ್ಲಿ ನಡುವೆ ಉತ್ತಮ ಸಂಬಂಧವಿದೆ. ನಾವಿಬ್ಬರೂ 140 ಕೋಟಿ ಭಾರತೀಯರನ್ನು ಪ್ರತಿನಿಧಿಸುತ್ತಿದ್ದೇವೆ ಎಂಬುದು ಮುಖ್ಯವಾಗುತ್ತದೆ ಎಂದು ಗಂಭೀರ್ ಹೇಳಿದ್ದಾರೆ.

ನಾವಿಬ್ಬರು ಸಂದೇಶಗಳನ್ನು ಹಂಚಿಕೊಂಡಿದ್ದೇವೆ. ನಾನು ಕೋಚ್ ಆಗುವ ಮುನ್ನ ಅಥವಾ ಆದ ಬಳಿಕ ಚಾಟ್ ಮಾಡಿದ್ದೇವೆಯೇ ಎಂಬುದು ಇಲ್ಲಿ ಮುಖ್ಯವಲ್ಲ. ವಿರಾಟ್ ಕೊಹ್ಲಿ ವಿಶ್ವ ದರ್ಜೆಯ ಆಟಗಾರ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಹೀಗಾಗಿ ನನ್ನ ಹಾಗೂ ಕೊಹ್ಲಿ ನಡುವಣ ಸಂಬಂಧ ಸರಿಯಿಲ್ಲ ಎಂಬುದು ಕೇವಲ ಊಹಪೋಹ ಅಷ್ಟೇ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಶ್ರೀಲಂಕಾ ಸರಣಿಯಲ್ಲಿ ಗೌತಿ-ಕೊಹ್ಲಿ:

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. 2016 ರವರೆಗೆ ವಿರಾಟ್ ಕೊಹ್ಲಿ ಗಂಭೀರ್ ಜೊತೆಯಾಗಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇದೀಗ ಗಂಭೀರ್ ಕೋಚ್ ಆಗಿ ಕಾಣಿಸಿಕೊಳ್ಳುತ್ತಿದ್ದರೆ, ಕೊಹ್ಲಿ ಆಟಗಾರನಾಗಿ ಭಾರತದ ಪರ ಕಣಕ್ಕಿಳಿಯಲಿದ್ದಾರೆ.

ಅದರಂತೆ ಶ್ರೀಲಂಕಾ ವಿರುದ್ಧ ಆಗಸ್ಟ್ 2 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಜೊತೆಗೂಡುವಿಕೆಯೊಂದಿಗೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಇರಾದೆಯಲ್ಲಿದ್ದಾರೆ ಗೌತಮ್ ಗಂಭೀರ್.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ವೇಳಾಪಟ್ಟಿ:

  1. ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
  2. ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
  3. ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು