AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ವಿರಾಟ್ ಕೊಹ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಗಂಭೀರ್

Team India: ಭಾರತ ತಂಡವು ಜುಲೈ 27 ರಿಂದ ಶ್ರೀಲಂಕಾ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಮೊದಲು ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಆಗಸ್ಟ್ 2 ರಿಂದ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಪದಗ್ರಹಣ ಮಾಡಲಿದ್ದಾರೆ. ಹಾಗೆಯೇ ಏಕದಿನ ಸರಣಿ ಮೂಲಕ ವಿರಾಟ್ ಕೊಹ್ಲಿ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Gautam Gambhir: ವಿರಾಟ್ ಕೊಹ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಗಂಭೀರ್
Gautam Gambhir-Virat Kohli
ಝಾಹಿರ್ ಯೂಸುಫ್
|

Updated on: Jul 22, 2024 | 11:14 AM

Share

ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾದ ಬೆನ್ನಲ್ಲೇ ಹುಟ್ಟಿಕೊಂಡ ಪ್ರಶ್ನೆ ಎಂದರೆ ವಿರಾಟ್ ಕೊಹ್ಲಿ ಜೊತೆ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದು. ಇದಕ್ಕೆ ಕಾರಣ ಕೊಹ್ಲಿ-ಗಂಭೀರ್ ಸೇರಿದಂತೆ ಕಂಡು ಬರುವ ವಾಕ್ಸಮರ, ಜಗಳ. ಇದಕ್ಕೆ ಸಾಕ್ಷಿಯಾಗಿ ಹಲವು ಐಪಿಎಲ್​ ಪಂದ್ಯಗಳಿವೆ.  ಇದೀಗ ಗೌತಮ್ ಗಂಭೀರ್ ಅವರ ಕೋಚಿಂಗ್​ನಲ್ಲಿ ಕಣಕ್ಕಿಳಿಯಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಹೊಸ ಅಧ್ಯಾಯ ಶುರುವಾಗಲಿದೆ. ಈ ಅಧ್ಯಾಯಕ್ಕೂ ಮುನ್ನ ಮತ್ತದೇ ಪ್ರಶ್ನೆ ಎದುರಾಗಿದೆ.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರಿಗೆ ವಿರಾಟ್ ಕೊಹ್ಲಿ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆ ಕೇಳಿ ಬರುತ್ತಿದ್ದಂತೆ ಗಂಭೀರ್ ಕೆಲ ಕ್ಷಣ ವಿಚಲಿತರಾದರು. ಅಲ್ಲದೆ ತುಸು ಖಾರವಾಗಿಯೇ ಉತ್ತರ ನೀಡಿದರು.

ನನ್ನ ಹಾಗೂ ವಿರಾಟ್ ಕೊಹ್ಲಿ ನಡುವೆ ಸಂಬಂಧ ಸರಿಯಿಲ್ಲ ಎಂಬುದು ಕೇವಲ ವದಂತಿಗಳು ಅಷ್ಟೇ. ಇದೆಲ್ಲಾ ಟಿಆರ್​ಪಿಗಾಗಿ ಒಳ್ಳೆಯದು. ಆದರೆ ನನ್ನ ಹಾಗೂ ಕೊಹ್ಲಿ ನಡುವೆ ಉತ್ತಮ ಸಂಬಂಧವಿದೆ. ನಾವಿಬ್ಬರೂ 140 ಕೋಟಿ ಭಾರತೀಯರನ್ನು ಪ್ರತಿನಿಧಿಸುತ್ತಿದ್ದೇವೆ ಎಂಬುದು ಮುಖ್ಯವಾಗುತ್ತದೆ ಎಂದು ಗಂಭೀರ್ ಹೇಳಿದ್ದಾರೆ.

ನಾವಿಬ್ಬರು ಸಂದೇಶಗಳನ್ನು ಹಂಚಿಕೊಂಡಿದ್ದೇವೆ. ನಾನು ಕೋಚ್ ಆಗುವ ಮುನ್ನ ಅಥವಾ ಆದ ಬಳಿಕ ಚಾಟ್ ಮಾಡಿದ್ದೇವೆಯೇ ಎಂಬುದು ಇಲ್ಲಿ ಮುಖ್ಯವಲ್ಲ. ವಿರಾಟ್ ಕೊಹ್ಲಿ ವಿಶ್ವ ದರ್ಜೆಯ ಆಟಗಾರ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಹೀಗಾಗಿ ನನ್ನ ಹಾಗೂ ಕೊಹ್ಲಿ ನಡುವಣ ಸಂಬಂಧ ಸರಿಯಿಲ್ಲ ಎಂಬುದು ಕೇವಲ ಊಹಪೋಹ ಅಷ್ಟೇ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಶ್ರೀಲಂಕಾ ಸರಣಿಯಲ್ಲಿ ಗೌತಿ-ಕೊಹ್ಲಿ:

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. 2016 ರವರೆಗೆ ವಿರಾಟ್ ಕೊಹ್ಲಿ ಗಂಭೀರ್ ಜೊತೆಯಾಗಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇದೀಗ ಗಂಭೀರ್ ಕೋಚ್ ಆಗಿ ಕಾಣಿಸಿಕೊಳ್ಳುತ್ತಿದ್ದರೆ, ಕೊಹ್ಲಿ ಆಟಗಾರನಾಗಿ ಭಾರತದ ಪರ ಕಣಕ್ಕಿಳಿಯಲಿದ್ದಾರೆ.

ಅದರಂತೆ ಶ್ರೀಲಂಕಾ ವಿರುದ್ಧ ಆಗಸ್ಟ್ 2 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಜೊತೆಗೂಡುವಿಕೆಯೊಂದಿಗೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಇರಾದೆಯಲ್ಲಿದ್ದಾರೆ ಗೌತಮ್ ಗಂಭೀರ್.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ವೇಳಾಪಟ್ಟಿ:

  1. ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
  2. ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
  3. ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್